ಒಂದೂವರೆ ತಿಂಗಳ ಹೆಣ್ಣು ಮಗು ವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ತಾಯಿ

Tuesday, September 12th, 2023
infant killed

ಕಾಸರಗೋಡು : ಹೆಣ್ಣು ಮಗು ವನ್ನು ತಾಯಿಯೊಬ್ಬಳು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮಗು ಮೃತ ಪಟ್ಟವಳು. ತಾಯಿ ಮತ್ತು ಮಗು ನಾಪತ್ತೆ ಯಾದುದರಿಂದ ಮನೆ ಯವರು ಶೋಧ ನಡೆಸಿದಾಗ ತಾಯಿ ಯನ್ನು ಮನೆಯ ಅಲ್ಪ ದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು. ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ […]

ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Wednesday, October 20th, 2021
Baby Girl

ಬಂಟ್ವಾಳ : ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ರಸ್ತೆ ಮಧ್ಯೆ ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ  ಜನ್ಮ ನೀಡಿರುವ ಘಟನೆ ಬಂಟ್ವಾಳದ ಫರಂಗಿಪೇಟೆಯ ಸಮೀಪ ನಡೆದಿದೆ. ಅನಂತಾಡಿ ನಿವಾಸಿ ಸಂದೀಪ್ ಅವರ ಪತ್ನಿ ಸುಪ್ರಿತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ನಿವಾಸಿ ಗರ್ಭಿಣಿಯಾಗಿದ್ದ ಸುಪ್ರಿತಾ ಅವರನ್ನು ಹೆರಿಗೆಗಾಗಿ 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುತ್ತಿದ್ದರು. ಈ ವೇಳೆ ಫರಂಗಿಪೇಟೆಯ ಸಮೀಪ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಾಣಿ ವ್ಯಾಪ್ತಿಯ 108 ಆ್ಯಂಬುಲೆನ್ಸ್ ಮೂಲಕ […]

ಕೊರೊನಾ ಸೋಂಕಿತ ಉಪನ್ಯಾಸಕಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲ ಗಂಟೆಗಳಲ್ಲೇ ಸಾವು

Wednesday, May 26th, 2021
Gunashree

ಮಂಡ್ಯ: ಹೆರಿಗೆಗೆ ಬಂದಿದ್ದ ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿಯೊಬ್ಬರು  ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲ ಗಂಟೆಗಳಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಜರುಗಿದೆ. ಕೊರೊನಾ ಸೋಂಕಿತರಾಗಿದ್ದ ಅವರು  ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದರು. ಮದ್ದೂರು ತಾಲೂಕಿನ ಅರೆತಿಪ್ಪೂರು ಗ್ರಾಮದ ಗುಣಶ್ರೀ (35) ಸಾವನ್ನಪ್ಪಿರುವ ದುರ್ದೈವಿ. ಅವರು ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದವರು. ಮಂಗಳವಾರ  ರಾತ್ರಿ ಗುಣಶ್ರೀ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆದರೆ ಮಗು ಹುಟ್ಟಿದ ಕೆಲ ಗಂಟೆಯಲ್ಲೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಗುಣಶ್ರೀ ಅವರು ಮಳವಳ್ಳಿಯ ಶಾಂತಿ […]

ಹೆಣ್ಣು ಮಗುವಿನೊಂದಿಗೆ ನಾಪತ್ತೆಯಾದ ತಂದೆ

Wednesday, March 31st, 2021
Hasim

ಮಂಗಳೂರು : ಮಂಗಳೂರಿನ ಕದ್ರಿ ಬಳಿಯ ಆಳ್ವಾರೀಸ್ ರೋಡ್, ಫಾಲ್ಕಾಮ್ ಕ್ರಿಸ್ಟ್ ನಿವಾಸಿ 32 ವರ್ಷದ ಅಬ್ದುಲ್ ಹಾಸೀಮ್ ತನ್ನ 1 ವರ್ಷ 2 ತಿಂಗಳು ಹೆಣ್ಣು ಮಗುವಿನೊಂದಿಗೆ ಮಾರ್ಚ್ 23 ರಂದು ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ವ್ಯಕ್ತಿಯು 5.9 ಅಡಿ ಎತ್ತರವಿದ್ದು, ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು, ಅಗಲ ಮುಖ, ಎಡ ಕೈಯಲ್ಲಿ ಕಪ್ಪು ಎಳ್ಳು ಮಚ್ಚೆ ಹೊಂದಿದ್ದು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯನ್ನು ಮಾತನಾಡುತ್ತಾರೆ. ಕಾಣೆಯಾದ […]

ಅಪಹರಿಸಿದ ಹೆಣ್ಣು ಮಗು ಕುಬ್ಜಾ ನದಿಯಲ್ಲಿ ಶವವಾಗಿ ಪತ್ತೆ

Friday, July 12th, 2019
Sanvika

ಉಡುಪಿ  : ಗುರುವಾರ ತಡ ರಾತ್ರಿ ಸಿದ್ದಾಪುರ ಸಮೀಪದ ಯಡಮೊಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮ್ಟಿಬೇರು ಎಂಬಲ್ಲಿ ಅಪಹರಣಕ್ಕೊಳಗಾಗಿದ್ದ ಹೆಣ್ಣು ಮಗುವಿನ ಮೃತ ದೇಹ ಕುಬ್ಜಾ ನದಿಯಲ್ಲಿ ಪತ್ತೆಯಾಗಿದೆ. ಕುಮ್ಟಿಬೇರು ನಿವಾಸಿ ಸಂತೋಷ್ ನಾಯ್ಕ್ – ರೇಖಾ ದಂಪತಿಯ ಒಂದು ವರ್ಷದ ಮಗಳು ಸಾನ್ವಿಕಾ ಮೃತ  ದುರ್ದೈವಿ. ನಿನ್ನೆ ತಾಯಿಯೊಂದಿಗೆ ಮಲಗಿದ್ದ ಸಾನ್ವಿಕಾಳನ್ನು ಮುಸುಕುಧಾರಿಯೊಬ್ಬ ಅಪಹರಿಸಿದ್ದಾನೆ ಎಂದು ದೂರು ದಾಖಲಾಗಿತ್ತು. ಶುಕ್ರವಾರ  ಮನೆಯ ಹತ್ತಿರದಲ್ಲೇ ಇರುವ ಕುಬ್ಜಾ ನದಿಯಲ್ಲಿ ಮಗುವಿನ ಶವಪತ್ತೆಯಾಗಿದೆ. ಪೊಲೀಸರು ಮಗುವಿನ ಸಾವಿಗೆ ನಿಖರ ಕಾರಣ ಹುಡುಕುತ್ತಿದ್ದಾರೆ. ಒಂದು ಮಾಹಿತಿ ಪ್ರಕಾರ […]

ಎಂಟು ತಿಂಗಳ ಹೆಣ್ಣು ಮಗುವನ್ನು ಕೊಲೆ ಮಾಡಿದ ತಂದೆ

Thursday, May 30th, 2019
laxmana

ಮಂಗಳೂರು :  ತಂದೆಯೇ ಎಂಟು ತಿಂಗಳ ಹೆಣ್ಣು ಮಗುವನ್ನು ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನ ಬೋಳಾರ ಸಮೀಪ ನೇತ್ರಾವತಿ ನದಿ ದಡದಲ್ಲಿ ಸೋಮವಾರ ಮೇ 27ರಂದು ಎಂಟು ತಿಂಗಳ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ, ಕೊಪ್ಪಳ ಮೂಲದ ಲಕ್ಷ್ಮಣ ತೆಂಗಿನಹಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ ತೆಂಗಿನಹಾಳ ಮತ್ತು ರೂಪಾ ದಂಪತಿ ಬೋಳಾರದಲ್ಲಿರುವ ಕಟ್ಟಡ ನಿರ್ಮಾಣ ಸಂಸ್ಥೆಯೊಂದರ ತಾತ್ಕಾಲಿಕ ಶೆಡ್ ‌ನಲ್ಲಿ ಮಗುವಿನೊಂದಿಗೆ ವಾಸವಾಗಿದ್ದರು. […]