ಸ್ವಾಮಿ ವಿವೇಕಾನಂದ ಶಾಖೆ ಮಜಲೋಡಿ ಮಿಜಾರು ಬಂಟ್ವಾಳ ಇದರ ಅಧ್ಯಕ್ಷರಾಗಿ ಉಮೇಶ್ ಮಜಲೋಡಿ ಆಯ್ಕೆ

Wednesday, July 27th, 2016
Umesh-majalody

ಬಂಟ್ವಾಳ: ಸ್ವಾಮಿ ವಿವೇಕಾನಂದ ಶಾಖೆ ಮಜಲೋಡಿ ಮಿಜಾರು ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಉಮೇಶ್ ಮಜಲೋಡಿ ಆಯ್ಕೆಯಾಗಿದ್ದಾರೆ. ಗೌರವಧ್ಯಾಕ್ಷರಾಗಿ ಚಿದಾನಂದ ಕುಜ್ಲುಬೆಟ್ಟು, ಗೌರವ ಸಲಹೆಗಾರರಾಗಿ ಗೋಪಾಲ ಮಜಲೋಡಿ, ಕಾರ‍್ಯದರ್ಶಿಯಾಗಿ ಪ್ರವೀಣ್ ಕೆಲ್ದೋಡಿ ಇವರನ್ನು ಶಾಖೆಯ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು. ಈ ಸಂದರ್ಭ ಹಿಂದೂ ಯುವಸೇನೆ ಬಂಟ್ವಾಳ ತಾಲೂಕು ಘಟಕದ ಪ್ರಧಾನ ಕಾರ‍್ಯದರ್ಶಿ ವಸಂತ ಕುಮಾರ್ ಕೊಂಗ್ರಬೆಟ್ಟು, ಪ್ರಮುಖರಾದ ರಾಮಚಂದ್ರ ಗೌಡ, ನವೀನ್ ಮಣಿಹಳ್ಳ, ಯೋಗೀಶ್ ಕೇಲ್ದೋಡಿ, ಹರೀರ್ಶ ಮಜಲೋಡಿ ಹಾಗೂ ಶಾಖೆಯ ಸದಸ್ಯರುಗಳು ಉಪಸ್ಥಿತರಿದ್ದರು.

ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Friday, February 5th, 2016
Chigurupade Temple

ಮಂಜೇಶ್ವರ : ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವವು ಫೆಬ್ರವರಿ 11ನೇ ಗುರುವಾರ ವಿವಿಧ ವೈದಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಬೆಳಿಗ್ಗೆ ಗಂಟೆ 7ರಿಂದ ಉಷಃಕಾಲ ಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಏಕಾದಶರುದ್ರಾಭಿಷೇಕ, ಮಧ್ಯಾಹ್ನ12ರಿಂದ ಮಹಾಪೂಜೆ, ಶ್ರೀದೇವರಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ ಗಂಟೆ ೮ಕ್ಕೆ ರಂಗಪೂಜೆ ,9ರಿಂದ ಭೂತಬಲಿ ಉತ್ಸವ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಜರಗಲಿದೆ. […]