ಧರ್ಮಸ್ಥಳದ ಆನೆಗಳಿಗೆ ಉಪಾಹಾರದ ಯೋಗ ಭಾಗ್ಯ!

Saturday, January 1st, 2022
Dharmasthala-Elephant

ಉಜಿರೆ: ಶನಿವಾರ ಚತುರ್ದಶಿಯ ಪರ್ವ ದಿನ. ಹೊಸ ವರ್ಷದ ಶುಭಾರಂಭ. ಆನೆಗಳಾದ ಲತಾ, ಲಕ್ಷ್ಮಿ ಮತ್ತು ಶಿವಾನಿ ಅಮೃತವರ್ಷಿಣಿ ಸಭಾ ಭವನದಲ್ಲಿ ಸೂರ್ಯಾಸ್ತದ ಮೊದಲೆ ಶುದ್ಧ ಸಸ್ಯಾಹಾರವಾದ ಉಪಾಹಾರ ಸ್ವೀಕರಿಸಿದವು. ಸೇಬು, ಮುಸುಂಬಿ, ದಾಳಿಂಬೆ, ಸೌತೆ, ಮುಳ್ಳು ಸೌತೆ, ಕಬ್ಬು, ಬಾಳೆಹಣ್ಣು, ಜೋಳ, ಸಿಹಿಕುಂಬಳಕಾಯಿ, ಬಾಳೆಗಿಡ ಹೀಗೆ ಆನೆಗಳಿಗೆ ಇಷ್ವಾದ ಹಾಗೂ ಹಿತವಾದ ವಸ್ತುಗಳನ್ನು ಜೋಡಿಸಿ ಇಡಲಾಗಿತ್ತು. ಅವರವರಿಗೆ ಬೇಕಾದ, ಆಯ್ಕೆಯಾದ ಹಣ್ಣುಗಳನ್ನು ತರಕಾರಿಗಳನ್ನು ಆನೆಗಳು ತಿಂದು ಆನಂದಿಸಿದವು. ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ […]

ನಂದಿನಿ ಗ್ರಾಹಕರಿಗೆ ಸಿಹಿ ಸುದ್ಧಿ : ನಂದಿನಿ ಸಿಹಿ ಉತ್ಸವ ಅವಧಿ ವಿಸ್ತರಣೆ

Saturday, January 9th, 2021
Nandini Utsava

ಮಂಗಳೂರು  : ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ ಸಿಹಿ ಉತ್ಸವ ಯೋಜನೆಯನ್ನು ಕರ್ನಾಟಕ ರಾಜ್ಯಾದ್ಯಂತ ದಿನಾಂಕ 24-12-2020 ರಿಂದ 07-01-2021 ರವರೆಗೆ ಆಚರಿಸಲಾಗಿದೆ. ಸಂಕ್ರಾತಿ ಹಬ್ಬದ ನಿಮಿತ್ತ ಗ್ರಾಹಕರ ಆಪೇಕ್ಷೆ ಮೇರೆಗೆ ನಂದಿನಿ ಸಿಹಿ ಉತ್ಸವವನ್ನು ದಿನಾಂಕ 14-04-2021 ರವರೆಗೆ ವಿಸ್ತರಿಸಲಾಗಿರುವುದನ್ನು ತಿಳಿಸಲು ಹರ್ಷಿಸುತ್ತೇವೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿರುತ್ತದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ […]

ಹೊಸ ವರ್ಷದಂದು ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ

Sunday, December 27th, 2020
Jagadeesha

ಉಡುಪಿ : ಸಾರ್ವಜನಿಕವಾಗಿ  ಹೊಸ ವರ್ಷದಂದು ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ ಹೊಸ ವರ್ಷದ ಆಚರಣೆಯ ಸಮಯದಲ್ಲಿ ಕೂಡ ಎಲ್ಲಾ ರೀತಿಯ ಕೊರೊನಾ ನಿಯಮಗಳನ್ನು ಪಾಲಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸರ್ಕಾರ ಹೊರಡಿಸಿದ ವಿಶೇಷ ಮಾರ್ಗಸೂಚಿಗಳು ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ನಾಲ್ಕು ದಿನಗಳವರೆಗೆ ಅನ್ವಯಿಸುತ್ತವೆ ಎಂದು ಅವರು ಹೇಳಿದ್ದಾರೆ. ಹೊಸ ವರ್ಷದಂದು ಯಾವುದೇ ಪಬ್, ರೆಸ್ಟೋರೆಂಟ್, ಹೋಟೆಲ್, ಕೆಫೆಗಳು […]

ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿ

Wednesday, December 23rd, 2020
nandini burfi

ಮಂಗಳೂರು  : ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ ಸಿಹಿ ಉತ್ಸವ ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020 ರಿಂದ 07.01.2020 ರವರೆಗೆ ಆಚರಿಸುತ್ತಿದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ ಡೀಲರ್ ಕೇಂದ್ರಗಳಲ್ಲಿ, ನಂದಿನಿ […]

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ – ಜಿಲ್ಲಾಧಿಕಾರಿ ಆದೇಶ

Tuesday, December 22nd, 2020
chritsmas

ಮಂಗಳೂರು : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುವ ಹಿನ್ನೆಲೆ ಕ್ರಿಸ್ಮಸ್ ಹಾಗೂ 2021ರ ಹೊಸ ವರ್ಷ ಸಂಭ್ರಮಾಚರಣೆಯನ್ನು ಸರಳವಾಗಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು. ಅದರಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ […]

ಹೊಸ ವರ್ಷದ ಶುಭಾರಂಭ : ಧರ್ಮಸ್ಥಳದಲ್ಲಿ ಭಕ್ತರ ಗಡಣ

Wednesday, January 1st, 2020
ujire

ಉಜಿರೆ : ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವ ಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಹೊಸ ವರ್ಷ ಶುಭಾರಂಭದ ದಿನವಾದ ಬುಧವಾರ ನಾಡಿನೆಲ್ಲೆಡೆಯಿಂದ ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ದೇವರದರ್ಶನ ಪಡೆದು ಸೇವೆ ಸಲ್ಲಿಸಿದರು. ಹಲವು ಮಂದಿ ಪಾದಯಾತ್ರೆಯಲ್ಲಿ ಬಂದರೆ, ಕೆಲವರು ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದು ತಮ್ಮಸೇವೆ ಸಲ್ಲಿಸಿದ್ದಾರೆ. ಅನೇಕ ಮಂದಿ ಮುಡಿ ಅರ್ಪಿಸಿ (ತಲೆಕೂದಲು ತೆಗೆಸಿ) ನೇತ್ರಾವತಿ ನದಿಯಲ್ಲಿ ಪುಣ್ಯಸ್ನಾನ ಮಾಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ […]

ಎಲ್​ಪಿಜಿ ಬಳಕೆದಾರರಿಗೆ ಹೊಸ ವರ್ಷದ ಆರಂಭದಲ್ಲೇ ದರ ಏರಿಕೆ

Wednesday, January 1st, 2020
LPG

ನವದೆಹಲಿ : ಜನವರಿ 1ರಿಂದಲೇ ಜಾರಿಗೆ ಬರುವಂತೆ ದೇಶಾದ್ಯಂತ ಸಬ್ಸಿಡಿ ರಹಿತ ಎಲ್ಪಿಜಿ ಅಥವಾ ಅಡುಗೆ ಅನಿಲ ದರ ಏರಿಕೆಯಾಗಿದ್ದು, ಒಂದೇ ತಿಂಗಳ ಅಂತರದಲ್ಲಿ ಐದನೇ ಬಾರಿಗೆ ಹೆಚ್ಚಳವಾಗುವ ಮೂಲಕ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ಪ್ರತಿ ಸಿಲಿಂಡರ್ಗೆ 19 ಮತ್ತು 19.5 ರೂ. ಏರಿಕೆ ಕಂಡಿದ್ದು, ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗೆ ದೆಹಲಿಯಲ್ಲಿ 714 ರೂ. ಮತ್ತು ಮುಂಬೈನಲ್ಲಿ 684.50 ರೂ. ಇರುವುದಾಗಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ತಿಳಿಸಿದೆ. ಆದರೆ, […]

ಹೊಸ ವರ್ಷದ ಮೊದಲ ದಿನ 32 ಜನನ

Wednesday, January 3rd, 2018
new-year

ಮಂಗಳೂರು: ಹೊಸ ವರ್ಷ ಬದುಕಿನಲ್ಲಿ ಹೊಸ ಹರುಷ ಹಾಗೂ ಹೊಸ ಖುಷಿಯ ವಿಚಾರಗಳನ್ನು ತರಬೇಕು ಎನ್ನುವುದು ಎಲ್ಲರ ಮಹದಾಸೆ. ಇಂಥ ಸಂಭ್ರಮದ ಹೊಸ ವರ್ಷ ಉದಯಿಸುವ ಗಳಿಗೆಯಲ್ಲಿ ಸಂಸಾರದಲ್ಲಿ ಹೊಸ ಅತಿಥಿಯ ಆಗಮನವಾದರೆ ಆ ಕುಟುಂಬಕ್ಕೆ ಅದೆಷ್ಟು ಸಂತೋಷವಾಗಬಹುದು! ಹೌದು, ಎಲ್ಲರೂ ಪಟಾಕಿ ಸಿಡಿಸಿ ನರ್ತಿಸುತ್ತ 2018ನೇ ವರ್ಷವನ್ನು ಬರಮಾಡಿಕೊಳ್ಳುತ್ತಿದ್ದರೆ, ಅದೆಷ್ಟೊ ಕುಟುಂಬಗಳಲ್ಲಿ ಆ ಗಳಿಗೆಯಲ್ಲಿ ಮುದ್ದು ಕಂದಮ್ಮ ಗಳ ಜನನವಾಗಿದೆ. ದ.ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷದ ಮೊದಲ ದಿನ 32ಕ್ಕೂ ಹೆಚ್ಚು ಮಕ್ಕಳು ಜನಿಸಿದ್ದಾರೆ. ನಗರದ […]

ಹೊಸ ವರ್ಷ ಎಂದು ಕಂಠಪೂರ್ತಿ ಕುಡಿದ… ತಂದೆ ಮೇಲೆಯೇ ತಲವಾರ್‌ ಬೀಸಿದ!

Tuesday, January 2nd, 2018
Talwar-case

ಮಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿ ಕಂಠಪೂರ್ತಿ ಕುಡಿದು ಬಂದ ಮಗ ಮನೆಯಲ್ಲಿ ದಾಂಧಲೆ ನಡೆಸಿ ತಂದೆಯ ಮೇಲೆ ತಲವಾರ್‌ ದಾಳಿ ನಡೆಸಿದ ಘಟನೆ ಬೆಳ್ತಂಗಡಿಯ ಮಟ್ಲದಲ್ಲಿ ನಡೆದಿದೆ. ಮಟ್ಲದ ಜ್ಯೋತಿಷಿ ಮಂಜುನಾಥ್ ಎಂಬವವರ ಮಗ ನವೀನ್ ಈ ಕೃತ್ಯ ಎಸಗಿದವ. ಹೊಸ ವರ್ಷದ ಆಚರಣೆಯ ವೇಳೆ ಕಂಠಪೂರ್ತಿ ಕುಡಿದಿದ್ದ ನವೀನ್, ನಶೆಯಲ್ಲಿ ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾನೆ. ಬಳಿಕ ತಂದೆಯ ಮೇಲೆ ತಲವಾರ್‌ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.