ಹತ್ತೇ ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ರೆಬಲ್ ಸ್ಟಾರ್

Tuesday, March 11th, 2014
ಹತ್ತೇ ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ರೆಬಲ್ ಸ್ಟಾರ್

ಬೆಂಗಳೂರುಃ ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಾಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಶ್ ಅವರ ಆರೋಗ್ಯ ಗಣನೀಯ ಪ್ರಮಾಣದಲ್ಲಿ ಸುಧಾರಿಸಿದೆ. ಇನ್ನು ಹತ್ತೇ ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳುವ ಸಾಧ್ಯತೆಗಳಿವೆ. ಈಗಾಗಲೆ ಅವರಿಗೆ ಹಾಕಲಾಗಿದ್ದ ವೆಂಟಿಲೇಟರನ್ನು ತೆಗೆಯಲಾಗಿದ್ದು ವಿಶೇಷ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. ಮೌಂಟ್ ಎಲಿಜತ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಇದುವರೆಗೂ ದ್ರವಾಹಾರ ಸೇವಿಸುತ್ತಿದ್ದ ಅವರು ಈಗ ಲಘು ಉಪಹಾರ ಸೇವಿಸುವಂತಾಗಿದೆ.  ಹತ್ತೇ ದಿನಗಳಲ್ಲಿ […]

ಅಂಬರೀಶ್‌: 15 ದಿನಗಳ ಬಳಿಕ ಮಾತನಾಡಿದ

Friday, March 7th, 2014
Ambarish-Suma

ಬೆಂಗಳೂರು : ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಶ್‌ ಅವರ ಅರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದ್ದು ಕಳೆದ 15 ದಿನಗಳ ಬಳಿಕ ಇದೇ ಮೊದಲ ಬಾರಿ ಕುಟುಂಬ ಸದಸ್ಯರೊಡನೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ. ಅಂಬರೀಶ್‌ ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರನ್ನು ನಿನ್ನೆ ತೆಗೆದಿದ್ದು ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡು ಬಂದಿದೆ ಹೀಗಾಗಿ ಇನ್ನೆರಡು ದಿನಗಳಲ್ಲಿ ಸಾಮಾನ್ಯ ವಾರ್ಡ್‌ಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ . ಮೌಂಟ್ […]

ಅಂಬಿ ಆರೋಗ್ಯದಲ್ಲಿ ಚೇತರಿಕೆ

Thursday, March 6th, 2014
Ambarish

ಸಿಂಗಾಪುರ: ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಅನ್ನು ತೆಗೆಯಲಾಗಿದೆ. ಅಂಬಿ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾತನಾಡಿರುವ ಅವರ ಕುಟುಂಬ, ಅಂಬರೀಷ್ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಶೀಘ್ರವೇ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ ಎಂದು ತಿಳಿಸಿದ್ದಾರೆ. ಅಂಬರೀಷ್ ಅವರು ಈಗ ಗುಣಮುಖರಾಗಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಅನ್ನು ತೆಗೆಯಲಾಗಿದೆ. ಈಗ ಅವರು ಸ್ವತಂತ್ರವಾಗಿ ಉಸಿರಾಡುತ್ತಿದ್ದಾರೆ ಎಂದು ಅಂಬರೀಷ್ […]

ಹೆಚ್ಚಿನ ಚಿಕಿತ್ಸೆಗಾಗಿ ನಟ ಅಂಬರೀಷ್ ಸಿಂಗಾಪುರಕ್ಕೆ ಶಿಫ್ಟ್

Saturday, March 1st, 2014
Ambarish

ಬೆಂಗಳೂರು: ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಾಪುರಕ್ಕೆ ಶನಿವಾರ ಸ್ಥಳಾಂತರಿಸಲಾಗಿದೆ. ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ಕರೆದೊಯ್ಯಲು ಖ್ಯಾತ ನಟ ಚಿತ್ರನಟ ರಜನಿಕಾಂತ್ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಂಬರೀಷ್ ಅವರನ್ನು ಇಂದು ಬೆಳಗ್ಗೆ 6.45ರ ಸುಮಾರಿಗೆ ವಿಕ್ರಂ ಆಸ್ಪತ್ರೆಯಿಂದ ಸಿಂಗಾಪುರಕ್ಕೆ ಕರೆದೊಯ್ಯೂಲಾಗಿದೆ. ಅಂಬರೀಷ್ ಅವರ ಜೊತೆಗೆ ಪತ್ನಿ ಸುಮಲತಾ, ಹಾಗೂ ವಿಕ್ರಂ ಆಸ್ಪತ್ರೆಯ ಇಬ್ಬರು ವೈದ್ಯರ ತಂಡ ಇಂದು ಬೆಳಗ್ಗೆ ವಿಶೇಷ […]

ಸದ್ಯಕ್ಕೆ ಅಂಬರೀಷ್ ಸಿಂಗಾಪುರಕ್ಕೆ ಸ್ಥಳಾಂತರ ಇಲ್ಲ: ಡಾ.ಗುಲೇರಿಯಾ

Friday, February 28th, 2014
Ambarish

ಬೆಂಗಳೂರು: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಹಿರಿಯ ನಟ, ವಸತಿ ಸಚಿವ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯುವ ನಿರ್ಧಾರವನ್ನು ಸದ್ಯಕ್ಕೆ ಕೈ ಬಿಡಲಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ರಣದೀಪ್ ಗುಲೇರಿಯಾ ಅವರು ಶುಕ್ರವಾರ ಹೇಳಿದ್ದಾರೆ. ಅಂಬರೀಷ್ ಚಿಕಿತ್ಸೆ ಪಡೆಯುತ್ತಿರುವ ವಿಕ್ರಂ ಆಸ್ಪತ್ರೆಗೆ ಭೇಟಿ, ಅಂಬಿ ಆರೋಗ್ಯ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗುಲೇರಿಯಾ, ಸಚಿವ ಅಂಬರೀಷ್ ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಇನ್ನು ಕೆಲವು ವರದಿಗಳು ಬರಬೇಕಿದೆ. […]

ಹೆಚ್ಚಿನ ಚಿಕಿತ್ಸೆಗಾಗಿ ಅಂಬಿ ವಿದೇಶಕ್ಕೆ?

Friday, February 28th, 2014
Ambarish

ಬೆಂಗಳೂರು: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಹಿರಿಯ ನಟ, ವಸತಿ ಸಚಿವ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ. ಕಳೆದ ಒಂದು ವಾರದಿಂದ ಅಂಬರೀಷ್ ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂರು ದಿನಗಳ ಹಿಂದೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಂಬಿ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ವೈದ್ಯರು ಹಾಗೂ ಅಂಬರೀಷ್ ಅವರ ಪತ್ನಿ ಸುಮಲತಾ ಅವರೊಂದಿಗೆ ಮಾತುಕತೆ ನಡೆಸಿದ ರಜನಿ, ಹೆಚ್ಚಿನ ಚಿಕಿತ್ಸೆಗಾಗಿ ಅಂಬರೀಷ್ ಅವರನ್ನು ಸಿಂಗಾಪುರದ […]

ಅಂಬಿ ಆರೋಗ್ಯ ಮತ್ತಷ್ಟು ಚೇತರಿಕೆ ಇಂದು ವೆಂಟಿಲೇಟರ್ ತೆಗೆಯುವ ಸಾಧ್ಯತೆ

Tuesday, February 25th, 2014
Ambarish

ಬೆಂಗಳೂರು: ಅನಾರೋಗ್ಯಕ್ಕೀಡಾಗಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದ ನಟ ಮತ್ತು ಸಚಿವ ಅಂಬರೀಶ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಗ್ಗೆ ವೆಂಟಿಲೇಟರ್ ತೆಗೆಯುವ ಸಾಧ್ಯತೆ ಇದೆ. ಪ್ರಸ್ತುತ ಅಂಬರೀಶ್ ಅವರಿಗೆ ಕೃತಕ ಉಸಿರಾಟವನ್ನು ಮುಂದುವರೆಸಲಾಗಿದ್ದು, ದೇಶದಲ್ಲಿ ಶೇಖರಣೆಯಾಗಿದ್ದ ನೀರಿನ ಅಂಶವನ್ನು ಹೊರತೆಗೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ರತಿ ಗಂಟೆಗೊಮ್ಮೆ ವೈದ್ಯರು ಅಂಬರೀಶ್ ಅವರ ಆರೋಗ್ಯ ವಿಚಾರಣೆ ಮಾಡುತ್ತಿದ್ದು, ಅಂಬಿ ಆರೋಗ್ಯದ ಕುರಿತು ತೀವ್ರ ನಿಗಾ ವಹಿಸಿದ್ದಾರೆ. ಅಂಬರೀಶ್ ಅವರ ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ […]

ಅಂಬಿಗೆ ಇನ್ನೂ 2 ದಿನ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ

Monday, February 24th, 2014
Ambarish

ಬೆಂಗಳೂರು: ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ರಾಜ್ಯಾದ್ಯಂತ ವಿಶೇಷ ಪೂಜೆ ಹಾಗೂ ಮೋಮ ನಡೆಸುತ್ತಿದ್ದಾರೆ. ನಗರದ ವಿಕ್ರಂ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿ ಅಂಬಿಗೆ ಚಿಕಿತ್ಸೆ ಮುಂದುವರೆದಿದ್ದು, ಆಸ್ಪತ್ರೆಯ ಮುಂದೆ ಅವರ ಅಭಿಮಾನಿಗಳು ಇಂದು ಬೆಳಗ್ಗೆಯಿಂದ ಮೃತ್ಯುಂಜಯ ಹಾಗೂ ಧನ್ವಂತರಿ, ಮಹಾಗಣಪತಿ ಮತ್ತು ನವಗ್ರಹ ಹೋಮ ನಡೆಸುತ್ತಿದ್ದಾರೆ. ಅಂಬಿಗೆ ಇನ್ನೂ 2 ದಿನ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ, ಅಂಬರೀಷ್ ಅವರಿಗೆ ಇನ್ನು […]

ಅಂಬಿ ಚನ್ನಾಗಿದ್ದಾರೆ, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ: ಸುಮಲತ

Monday, February 24th, 2014
ಅಂಬಿ ಚನ್ನಾಗಿದ್ದಾರೆ, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ: ಸುಮಲತ

ಬೆಂಗಳೂರು: ಅಂಬರೀಶ್ ಅವರು ಚನ್ನಾಗಿದ್ದಾರೆ, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಅಂಬಿ ಧರ್ಮಪತ್ನಿ ಸುಮಲತ ಅಂಬರೀಶ್ ಅವರು ಭಾನುವಾರ ತಿಳಿಸಿದ್ದಾರೆ. ಅಂಬರೀಶ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಅಂಬಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಅಲ್ಲದೆ ಅಂಬಿ ಅವರ ಆರೋಗ್ಯ  ಕುರಿತಾಗಿ ನಿಖರ ಮಾಹಿತಿ ಸಿಗದೇ ಅಭಿಮಾನಿಗಳು ಕಂಗಾಲಾಗಿದ್ದರು. ಈ ಹಿನ್ನೆಲೆಯಲ್ಲಿ ಸುಮಲತ ಅವರು ಸುದ್ದಿಗೋಷ್ಠಿ ನಡೆಸಿ, ಅಂಬರೀಶ್ ಅವರು ಚನ್ನಾಗಿದ್ದಾರೆ. ಅವರಿಗೆ ಯಾವುದೇ ತೊಂದರೆ ಇಲ್ಲ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. […]

ಅಂಬರೀಷ್ ಆರೋಗ್ಯ ಸ್ಥಿರ

Saturday, February 22nd, 2014
Ambarish

ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಚಿಕಿತ್ಸೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಸತೀಶ್ ನಾಯಕ್ ಅವರು, ಸದ್ಯ ಅಂಬರೀಷ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇನ್ನು ಎರಡು, ಮೂರು ದಿನದಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಅಂಬರೀಷ್ ಅವರಿಗೆ ಈಗ ವೆಂಟಿಲೇಟರ್ ಅಳವಡಿಸಲಾಗಿದ್ದು, ವೆಂಟಿಲೇಟರ್ ಮೂಲಕವೇ […]