18 ಸಾವಿರ ಬಾಡಿಗೆ ಕೊಟ್ಟಿಲ್ಲಎಂದು ಪುಟ್ ಪಾತ್ ಮೇಲೆ ಕೊರೋನ ರೋಗಿಯ ಶವ ಬಿಟ್ಟು ಹೋದ ಆಂಬ್ಯುಲೆನ್ಸ್ ಚಾಲಕ

Friday, May 28th, 2021
ambulance

ಬೆಂಗಳೂರು:  ಕೊರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಇಳಿಸಲು ಆಂಬ್ಯುಲೆನ್ಸ್ ಚಾಲಕ ಕುಟುಂಬದವರ ಬಳಿ 18 ಸಾವಿರ ರೂಪಾಯಿ ಹಣ ಕೇಳಿ, ಹಣ ಕೊಟ್ಟಿಲ್ಲ ಎಂದು ಶವವನ್ನ ಪುಟ್ ಪಾತ್ ಮೇಲೆ ಇಳಿಸಿ ಹೋದ ಘಟನೆ ಹೆಬ್ಬಾಳ ದಲ್ಲಿ ನಡೆದಿದೆ. ಚಾಲಕನನ್ನು ಶರತ್ ಗೌಡ ಎಂದು ಗುರುತಿಸಲಾಗಿದೆ. ಹೆಬ್ಬಾಳ ಚಿತಾಗಾರಕ್ಕೆ ಸೋಂಕಿತ ಮೃತ ವ್ಯಕ್ತಿಯ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿತ್ತು. ಮೃತರ ಪತ್ನಿಯ ಬಳಿ ಚಾಲಕ ಶರತ್ ಗೌಡ 18 ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದ. ಆಗ ಮೊದಲಿಗೆ 3 ಸಾವಿರ ರೂಪಾಯಿ […]

ಮೈಸೂರು : ಕೊರೊನಾದಿಂದ ಮೃತ ತಂದೆಯ ಹೆಣ ಬೇಡ ಹಣ ಬೇಕು ಅಂದ ಮಗ

Sunday, May 23rd, 2021
Mysore corona

ಮೈಸೂರು: ತಂದೆಯ ಅಂತ್ಯಕ್ರಿಯೆ ನೀವೆ ಮುಗಿಸಿ. ಆದರೆ ತಂದೆಯ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ ಎಂದು ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಮಗ ಹೇಳಿರುವ ಘಟನೆ ಮೈಸೂರಿನ ಹೆಬ್ಬಾಳದಲ್ಲಿ ನಡೆದಿದೆ. ತಂದೆಯ ಶವ ಕೂಡ ನೋಡಲು ಬಾರದ ಮಗ, ತಂದೆ ಶವ ಬೇಡ, ಹಣ ಬೇಕು ಎಂದು  ಆತನಿಗೆ ಕರೆ ಮಾಡಿ ವಿಷಯ ತಿಳಿಸಿದವರಿಗೆ ಹೇಳಿದ್ದಾನೆ, ತಂದೆ ಮನೆಯಲ್ಲಿ ಇಟ್ಟಿರುವ ಹಣವನ್ನು ನಾನು ಇರುವ ಸ್ಥಳಕ್ಕೆ ತಂದು ಕೊಡಿ. ತಂದೆಯ ಶವ ನೀವೇ ಸುಟ್ಟು ಹಾಕಿ, […]

ಬೈಕ್​ ಅಪಘಾತ : ಸಹಾಯ ಮಾಡುವ ನೆಪದಲ್ಲಿ ಬಂದ ಯುವಕರು ಮೊಬೈಲ್​ ಕದ್ದು ಪರಾರಿ

Thursday, September 19th, 2019
Hebbal

ಬೆಂಗಳೂರು : ನಗರದ ಹೆಬ್ಬಾಳ ಫ್ಲೈ ಓವರ್ ಮೇಲೆ ವ್ಯಕ್ತಿಯೊಬ್ಬರಿಗೆ ಅಪಘಾತವಾಗಿ ಕೆಳಗೆ ಬಿದ್ದಾಗ ಸಹಾಯಕ್ಕೆಂದು ಬಂದ ಯುವಕರು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಹೆಬ್ಬಾಳ ಫ್ಲೈ ಓವರ್ ಮೇಲೆ‌ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ಸವಾರ ಜೈಶಂಕರ್ ಎಂಬಾತ ಕೆಳಗೆ ಬಿದ್ದಿದ್ದ. ಡಿವೈಡರ್ಗೆ ರಭಸವಾಗಿ ಗುದ್ದಿದ ಪರಿಣಾಮ ಪ್ರಜ್ಞೆ ತಪ್ಪಿದ್ದ ಸ್ಥಿತಿಯಲ್ಲಿ ಸವಾರ ಇದ್ದ. ಈ ವೇಳೆ ಐ ಫೋನ್ ರಸ್ತೆ ಮೇಲೆ ಬಿದಿದ್ದನ್ನು ಕಂಡು ಯುವಕರ ಗುಂಪೊಂದು ಸಹಾಯಕ್ಕೆ ಬಂದಿದೆ. ಕೆಲ ಹೊತ್ತು […]