ನಾಲ್ವರು ಗೆಳೆಯರೊಂದಿಗೆ ಈಜಲು ತೆರಳಿದ ಬಾಲಕನೊಬ್ಬ ನೀರುಪಾಲು..!

Monday, September 3rd, 2018
died

ಮಂಗಳೂರು: ನಾಲ್ವರು ಗೆಳೆಯರೊಂದಿಗೆ ಈಜಲು ತೆರಳಿದ ಬಾಲಕನೊಬ್ಬ ಗೆಳೆಯರೆದುರೇ ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಎರುಕಡಪು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಹರಿಪ್ರಸಾದ್(18) ಮೃತ ಬಾಲಕ. ಮೃತ ಬಾಲಕ ಗೇರುಕಟ್ಟೆ ನಿವಾಸಿಯಾಗಿದ್ದು, ಗೆಳೆಯರೊಂದಿಗೆ‌ ನದಿಯಲ್ಲಿ ಜತೆಯಾಗಿ ಈಜಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಗೆಳೆಯ ನೀರಿಗೆ ಬಿದ್ದು ಸಾವನ್ನಪ್ಪಿರುವ ವಿಚಾರವನ್ನು ಈತನ ಜೊತೆ ಹೋಗಿದ್ದ ನಾಲ್ಕು ಬಾಲಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ […]

ಅತೃಪ್ತ ನಾಯಕ ಮಿಥುನ್ ರೈ ಅವರಿಗೆ ಲೋಕಸಭೆ ಟಿಕೆಟ್ ಸಂಭವ… ಕಾಂಗ್ರೆಸ್ ನಿಂದ ಆಫರ್!

Friday, April 20th, 2018
mithun-rai

ಮಂಗಳೂರು: ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ಎಂದು ಬಿಂಬಿತರಾಗಿದ್ದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊನೆಗೂ ನಿರಾಸೆಯಾಗಿದೆ. ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅಭಯಚಂದ್ರ ಜೈನ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಮೂಡಬಿದಿರೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ವಚನಭ್ರಷ್ಟತೆ ಆರೋಪ ಎದುರಿಸುತ್ತಿರುವ ಜೈನ್‌ ಈಗಾಗಲೇ ಯುವ ಕಾಂಗ್ರೆಸ್ ನಾಯಕರ ವಿರೋಧ ಕಟ್ಟಿಕೊಳ್ಳಬೇಕಾಗಿದೆ. ಕಳೆದ ಎರಡು ವರ್ಷಗಳಿಂದ ಅಭ್ಯರ್ಥಿಯನ್ನಾಗಿ ಬಿಂಬಿಸಿ ಸಾಕಷ್ಟು ಖರ್ಚು ಮಾಡಿಸಿ ಈಗ ನಡುನೀರಿನಲ್ಲಿ ಕೈಬಿಟ್ಟ ಪರಿಸ್ಥಿತಿಯನ್ನು ಮಿಥುನ್ ರೈ ಎದುರಿಸುತ್ತಿದ್ದಾರೆ. […]