ಸ್ಕೂಟಿ – ಲಾರಿ ಅಪಘಾತ ಸ್ಕೂಟಿ ಚಾಲಕ ಮೃತ್ಯು

Sunday, September 13th, 2020
scooty accident

ಬೆಳ್ತಂಗಡಿ : ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ ಗಿರೀಶ್‌ ಮೂಲ್ಯ ಎಂದು ಗುರುತಿಸಲಾಗಿದೆ. ಲಾರಿಯು ಅಳದಂಗಡಿ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಸ್ಕೂಟಿ ಚಾಲಕ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯದಲ್ಲಿ ಭಾರಿ ಗಾಳಿ ಮಳೆ : ಮರ ಬಿದ್ದು ಕಾರು ಸ್ಕೂಟಿ ಜಖಂ

Thursday, November 7th, 2019
car

ಸುಳ್ಯ : ಬುಧವಾರ ಸಂಜೆ ಸುರಿದ ಗುಡುಗು ಸಹಿತ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ- ಪಂಜ ನಡುವಿನ ಬಳ್ಪ ಸಮೀಪದ ಎಣ್ಣೆಮಜಲು ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಳ್ಯ, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸಾಯಂಕಾಲ ಸುಮಾರು 6 ಗಂಟೆಯಿಂದ ಸಿಡಿಲು-ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಈ ವೇಳೆ ಬಳ್ಪದ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ದನ ಎಂಬವರ ಕಾರಿನ […]