ಪೈಪ್ ಲೈನ್ ನಲ್ಲಿ ಯಾವುದೇ ತುರ್ತು – ಜಂಟಿ ಆಫ್ ಸೈಟ್ – ಅಣುಕು ಪ್ರದರ್ಶನ  

Wednesday, January 6th, 2021
mockdril

ಮಂಗಳೂರು : ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಜಿಲ್ಲಾಡಳಿತದ ಉಪಸ್ಥಿತಿಯಲ್ಲಿ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನ ಎಲ್.ಪಿ.ಜಿ. ಪೈಪ್ ಲೈನ್ ಮತ್ತು ಪೆಟ್ರೋನೆಟ್ ಎಂ.ಹೆಚ್.ಬಿ. ಪೈಪ್ ಲೈನ್ ಸಂಯುಕ್ತಾಶ್ರಯದಲ್ಲಿ ಜಂಟಿ ಆಫ್ ಸೈಟ್ ಎಂಬ ಅಣುಕು ಪ್ರದರ್ಶನವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನ ಡೆಪ್ಯೂಟಿ ಜೆನರಲ್ ಮ್ಯಾನೇಜರ್ ಜಿ. ವಿನೋದ್ ಕುಮಾರ್ ಸಭೆಯನ್ನುದ್ದೇಶಿಸಿ ಮಾತನಾಡಿ, ಎಲ್.ಪಿ.ಜಿ. ಸೋರಿಕೆ ಸಂಬಂಧಿತ ತುರ್ತು ಸ್ಥಿತಿಗಳನ್ನು ನಿಭಾಯಿಸಲು ಹೆಚ್.ಪಿ.ಸಿ.ಎಲ್. ನೊಂದಿಗೆ ಎಲ್.ಪಿ.ಜಿ. ಪೈಪ್ […]

ಪೆರ್ನೆಯಲ್ಲಿ ಸಂಭವಿಸಿದ ಅನಿಲ ದುರಂತದ ಸಂತ್ರಸ್ತರಿಗೆ 43.2 ಲಕ್ಷ ಮೊತ್ತದ ಚೆಕ್ ವಿತರಣೆ

Monday, July 22nd, 2013
Perne Accident

ಬಂಟ್ವಾಳ: ಹಿಂದೂಸ್ಥಾನ್ ಪೆಟ್ರೋಲಿಯಂ ಕಂಪೆನಿಯಿಂದ  ಪೆರ್ನೆಯಲ್ಲಿ ಸಂಭವಿಸಿದ ಅನಿಲ ದುರಂತದ ಸಂತ್ರಸ್ತರಿಗೆ ಒಟ್ಟು 43.2 ಲಕ್ಷ ಮೊತ್ತದ ಚೆಕ್ಕನ್ನು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಭಾನುವಾರ ಬಿ.ಸಿ.ರೋಡ್ ನ ಸಚಿವರ ಕಚೇರಿಯಲ್ಲಿ ವಿತರಿಸಿದರು. ಒಟ್ಟು 14 ಮಂದಿಗೆ ಪರಿಹಾರ ಧನವಾಗಿ 43.2 ಲಕ್ಷ ಮೊತ್ತದ ಚೆಕ್ ನ್ನು ವಿತರಿಸಲಾಯಿತು. ದುರಂತದಲ್ಲಿ ಜೀವಹಾನಿ ಮತ್ತು  ಮನೆ ಅಪಾರ ಆಸ್ತಿ ನಷ್ಟ ಉಂಟಾಗಿತ್ತು.  ಸ್ಥಳೀಯ ನಿವಾಸಿಗಳಾದ ಸಂದರ ರೈ ಅವರಿಗೆ 7.43 ಲಕ್ಷ, […]