ಉಭಯ ಸದನಗಳಲ್ಲಿ ಲೋಕಾಯುಕ್ತ ಸದ್ದು

Wednesday, February 26th, 2014
Jagadish-Shettar

ಬೆಂಗಳೂರುಃ ಲೋಕಾಯುಕ್ತ ಕಾಯಿದೆ ತಿದ್ದುಪಡಿ ವಿಚಾರವು ಉಭಯ ಸದನಗಳಲ್ಲಿ ಮಂಗಳವಾರ ಸದ್ದು ಮಾಡಿತು. ಲೋಕಾಯುಕ್ತ ಕಾಯಿದೆಯನ್ನು ರಾಜ್ಯ ಸರ್ಕಾರ ಶಕ್ತಿ ಹೀನ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದರೆ, ಭ್ರಷ್ಟಾಚಾರ ನಿಯಂತ್ರಣ ಎನ್ನುವುದು ಕಾಂಗ್ರೆಸ್ ಪಾಲಿಗೆ ಘೋಷಣೆಗೆ ಮಾತ್ರ ಸೀಮಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಡಿ.ವಿ.ಸದಾನಂದಗೌಡ ಲೇವಡಿ ಮಾಡಿದರು. ಲೋಕಾಯುಕ್ತ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ಸರ್ಕಾರ ಅದನ್ನು ಶಕ್ತಿಹೀನಗೊಳಿಸಲು ನಿರ್ಧರಿಸಿದಂತಿದೆ. ಕ್ಯಾಬಿನೆಟ್‌ನಲ್ಲೇ ಇದಕ್ಕೆ ಅನುಮತಿ ನೀಡಿ, ವಾಪಸ್ ತೆಗೆದುಕೊಳ್ಳುವ ಗೊಂದಲ […]