ಕನ್ನಡ, ತುಳು ಸಿನೆಮಾ ನಟ, ನಿರ್ದೇಶಕ ಶರತ್ ಚಂದ್ರ ಕದ್ರಿ ಇನ್ನಿಲ್ಲ

Monday, January 10th, 2022
sharathchandra Kadri

ಮಂಗಳೂರು : ಕನ್ನಡ, ತುಳು ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ ಹಾಗೂ ನೂರಕ್ಕೂ ಹೆಚ್ಚು ನಾಟಕ ಗಳನ್ನು ರಚಿಸಿ ಅಭಿನಯಿಸಿದ ಹಿರಿಯ ನಟ ಹಾಗೂ ನಿರ್ದೇಶಕ ಶರತ್ ಚಂದ್ರ ಕದ್ರಿ ಅವರು ಭಾನುವಾರ ಬೆಳಿಗ್ಗೆ 4.30  ಕ್ಕೆ ತಮ್ಮ ಸ್ವ ಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಏನ್ ಟೈಲರ್ ನಾಟಕಗಳ ಮೂಲಕ ನಾಯಕ ನಟನಾಗಿ ರಂಗಭೂಮಿ ಪ್ರವೇಶಿಸಿದ ಶರತ್ ಚಂದ್ರ ಕದ್ರಿ ಕನ್ನಡದ ಕತ್ತೆಗಳು ಸಾರ್ ಕತ್ತೆಗಳು ಸಿನೆಮಾದ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು. ತುಳುವಿನ ಕಟಪಾಡಿ ಕಟ್ಟಪ್ಪಾ, ದೊಂಬರಾಟ ಮೊದಲಾದ ಚಿತ್ರಗಳಲ್ಲಿ […]

ನಾಟಕಕಾರ, ತುಳುರಂಗ ಭೂಮಿಯ ಹಿರಿಯ ನಟ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ

Thursday, October 15th, 2020
Madhava jappu patna

ಮಂಗಳೂರು : ತುಳು ರಂಗ ಭೂಮಿಯ ಹಿರಿಯ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ (66 ವ.) ಗುರುವಾರ ನಿಧನರಾದರು. ಜಪ್ಪು ಪಟ್ನ ಅವರಿಗೆ ಜ್ವರಕಾಣಿಸಿಕೊಂಡು ಆಮ್ಲಜನಕದ ಮಟ್ಟ ಕಡಿಮೆಯಾಗಿ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿ ಕಳೆದ 24 ದಿನಗಳಿಂದ  ಚಿಕಿತ್ಸೆ ಪಡೆಯುತ್ತಿದ್ದರು, ಅದಾಗಲೇ ಕೋವಿಡ್ ಸೋಂಕಿನಿಂದ ತೀವ್ರ ಉಸಿರಾಟದ ತೊಂದರೆ ಉಂಟಾಗಿ ಗುರುವಾರ ಇಹಲೋಗ ತ್ಯಜಿಸಿದರು. ಮಾಧವ ಜಪ್ಪು ಪಟ್ನ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಕುದ್ರೋಳಿ ಶ್ರೀ ಭಗವತೀ ತೀಯಾ ಸೇವಾ […]