ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ ಬಸವರಾಜ ಬೊಮ್ಮಾಯಿ ಕರ್ನಾಟಕ ಮುಖ್ಯಮತ್ರಿಯಾಗಿ ನೇಮಕ

Tuesday, July 27th, 2021
Basavaraja-Bommai

ಬೆಂಗಳೂರು : ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಸಭೆಯ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದನ್ನು ಬಿಜೆಪಿ ನಾಯಕರು ಘೋಷಿಸಿದ್ದಾರೆ. 2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಎಸ್ಆರ್ ಬೊಮ್ಮಾಯಿ-ಚೆನ್ನಮ್ಮ ಅವರ ಪುತ್ರ. 1960 ರ ಜ.28 ರಂದು ಜನಿಸಿದ […]

ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ ಉದಾಸಿ ನಿಧನ

Tuesday, June 8th, 2021
CM Udasi

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ (81 )ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಚಿಕಿತ್ಸೆ ಪಡೆಯುತ್ತಿದ್ದರು. ಸಿ.ಎಂ ಉದಾಸಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳ ಕೊನೆಯ ವಾರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆರು ಬಾರಿ ಶಾಸಕರಾಗಿ ಗೆದ್ದಿದ್ದ ಉದಾಸಿ 2013 ಮತ್ತು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ನಾಳೆ ಹಾವೇರಿಯ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು […]