60ಕ್ಕೂ ಹೆಚ್ಚು ಮಂಗಗಳಿಗೆ ವಿಷಾಹಾರ ಹಾಕಿ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದ ದುಷ್ಕರ್ಮಿಗಳು

Thursday, July 29th, 2021
monkeys

ಹಾಸನ: ವಿಷಾಹಾರ ಸೇವಿಸಿದ ಸುಮಾರು 60ಕ್ಕೂ ಹೆಚ್ಚು ಮಂಗಗಳನ್ನು ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಸಕಲೇಶಪುರದ ಬೇಗೂರು ಕ್ರಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 60ಕ್ಕೂ ಹೆಚ್ಚು ಚೀಲಗಳಲ್ಲಿ ಮಂಗಗಳನ್ನು ಹಾಕಿ ರಸ್ತೆ ಬದಿಗೆ ಎಸೆಯಲಾಗಿದೆ. ದಾರಿಹೋಕರು ಇದನ್ನು ನೋಡಿ ಚೀಲಗಳನ್ನು ಬಿಚ್ಚಿದ್ದು ಈ ವೇಳೆ ಮಂಗಗಳಿಗೆ ವಿಷಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಮಂಗಗಳನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದರೆ 60 […]

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ, ಆಕೆಯನ್ನು ಪ್ರೀತಿಸಿ ಮದುವೆಯಾಗಿದ್ದ, ಜೊತೆಗೆ ಇನ್ನೊಬ್ಬಳನ್ನೂ ಪ್ರೀತಿಸಿದ್ದ !

Saturday, August 8th, 2020
priyanka

ಹಾಸನ : ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸಾಲಗಾಮೆ ಹೋಬಳಿ ಗೌಡಗೆರೆ ಗ್ರಾಮದ ಪ್ರಿಯಾಂಕಾ (23) ಮೃತ ಗೃಹಿಣಿ. ಆಕೆಯ ಗಂಡ ಹಾಗೂ ಅತ್ತೆ-ಮಾವ ಸೇರಿಕೊಂಡು ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿ, ನೇಣು ಬಿಗಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರೀತಿಸಿ ನಾಲ್ಕು ತಿಂಗಳ ಹಿಂದೆಯಷ್ಟೇ ಪ್ರಿಯಾಂಕಾ ಆಲೂರು ತಾಲೂಕಿನ ಪುರಬೈರವನಹಳ್ಳಿ ಗ್ರಾಮದ ಕಿರಣ್ ಜೊತೆ ಕಳೆದ ಮದುವೆಯಾಗಿದ್ದಳು. ನಮ್ಮ ಮಗಳಿಗೆ ಆಕೆಯ ಗಂಡ ಹಾಗೂ ಅತ್ತೆ, ಮಾವ […]

ಶ್ರೀಮಂತ ವಿಚ್ಚೇದನ ಪಡೆದ ಮಹಿಳೆಯರನ್ನು ಮದುವೆ ಯಾಗುವುದಾಗಿ ನಂಬಿಸಿ ದೈಹಿಕ‌ ಸಂಪರ್ಕ ಬೆಳೆಸಿ, ಲಕ್ಷ ಹೊಡೆಯುತ್ತಿದ್ದ

Tuesday, July 21st, 2020
jaganath

ಬೆಂಗಳೂರು :   ಶ್ರೀಮಂತ ವಿಚ್ಚೇದನ ಪಡೆದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ವೈವಾಹಿಕ ಜಾಲತಾಣವಾದ ಮ್ಯಾಟ್ರಿಮೋನಿ ಮೂಲಕ  ಮದುವೆ ಮಾಡಿಕೊಳ್ಳುವುದಾಗಿ  ನಂಬಿಸಿ  ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಬನಶಂಕರಿ ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. ಮಹೇಶ್ ಆಲಿಯಾಸ್ ಜಗನ್ನಾಥ್ ಬಂಧಿತ ಆರೋಪಿ. ಮೂಲತಃ ಬಿಜಾಪುರದವನಾಗಿದ್ದು ಹಾಸನದಲ್ಲಿ ಮನೆ ಮಾಡಿಕೊಂಡಿದ್ದ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. 29 ವರ್ಷದ ಜಗನ್ನಾಥ್, ಆನ್‌ ಲೈನ್ ಮೂಲಕ ಮಹಿಳೆಯರನ್ನು ಸಂಪರ್ಕಿಸಿ  ಮದುವೆಯಾಗುವುದಾಗಿ ಹೇಳಿ ಮಹಿಳೆಯರಿಂದ ಲಕ್ಷ ಲಕ್ಷ ವಂಚಿಸಿ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಸಿಮ್ […]

ಅಣ್ಣನ ಮಗಳನ್ನು ಪ್ರೀತಿಸುತ್ತಿದ್ದ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಿದ ಚಿಕ್ಕಪ್ಪ

Thursday, July 16th, 2020
hasan murder

ಹಾಸನ: ಯುವತಿಯೊಬ್ಬಳನ್ನು ಒಂದು ಬಾರಿ ಅಪಹರಿಸಿ ಬುದ್ದಿ ಮಾತು ಹೇಳಿದ್ದರು ಕೇಳದೆ ಎರಡನೇ ಬಾರಿ ಅಪಹರಣಕ್ಕೆ ಯತ್ನಿಸಿದಾಗ  30 ವರ್ಷದ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಆಲೂರು ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ. ಮಧು (30) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಮಧು ಸೊಪ್ಪಿನಹಳ್ಳಿಯ ನಿವಾಸಿಯಾಗಿದ್ದು, ಇದೇ ಗ್ರಾಮದ ಮತ್ತೊಬ್ಬ ನಿವಾಸಿ ರೂಪೇಶ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಮೃತಪಟ್ಟ ಮಧು ಆರೋಪಿ ರೂಪೇಶ್ ಅಣ್ಣನ ಮಗಳನ್ನು ಪ್ರೀತಿಸಿದ್ದು, ಕೆಲ ತಿಂಗಳ ಹಿಂದಷ್ಟೇ ಆಕೆಯನ್ನು ಅಪಹರಿಸಿ ಬೆಂಗಳೂರಿಗೆ ಕರೆದೊಯ್ದಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ […]

ಹಾಸನ : ಎರಡು ಲಾರಿಗಳು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

Tuesday, February 25th, 2020
hasana

ಹಾಸನ : ಸರಕು ಸಾಗಣೆ ಮಾಡುತ್ತಿದ್ದ ಎರಡು ಲಾರಿಗಳ ನಡುವೆ ಇಂದು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸಿಂಗಾಪುರ ಗ್ರಾಮದ ಬಳಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ‌ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳದಲ್ಲಿ ಯಾವುದೇ ತಿರುವು ಇರಲಿಲ್ಲ. ಆದಾಗ್ಯೂ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹ ಹೊರ ತೆಗೆಯಲು ಸ್ಥಳೀಯರು, ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ಹಾಸನ : ಹೋಟೆಲ್ ಹಿಂಭಾಗದಲ್ಲಿ ಯುವತಿಯೊಬ್ಬಳ ಮೃತ ದೇಹ

Monday, October 21st, 2019
bhavitha

ಹಾಸನ : ಯುವತಿಯೊಬ್ಬಳ ಮೃತ ದೇಹ ಬಿಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಒಂದರಲ್ಲಿ ಬಳಿ ಸೋಮವಾರ ಪತ್ತೆಯಾಗಿದೆ. ಮೃತ ಯುವತಿಯನ್ನು ಅರಕಲಗೂಡು ಮೂಲದ ಭವಿತಾ (23) ಎಂದು ಗುರುತಿಸಲಾಗಿದೆ. ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರುವ ಸರಾಯು ಹೋಟೆಲ್ ನಲ್ಲಿ ರೂಂ ಮಾಡಿಕೊಂಡಿದ್ದ ಯುವತಿಯ ಮೃತ ದೇಹ ಸೋಮವಾರ ಬೆಳಗ್ಗೆ ಹೋಟೆಲ್ ಹಿಂಭಾಗದಲ್ಲಿ ಪತ್ತೆಯಾಗಿತ್ತು. ದೇಹದ ಹಲವು ಭಾಗಗಳಿಗೆ ಹಚ್ಚೆ ಹಾಕಿಸಿಕೊಂಡಿರುವ ಭವಿತಾ  ರಟ್ಟೆಯ ಮೇಲೆ ಪುನಿತ್ ಎಂದು ಹಚ್ಚೆ ಹಾಕಿಸಿಕೊಂಡಿರುವುದರಿಂದ ಇದು ಕೊಲೆಯೇ ಅಥವಾ ಆತ್ಮಹತ್ಯೆಯೇ […]

ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಾರುಕಟ್ಟೆಯಲ್ಲಿ ಹೂ, ತರಕಾರಿಗಳಿಗೆ ಬೆಲೆ ಏರಿಕೆ

Friday, August 23rd, 2019
flower

ಮಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾರುಕಟ್ಟೆಯಲ್ಲಿ ಹೂ, ಹಣ್ಣು-ತರಕಾರಿ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದ್ದು, ಬೆಲೆ ಏರಿಕೆ ನಡುವೆಯೂ ಖರೀದಿ ಭರಾಟೆ ಜೋರಾಗಿತ್ತು. ಹಬ್ಬದ ತಯಾರಿ ಬಿರುಸಾಗಿದ್ದು, ಹೂ, ಹಣ್ಣು ವ್ಯಾಪಾರಸ್ಥರು ಬಿಡುವಿಲ್ಲದ ವ್ಯಾಪಾರದಲ್ಲಿ ತೊಡಗಿದ್ದಾರೆ. ಹಾಸನ, ತುಮಕೂರು, ಹಾವೇರಿ, ಬೆಂಗಳೂರು ಸೇರಿದಂತೆ ಹಲವೆಡೆಯಿಂದ 150ಕ್ಕೂ ಅಧಿಕ ಹೂವಿನ ವ್ಯಾಪಾರಿಗಳು ಆಗಮಿಸಿದ್ದಾರೆ. ಮಾರುಕಟ್ಟೆಯಲ್ಲಿ ಸೇವಂತಿಗೆ, ಜೀನಿಯಾ, ಕಾಕಡ, ಗುಲಾಬಿ, ಮಲ್ಲಿಗೆಗೆ ಬೇಡಿಕೆ ಹೆಚ್ಚಾಗಿದ್ದು, ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ.    

ಹಾಸನದ ಜೆಡಿಎಸ್ ಮಾಜಿ ಶಾಸಕ ಎಚ್‌ಎಸ್ ಪ್ರಕಾಶ್ ನಿಧನ

Tuesday, November 27th, 2018
prakash

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಎಚ್‌.ಎಸ್. ಪ್ರಕಾಶ್(67) ಮಂಗಳವಾರ ಹೃದಯಾಘಾತದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ಮೃತರು, ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ, 67 ವರ್ಷದ ಎಚ್‌ಎಸ್ ಪ್ರಕಾಶ್ ಅವರ ಪೂರ್ಣ ಹೆಸರು ಹಾಸನ ಸಣ್ಣಯ್ಯ ಪ್ರಕಾಶ್, 1994ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಪ್ರಕಾಶ್ 1999ರಲ್ಲಿ ಸೋಲು ಅನುಭವಿಸಿದ್ದರು. ನಂತರ 2004,2008,2013ರಲ್ಲಿ ಸತತ ಹ್ಯಾಟ್ರಿಕ್ ಬಾರಿಸಿದ್ದ ಪ್ರಕಾಶ್, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರೀತಂ […]

ಮುಂದಿನ 5 ವರ್ಷಗಳ ಕಾಲ ಎಚ್‌ಡಿಕೆಯೇ ಸಿಎಂ: ವೀರಪ್ಪ ಮೊಯ್ಲಿ

Friday, September 14th, 2018
virappa-moily

ಹಾಸನ: ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಅಲ್ಲದೆ, ಐದು ವರ್ಷಗಳ ಕಾಲ ಎಚ್‌.ಡಿ. ಕುಮಾರಸ್ವಾಮಿಯೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳನ್ನು ಮೊಯ್ಲಿ ತಳ್ಳಿಹಾಕಿದರು. ಅಲ್ಲದೆ, ಎಚ್‌ಡಿಕೆಯೇ ಮುಂದಿನ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಖಚಿತ ಭರವಸೆ ನೀಡಿದ್ದಾರೆ.ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕಕ್ಕೆ ತೆರೆ ಬೀಳುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ […]

ಸಂತ್ರಸ್ತರಿಗೆ ಬಿಸ್ಕೆಟ್​ ಎಸೆದ ಸಚಿವ ರೇವಣ್ಣ ವರ್ತನೆಗೆ ನೆಟಿಜನ್ಸ್​ ಆಕ್ರೋಶ

Monday, August 20th, 2018
hd-revanna

ಹಾಸನ: ನೆರೆ ಸಂತ್ರಸ್ತರ ಶಿಬಿರದಲ್ಲಿ ಅಮಾನವೀಯ ನಡೆ ತೋರಿದ್ದ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರ ವರ್ತನೆಗೆ ನೆಟಿಜನ್ಸ್ಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚೆಗೆ ಹಾಸನದ ರಾಮನಾಥಪುರ ಸಂತ್ರಸ್ತರ ಶಿಬಿರಕ್ಕೆ ಸಚಿವ ಹೆಚ್ ಡಿ ರೇವಣ್ಣ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿದ್ದರು. ಈ ವೇಳೆ ಶಿಬಿರದಲ್ಲಿ ಸಂತ್ರಸ್ತರ ಕೈಗೆ ಬಿಸ್ಕೇಟ್ ಪ್ಯಾಕ್ ಕೊಡುವ ಬದಲು ಮೈಮೇಲೆ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿರುವ ನೆಟಿಜೆನ್ಸ್ ಸಚಿವ ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ. ಅವರ […]