ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಕ್ಲಾರ್ಕ್ ಎಸಿಬಿ ಬಲೆಗೆ

Tuesday, January 5th, 2021
Mohammed-Rafeeq

ಮಂಗಳೂರು: ನಗರದ ತಹಶೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಎಸ್‌ಡಿಎ ಕ್ಲಾರ್ಕ್ ಒಬ್ಬರನ್ನು  ರೆಡ್ ‌ಹ್ಯಾಂಡ್‌ ಆಗಿ ಮಂಗಳವಾರ  ಬಂಧಿಸಿದ್ದಾರೆ. ಮೊಹಮ್ಮದ್ ರಫೀಕ್  (42) ಬಂಧಿತ ಆರೋಪಿಯಾಗಿದ್ದು, ಕಚೇರಿಯ ಕೆಲಸ‌‌ವೊಂದನ್ನು ಮಾಡಿಕೊಡಲು ಹಿರಿಯ ನಾಗರೀಕರೊಬ್ಬರಿಂದ 40 ಸಾವಿರ ರೂ. ಲಂಚದ‌ ಬೇಡಿಕೆ ಇಟ್ಟಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಸಂತ್ರಸ್ತರು ದೂರು ದಾಖಲಿಸಿರುವ ಹಿನ್ನೆಲೆ ಆರೋಪಿಗೆ ನಗದು ನೀಡುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಿ, ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು […]

ಬಸ್ಸುಗಳಲ್ಲಿ ಹಿರಿಯ ನಾಗರೀಕರಿಗೆ ಅನುಕೂಲ ಕಲ್ಪಿಸಲು ಕ್ರಮ ಆರ್.ಟಿ.ಓ

Wednesday, July 10th, 2013
RTO Adalath

ಮಂಗಳೂರು : ನಗರ ಸಾರಿಗೆ ಹಾಗೂ ಸರ್ವಿಸ್  ಬಸ್ಸುಗಳಲ್ಲಿ ಹಿರಿಯ ನಾಗರೀಕರನ್ನು ಗೌರವದಿಂದ ಕಾಣುವ ಪರಿಸರನ್ನುಂಟು ಮಾಡುವುದು ಹಾಗೂ ಅವರಿಗೆ ಮೀಸಲಾದ ಸ್ಥಳಗಳಲ್ಲಿ ಇತರೆ ಜನರು ಕುಳಿತಿದ್ದರೆ ಅವರು ಬಂದ ಕೂಡಲೇ ತೆರವು ಮಾಡಿ ಅವರಿಗೆ ಅನುವು ಮಾಡಿಕೊಡಲು ಸಾರ್ವಜನಿಕರಲ್ಲಿ ಹಾಗೂ ಶಾಲಾ ಕಾಲೇಜು ಮಕ್ಕಳಲ್ಲಿ ಅರಿವು ಮೂಡಿಸಲಾಗುವುದೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀ ಮಲ್ಲಿಕಾರ್ಜುನ ತಿಳಿಸಿದ್ದಾರೆ. ಅವರಿಂದು ತಮ್ಮ ಕಚೇರಿಯಲ್ಲಿ ನಡೆದ ಸಾರಿಗೆ ಅದಾಲತ್ ಸಭೆಯಲ್ಲಿ ಈ ವಿಷಯ ತಿಳಿಸಿದರು. ಹಸನಬ್ಬ ಎನ್ನುವವರು ರಸ್ತೆಯ ಇಕ್ಕೆಡೆಗಳಲ್ಲಿನ ಕಾಲುದಾರಿಯನ್ನು […]