ಒಂದೂವರೆ ತಿಂಗಳ ಹೆಣ್ಣು ಮಗು ವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ತಾಯಿ

Tuesday, September 12th, 2023
infant killed

ಕಾಸರಗೋಡು : ಹೆಣ್ಣು ಮಗು ವನ್ನು ತಾಯಿಯೊಬ್ಬಳು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮಗು ಮೃತ ಪಟ್ಟವಳು. ತಾಯಿ ಮತ್ತು ಮಗು ನಾಪತ್ತೆ ಯಾದುದರಿಂದ ಮನೆ ಯವರು ಶೋಧ ನಡೆಸಿದಾಗ ತಾಯಿ ಯನ್ನು ಮನೆಯ ಅಲ್ಪ ದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು. ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ […]

ಗೌರಿ ಲಂಕೇಶ ಹತ್ಯೆಯ ದೋಷಾರೋಪಿಗಳಿಗೆ ಕೋಕಾ ಕಾಯಿದೆ ಮತ್ತು ಹಿಂದೂ ಸಂಘಟಕರನ್ನು ಹತ್ಯೆ ಮಾಡಿದವರಿಗೆ ಜಾಮೀನು : ಪ್ರಮೋದ ಮುತಾಲಿಕ್

Wednesday, September 1st, 2021
Pramod Muthalika

ಮಂಗಳೂರು  : ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಅಮಾಯಕರು ಮತ್ತು ಅವರ ಹಿಂದೆ ಯಾವುದೇ ಅಪರಾಧದ ಹಿನ್ನೆಲೆ ಇಲ್ಲ. ಇಂತಹ ಮುಗ್ಧ ಜನರ ಮೇಲೆ ಅನ್ಯಾಯವಾಗಿ ಭಯೋತ್ಪಾದನಾ ಚಟುವಟಿಕೆಗಳಿಗೆ ಹಾಕುವ ಕೋಕಾ ಕಾಯಿದೆಗಳನ್ನು ಹಾಕಲಾಗಿದೆ. ಆದರೆ ನಿಜವಾಗಿ ಭಯೋತ್ಪಾದನೆ ಕೃತ್ಯ ಮಾಡುವ, ದಂಗೆ ಮಾಡುವ, ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಮತಾಂಧ ಪಿ.ಎಫ್.ಐ ಸಂಘಟನೆಯ ಮೇಲೆ ಕಠಿಣ ಕಾಯಿದೆ ಹಾಕದೇ ಇದ್ದ ಕಾರಣ ಅವರು ರಾಜಾರೋಷವಾಗಿ ತಿರುಗುತ್ತಿದ್ದಾರೆ. ಗೌರಿ ಪ್ರಕರಣದಲ್ಲಿ ವಿಶೇಷ ತನಿಖಾ ದಳ […]

ದುಷ್ಕರ್ಮಿಗಳ ತಂಡದಿಂದ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ

Thursday, June 24th, 2021
Rekha--Kadiresh

ಬೆಂಗಳೂರು  : ದುಷ್ಕರ್ಮಿಗಳ ತಂಡವೊಂದು ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಒಬ್ಬರನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಡಾ ಘಟನೆ    ಗುರುವಾರ ನಡೆದಿದೆ. ಛಲವಾದಿಪಾಳ್ಯದ 138ನೇ ವಾರ್ಡ್ನ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆಯಾದ ದುರ್ದೈವಿ. ಪತಿ ಕದಿರೇಶ್ ಅವರನ್ನು ಮನೆ ಸಮೀಪದ ಮುನೇಶ್ವರ ದೇವಸ್ಥಾನದ ಬಳಿ 2018ರ ಫೆಬ್ರವರಿ 8ರಂದು ಆಟೋದಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಕದಿರೇಶ್ರ ಸಹೋದರರು ಮತ್ತು ಸಾರ್ವಜನಿಕರ ಕಣ್ಣೆದುರಲ್ಲೇ ಈ ಹತ್ಯೆ ನಡೆದಿತ್ತು. ಬೆಳಗ್ಗೆ ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ನ ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ […]

ಮಗಳನ್ನು ತಂದೆಯೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ

Saturday, June 19th, 2021
gayatri

ಮೈಸೂರು: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ತನ್ನ ತಂದೆಗೆ ಊಟ ಕೊಂಡುಹೋಗಿದ್ದ ಮಗಳನ್ನು ತಂದೆಯೇ  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. ಗಾಯತ್ರಿ (19) ಕೊಲೆಯಾದ ಯುವತಿ. ತಂದೆ ಜಯರಾಂನಿಂದಲೇ ಮರ್ಯಾದೆ ಹತ್ಯೆಯಾಗಿದೆ. ಮಗಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದು, ಇದರಿಂದ ಸಮಾಜದಲ್ಲಿ ತಲೆತಗ್ಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆನ್ನಲಾಗಿದೆ. ಈ ವಿಷಯವಾಗಿ ಒಂದು ತಿಂಗಳಿನಿಂದ ಮನೆಯಲ್ಲಿ ಪೋಷಕರು ಮತ್ತು ಯುವತಿಯ ನಡುವೆ ಗಲಾಟೆ ನಡೆಯುತ್ತಿತ್ತು. ಈಕೆ ಪಟ್ಟಣದ ಉಪ್ಪಾರಗೇರಿ ಬಡಾವಣೆಯ ಯುವಕನನ್ನು […]

ತಮ್ಮದೇ ಮಗನಿಂದ ಮಂಗಳೂರು ಮೂಲದ ದಂಪತಿ ನ್ಯೂಜಿಲ್ಯಾಂಡ್​​ನಲ್ಲಿ ಹತ್ಯೆ

Friday, April 2nd, 2021
sheel

ಮಂಗಳೂರು: ಮಂಗಳೂರು ಮೂಲದ ದಂಪತಿಯು ನ್ಯೂಜಿಲ್ಯಾಂಡ್ನಲ್ಲಿ ತಮ್ಮದೇ ಮಗನಿಂದ  ಭೀಕರವಾಗಿ ಹತ್ಯೆಗೊಳಗಾಗಿರುವ ಘಟನೆ ನಡೆದಿದೆ. ನಗರದ ಬಲ್ಮಠ ನಿವಾಸಿಗಳಾಗಿರುವ ಎಲ್ಸಿ ಬಂಗೇರ ಮತ್ತು‌ ಹರ್ಮನ್ ಬಂಗೇರ ಹತ್ಯೆಗೀಡಾದವರು. ಅವರ ಪುತ್ರ ಶೀಲ್(23) ಹತ್ಯೆ ಮಾಡಿದವನೆಂದು ಆರೋಪಿಸಲಾಗಿದ್ದು, ಪೊಲೀಸರು ಆತನನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಶೀಲ್ ಇತ್ತೀಚಿನ ದಿನಗಳಲ್ಲಿ ಹೆತ್ತವರಿಂದ ದೂರ ಇರಲು ಪ್ರಯತ್ನಿಸಿ, ತನ್ನಿಚ್ಛೆಯಂತೆ ಬದುಕಲು ಅಭಿಲಾಷೆ ಹೊಂದಿದ್ದನು. ಈ ಹಿನ್ನೆಲೆಯಲ್ಲಿ ಹೆತ್ತವರೊಂದಿಗೆ ಜಗಳ ಮಾಡುತ್ತಿದ್ದನು. ಕಳೆದ ಶುಕ್ರವಾರ ಕೂಡಾ ಇದೇ ಕಾರಣಕ್ಕಾಗಿ ಜಗಳ ಮಾಡಿ ಹೆತ್ತ ತಾಯಿ […]

ಕಲಿಯುಗ ಅಂತ್ಯವಾಗುತ್ತದೆ ಎಂದು ಇಬ್ಬರು ಹೆಣ್ಣುಮಕ್ಕಳನ್ನು ಬಲಿಕೊಟ್ಟ ಶಿಕ್ಷಕ ದಂಪತಿಗಳು

Monday, January 25th, 2021
chituru

ಚಿತ್ತೂರು : ಕಲಿಯುಗ ಕೊನೆಗೊಂಡು ಸತ್ಯಯುಗದ ಆರಂಭ ವಾಗುತ್ತದೆ ಎಂದು ದಂಪತಿಗಳು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಡಂಬಲ್ಸ್ ಎಂದು ಶಂಕಿಸಲಾಗಿರುವ ಮೊಂಡಾದ ಆಯುಧದಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಶಿಕ್ಷಕರಾಗಿರುವ ಪದ್ಮಜಾ ಮತ್ತು ಪುರುಷೋತ್ತಮ್ ನಾಯ್ಡು ಎಂಬ ದಂಪತಿಗಳು ಈ ಕೃತ್ಯ ಎಸಗಿದ್ದು ಈ ಇಬ್ಬರೂ ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ. ಪದ್ಮಜಾ ಖಾಸಗಿ ಶಾಲೆಯಲ್ಲಿ ಉಪಪ್ರಾಂಶುಪಾಲೆಯಾಗಿದ್ದರೆ, ಪುರುಷೋತ್ತಮ್ ಸರ್ಕಾರಿ ಶಾಲೆಯೊಂದರಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದನು. ಚಿತ್ತೂರು ಜಿಲ್ಲೆಯ ಶಿವ ನಗರದ ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್ ಇವರು […]

ಕುದ್ರೋಳಿ ಸಮೀಪ ಮೆಹೆಂದಿ ಕಾರ್ಯಕ್ರಮಕ್ಕೆ ಬಂದಿದ್ದ ರೌಡಿ ಶೀಟರ್ ಹತ್ಯೆ

Thursday, November 26th, 2020
Indrajeet

ಮಂಗಳೂರು : ರೌಡಿ ಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕುದ್ರೋಳಿ ಸಮೀಪದ ಕರ್ನಲ್‌ ಗಾರ್ಡನ್ ಬಳಿ ನಡೆದಿದೆ. ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾದ ವ್ಯಕ್ತಿ ಎಂದು  ತಿಳಿದುಬಂದಿದೆ. ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಈತನ ಮೇಲೆ ತಲವಾರ್‌ ದಾಳಿ ನಡೆದಿತ್ತು ಎಂಬ ಮಾಹಿತಿ ಲಭಿಸಿದೆ. ಬುಧವಾರ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಗುರುವಾರ […]

ಚೆನ್ನ ಫಾರೂಕ್ ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಬಂಧನ

Saturday, November 7th, 2020
Chenne Farooq

ಬಂಟ್ವಾಳ :  ಚೆನ್ನ ಫಾರೂಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್ ಐ ಅವಿನಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಸಮೀಪದಿಂದ ಬಂಧಿಸಿದ್ದಾರೆ. ತೊಕ್ಕೊಟ್ಟುವಿನಲ್ಲಿ ವಾಸವಾಗಿರುವ ಹಫೀಸ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಬಂಧಿತ ಆರೋಪಿಗಳು. ಮೆಲ್ಕಾರ್ ಸಮೀಪ ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಗುರುವಾರ ಸಂಜೆ ಬಂಧಿಸಿದೆ. ಮೂಲತಃ ನಂದಾವರ ನಿವಾಸಿ […]

ಮೇಲ್ಕಾರ್​​​​​ನ ಗುಡ್ಡೆಯಂಗಡಿ ಬಳಿ ಮಾರಕಾಸ್ತ್ರಗಳಿಂದ ಇರಿದು ರೌಡಿ ಶೀಟರ್ ಹತ್ಯೆ

Friday, October 23rd, 2020
Farooq

ಬಂಟ್ವಾಳ: ಶುಕ್ರವಾರ ಸಂಜೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲ್ಕಾರ್ನ ಗುಡ್ಡೆಯಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ನಡೆಸಲಾಗಿದೆ. ರೌಡಿ ಶೀಟರ್ ಉಮ್ಮರ್ ಫಾರೂಕ್ ಅಲಿಯಾಸ್ ಚೆನ್ನಾ ಫಾರೂಕ್ (32)  ಎಂಬಾತನನ್ನು ಗುಂಪೊಂದು ಹತ್ಯೆ ಮಾಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಬೈಕಿನಲ್ಲಿ ಹೋಗುತ್ತಿದ್ದ ಫಾರೂಕ್ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡ ಫಾರೂಕ್ ಕೊನೆಯುಸಿರೆಳೆದಿದ್ದಾನೆ. ರೌಡಿಶೀಟರ್ ಫಾರೂಕ್ ಯಾನೆ ಚೆನ್ನ ಫಾರೂಕ್ ಎಂಬಾತನನ್ನು ಆತನ ಸೇಹಿತನೇ ಕೊಲೆ ಮಾಡಿದ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ […]

ನಾಲ್ವರು ಸಂಭಂದಿಕರನ್ನು ನೇಣು ಹಾಕಿ ಹತ್ಯೆಗೈದ ವ್ಯಕ್ತಿ

Monday, August 3rd, 2020
Udaya

ಮಂಜೇಶ್ವರ : ವ್ಯಕ್ತಿಯೊಬ್ಬ ತನ್ನ ನಾಲ್ವರು ಸಂಭಂದಿಕರನ್ನು ನೇಣು ಹಾಕಿ ಹತ್ಯೆಗೈದ ಭೀಕರ ಘಟನೆ ಮಂಜೇಶ್ವರ ಸಮೀಪದ ಬಾಯಾರು ಸುದೆಂಬಳ ಗುರುಕುಮೇರಿ ಎಂಬಲ್ಲಿ ಆಗಸ್ಟ್ 3 ರ ಸೋಮವಾರ ಸಂಜೆ 7 ಗಂಟೆಗೆ  ನಡೆದಿದೆ. ಉದಯ ಎಂಬಾತ ತನ್ನ ಸಂಭಂದಿಕರಾದ ಸದಾಶಿವ (54), ವಿಠ್ಠಲ (52), ಬಾಬು (50) ಮತ್ತು ದೇವಕಿ (58) ನೇಣು ಹಾಕಿ ಹತ್ಯೆಗೈದ ಆರೋಪಿಯಾಗಿದ್ದಾನೆ. ಕೌಟುಂಬಿಕ ಕಲಹವನ್ನು ಅನುಸರಿಸಿ ಈ ಘಟನೆ ನಡೆದಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಾಸರಗೋಡು  ಡಿಎಸ್‌ಪಿ ಬಾಲಕೃಷ್ಣನ್ […]