ಮಂಗಳೂರು ಸ್ಮಾರ್ಟ್ ಸಿಟಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Wednesday, November 24th, 2021
ACB raid

ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಆರೋಪ ಹೊತ್ತಿರುವ ಮಂಗಳೂರು ಸ್ಮಾರ್ಟ್ ಸಿಟಿ ಅಧಿಕಾರಿಯಾಗಿರುವ ಕೆ.ಎಸ್.ಲಿಂಗೇಗೌಡ ಅವರ ಮನೆ ಮೇಲೆ ಇಂದು ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉರ್ವದಲ್ಲಿರುವ ಲಿಂಗೇ ಗೌಡ ಮನೆಗೆ ಇಂದು ಬೆಳಗ್ಗೆ ದಾಳಿ ಮಾಡಿದ ಏಳು ಮಂದಿ ಎಸಿಬಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿದ್ದ  ಅವರು ಹಲವು ವರ್ಷಗಳಿಂದ ಮಂಗಳೂರಿನಲ್ಲೇ ಬೇರೆ ಬೇರೆ ಹುದ್ದೆಯಲ್ಲಿ  ಸೇವೆ ನಿರ್ವಹಿಸಿದ್ದರು, ಲಿಂಗೇಗೌಡರ ವಿರುದ್ಧ […]