ಶಿರಾ ಬಳಿ ಭೀಕರ ಸರಣಿ ಅಪಘಾತ… ಬಸ್ ಚಾಲಕ ಸಾವು

Friday, July 13th, 2018
accident

ತುಮಕೂರು: ಲಾರಿ, ಕೆಎಸ್ಆರ್ಟಿಸಿ ಬಸ್, ಖಾಸಗಿ ಬಸ್ ನಡುವೆ ಸರಣಿ ಡಿಕ್ಕಿ ಸಂಭವಿಸಿ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ ಹೆಚ್ಚುವರಿ ಚಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬುವನಹಳ್ಳಿ ಬಳಿ ನಡೆದಿದೆ. ಮೃತ ಚಾಲಕನನ್ನು ಹನುಮಂತರಾಯಪ್ಪ ಎಂದು ಗುರುತಿಸಲಾಗಿದೆ. ಟೈರ್ ಬ್ಲಾಸ್ಟ್ ಆಗಿ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಡಿಕ್ಕಿ ಹೊಡೆದಿದೆ. ಇದೇ ವೇಳೆ ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. […]