ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ -ಕ್ಯಾ.ಬ್ರಿಜೇಶ್ ಚೌಟ ಖಂಡನೆ

Friday, April 19th, 2024
Brijesh-Chowta

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಹಲ್ಲೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನ ಈ ನೀಚ […]

ಧರ್ಮಸ್ಥಳದಲ್ಲಿ ಹಣೆಗೆ ತಿಲಕ ಹಾಕಿ ಹಿಂದೂ ಯುವತಿ ಜೊತೆ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Tuesday, January 16th, 2024
Dharmasthala Lovers

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೋರ್ವಳು ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ತಡೆದ ಕೆಲವರು, ಅವರ ವಿವರಗಳನ್ನು ಕೇಳಿದ್ದಾರೆ. ಪಂಚೆ ಧರಿಸಿ ತಿಲಕ ಹಾಕಿ ಯುವತಿ ಜೊತೆ ಸುತ್ತಾಡುತ್ತಿದ್ದ ಯುವಕನನ್ನು ವಿಚಾರಿಸಿದಾಗ ಆತ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಧರ್ಮಸ್ಥಳ ಠಾಣೆಯ ಪೊಲೀಸರು, ಜೋಡಿಯನ್ನು ಬಳಿಕ ಠಾಣೆಗೆ ಕರೆದೊಯ್ದು ವಿಚಾರಣೆ […]

ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

Thursday, October 12th, 2023
ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

ಬಂಟ್ವಾಳ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ ಮೂಲದವರೆನ್ನಲಾಗಿದೆ. ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿದ್ದರೆನ್ನಲಾಗುತ್ತಿದ್ದು, ಈ ಬಗ್ಗೆ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.

ಹಿಂದೂ ಯುವತಿ ಮತಾಂತರದ ಮದುವೆ, ಯುವತಿಯ ಮನೆಗೆ ಭೇಟಿ ನೀಡಿದ ಗುರುಪುರ ವಜ್ರದೇಹಿ ಶ್ರೀಗಳು

Saturday, November 20th, 2021
Mohan-Bekary

ಮಂಗಳೂರು : ಹಿಂದೂ ಯುವತಿಯೊಬ್ಬಳು ಮುಸ್ಲಿಂ ಹುಡುಗನನ್ನು ಮೂರು ವರ್ಷಗಳಿಂದ ಪ್ರ್ರೀತಿಸಿ ಬಳಿಕ ಮನೆಯವರನ್ನು ಒಪ್ಪಿಸಿ ನವೆಂಬರ್ 29 ಮದುವೆಯಾಗಲು ಸಿದ್ಧತೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ಸಿಟಿ ಬಸ್ ಸ್ಟ್ಯಾಂಡ್ ನ ಎದುರುಗಡೆ ಇರುವ ಮೋಹನ್ ಬೇಕರಿ ಮಾಲೀಕರ ಮಗಳು ಕೇರಳದ ಕಣ್ಣೂರಿನ ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳಲು ನಿರ್ಧರಿಸಿದ್ದನ್ನು ಹಿಂದೂ ಸಂಘಟನೆಗಳು ವಿರೋಧಿಸಿ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಿದ್ದವು. ಈ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ನ ಶರಣ್ ಪಂಪ್ ವೆಲ್  […]

ಫೇಸ್‌ಬುಕ್ ಮೂಲಕ ಹಿಂದೂ ಯುವತಿಯರಿಗೆ ಎಚ್ಚರಿಕೆ ನೀಡಿದ `ವೀರ ಕೇಸರಿ’

Thursday, January 4th, 2018
Veera-kesari

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಮಂಗಳವಾರ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಇದರಲ್ಲಿ ಹಿಂದೂ ಯುವತಿಯರಿಗೆ ಎಚ್ಚರಿಕೆ ರವಾನಿಸಲಾಗಿದೆ. ವೀರ ಕೇಸರಿ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಅನ್ಯಕೋವಿನ ವಿದ್ಯಾರ್ಥಿಗಳೊಂದಿಗೆ ಸುತ್ತಾಡುವ ಹಿಂದೂ ಯುವತಿಯರಿಗೆ ಕಪಾಳ ಮೋಕ್ಷ ಖಂಡಿತ ಎಂಬ ಎಚ್ಚರಿಕೆ ನೀಡಲಾಗಿದೆ. ಬುದ್ಧಿ ಮಾತು ಹೇಳಿದ್ದಾಯಿತು, ಮನವರಿಕೆ ಮಾಡಿದ್ದಾಯಿತು, ಎಚ್ಚರಿಕೆ ಕೊಟ್ಟಿದ್ದಾಯಿತು. ಇನ್ನೇನಿದ್ದರೂ ಕಪಾಳಕ್ಕೆ ಬಾರಿಸುವುದೊಂದೇ ದಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಮೂಡಬಿದ್ರೆಯ ಆಸುಪಾಸಿನ ಎಲ್ಲಾ ಹುಡುಗರಿಗೆ ಕೊನೆಯ ಎಚ್ಚರಿಕೆ ಎಂದು […]

ಹಿಂದೂ ಯುವತಿ ಆದಿರಾ ಇಸ್ಲಾಂ ಸೇರಲು ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿ ಮತಾಂತರ ಪ್ರಕ್ರಿಯೆ

Saturday, July 29th, 2017
adhira

ಕಾಸರಗೋಡು : ಕಾಸರಗೋಡು ಜಿಲ್ಲೆಯ ಉದುಮ ಕಣಿಯಂಬಾಡಿಯ ಹಿಂದೂ ಯುವತಿ ಆದಿರಾ(23)ಆಯಿಷಾಳಾಗಿ ಪರಿವರ್ತನೆ ಯಾಗಿರುವ ಹಿಂದೆ ಕೇರಳದ ಮತಾಂತರಗೊಳಿಸುವ ಸಂಸ್ಥೆಯೊಂದು ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಲಾಗಿದೆ. ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಆದಿರಾ, ಪದವಿ ಓದುತ್ತಿರುವಾಗಲೇ ಇಸ್ಲಾಂ ಅಧ್ಯಯನದ ಬಗ್ಗೆ ಆಸಕ್ತಿ ಅತೀವವಾಗಿತ್ತು. ಇಸ್ಲಾಂ ಅಧ್ಯಯನ ಮಾಡುವ ನಿರ್ಧಾರದಿಂದಲೇ ಜುಲೈ 10ರಂದು ಮನೆಬಿಟ್ಟಿದ್ದೇನೆ. ಕಣ್ಣೂರಿನಲ್ಲಿರುವ ಸ್ನೇಹಿತೆಯ ಮನೆಯಲ್ಲಿದ್ದು, ಆಯೆಷಾ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇದೀಗ ಅಲ್ಲಿಂದಲೇ ಪೊಲೀಸ್ ಠಾಣೆಗೆ ಬಂದಿರುವುದಾಗಿ ಹೇಳಿದ್ದಾಳೆ. ನ್ಯಾಯಾಲಯದಲ್ಲಿ ಕಣ್ಣೀರು ಹಾಕುತ್ತಿದ್ದ […]