ಸರ್ಕಾರಿ ಬಸ್‌ ಕಾರಿಗೆ ಢಿಕ್ಕಿ :ನಾಲ್ವರು ಗಂಭೀರ

Friday, January 26th, 2018
car-accident

ಪುತ್ತೂರು :ಇಲ್ಲಿದ ಕಬಕ ಬಳಿಯ ಪೋಳ್ಯದಲ್ಲಿ ರಾಜಹಂಸ ಬಸ್ಸೊಂದು ಐ20 ಕಾರಿಗೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಬಸ್‌ ಮತ್ತು ಮಂಗಳೂರಿನಿಂದ ಬರುತ್ತಿದ್ದ ಕಾರು ಮುಖಾಮುಖೀ ಢಿಕ್ಕಿಯಾಗಿ ನಜ್ಜುಗುಜ್ಜಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ ಚಾಲಕನ ಅಜಾಗರುಕತೆಯೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಹೊರತೆಗೆಯಲು ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು. ಅಫಘಾತ ಸ್ಥಳದಲ್ಲಿ ಯಾರೂ ಇಲ್ಲದ […]