ಹಾಸ್ಟೇಲ್ ನೌಕರರ ದಿಢೀರ್ ವಜಾ : ಜೆಡಿಎಸ್ ಅಸಮಾಧಾನ

Monday, November 4th, 2019
Hostel-nawkara

ಮಡಿಕೇರಿ : ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೊರ ಸಂಪನ್ಮೂಲ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆಯವರು, ಅಡುಗೆ ಸಹಾಯಕರು ಹಾಗೂ ಕಾವಲುಗಾರರನ್ನು ಏಕಾಏಕಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕಿನ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಇಂದು ಮಡಿಕೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ ಅವರಿಗೆ ಮನವಿ ಸಲ್ಲಿಸಿದ ನೌಕರರು ತಮಗಾದ ಅನ್ಯಾಯದ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದರು. ಸೋಮವಾರಪೇಟೆ ತಾಲೂಕಿನ ವಿಸ್ತರಣಾಧಿಕಾರಿಗಳು ಹೊರ ಸಂಪನ್ಮೂಲ ನೌಕರರಿಗೆ ವಿನಾಕಾರಣ […]