ಮಂಗಳೂರಿನಲ್ಲಿ 2ನೇ ಸುತ್ತಿನ ಮನೆ ಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ

Tuesday, November 7th, 2017
mane manege congress

ಮಂಗಳೂರು:ರಾಜ್ಯದಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ  ಚಟುವಟಿಕೆ ಬಿರುಸುಗೊಳಿಸಿವೆ. ಇನ್ನೊಂದೆಡೆ ಜೆಡಿಎಸ್ ಕರ್ನಾಟಕ ವಿಕಾಸ ವಾಹಿನಿ ಯಾತ್ರೆ ಆರಂಭಿಸಲಿದೆ. ಬಿಜೆಪಿ ಒಂದೆಡೆ ಪರಿವರ್ತನಾ ಯಾತ್ರೆ ಆರಂಭಿಸಿದರೆ. ಕಾಂಗ್ರೆಸ್ ಈಗಾಗಲೇ ರಾಜ್ಯದೆಲ್ಲೆಡೆ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನಕ್ಕೆ ಚಾಲನೆ ನೀಡಿ ಚುನಾವಣಾ ಸಿದ್ದತೆ ಆರಂಭಿಸಿದೆ. ಮನೆ ಮನೆ ಕಾಂಗ್ರೆಸ್ ಅಭಿಯಾನದ ಅಂಗವಾಗಿ ಮಂಗಳೂರಿನಲ್ಲಿ 2ನೇ ಸುತ್ತಿನ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಗಿದೆ. ನಗರದ ಆಕಾಶ ಭವನ ಪ್ರದೇಶದಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಉಸ್ತುವಾರಿ […]

ಬಂಟ್ವಾಳ ತಾಲೂಕು ಜಿ.ಪಂ. ಹಾಗೂ ತಾ.ಪಂ.ನಲ್ಲಿ ಕಾಂಗ್ರೆಸ್ಸ್ ಮೇಲುಗೈ

Tuesday, February 23rd, 2016
Bantwal TP ZP

ಬಂಟ್ವಾಳ: ತಾಲೂಕಿನಲ್ಲಿ ಜಿ.ಪಂ. ಹಾಗೂ ತಾ.ಪಂ.ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸ್ ಮೇಲುಗೈ ಸಾಧಿಸಿದೆ.ತಾಲೂಕು ಪಂಚಾಯತ್‍ನ 34 ಸ್ಥಾನಗಳ ಪೈಕಿ ಕಾಂಗ್ರೆಸ್ಸ್ 23 ಹಾಗೂ ಬಿಜೆಪಿ 11ರಲ್ಲಿ ಗೆಲುವು ಸಾಧಿಸಿದ್ದು, ಜಿ.ಪಂ.ನ 9 ಕ್ಷೇತ್ರಗಳ ಪೈಕಿ ಕಾಂಗ್ರೆಸ್ಸ್ 5 ಹಾಗೂ ಬಿಜೆಪಿ 4 ಸ್ಥಾನಗಳಲ್ಲಿ ಜಯಭೇರಿ ಸಾಧಿಸಿದೆ. ಬಂಟ್ವಾಳ ತಾಲೂಕು ಪಂಚಾಯತ್ ಆಡಳಿತ ಕೈ ವಶವಾಗಿದೆ. ಜಿ.ಪಂ. ಕ್ಷೇತ್ರ: ಸಂಗಬೆಟ್ಟು – ತುಂಗಪ್ಪ ಬಂಗೇರ(ಬಿಜೆಪಿ), ಸರಪಾಡಿ- ಪದ್ಮಶೇಖರ್ ಜೈನ್(ಕಾಂಗ್ರೆಸ್), ಪುದು-ರವೀಂದ್ರ ಕಂಬಳಿ(ಬಿಜೆಪಿ), ಗೋಳ್ತಮಜಲು-ಕಮಲಾಕ್ಷಿ ಪೂಜಾರಿ(ಬಿಜೆಪಿ), ಮಾಣಿ – ಮಂಜುಳಾ […]

ಕೇಂದ್ರ ಸರಕಾರದ ಬೆಲೆಯೇರಿಕೆ ವಿರುದ್ದ ಕುಂಬಳೆಯಲ್ಲಿ ಕಾಂಗ್ರೆಸ್ಸ್ ಪ್ರತಿಭಟನೆ

Tuesday, January 12th, 2016
congress Protest

ಕುಂಬಳೆ: ನರೇಂದ್ರಮೋದಿಯವರ ನೇತೃತ್ವದ ಕೇಂದ್ರ ಸರಕಾರ ನೀಡಿರುವ ಆಶ್ವಾಸನೆಗಳನನು ಹುಸಿಗೊಳಿಸಿ ಜನದ್ರೋಹ ಕಾರ್ಯತಂತ್ರಗಳನ್ನು ಹೆಣೆದು ಜನ ಸಾಮಾನ್ಯರ ಬದುಕನ್ನು ಹತಾಶೆಗೆ ತಳ್ಳುತ್ತಿದೆಯೆಂದು ಜಿಲ್ಲಾ ಕಾಂಗ್ರೆಸ್ಸ್ ಉಪಾಧ್ಯಕ್ಷ ಹಕೀಂ ಕುನ್ನಿಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಡಲ ಕಾಂಗ್ರೆಸ್ಸ್ ನೇತೃತ್ವದಲ್ಲಿ ಕೇಂದ್ರ ಸರಕಾರದ ಬೆಲೆಯೇರಿಕೆ ಕ್ರಮಗಳ ವಿರುದ್ದ ಮಂಗಳವಾರ ಕುಂಬಳೆ ಅಂಚೆ ಕಚೇರಿಗೆ ನಡೆಸಿದ ಪ್ರತಿಭಟನೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮೋದಿ ಜನರನ್ನು ಮರುಳುಗೊಳಿಸುವ ಹೇಳಿಕೆಗಳನ್ನಷ್ಟೇ ನೀಡುತ್ತಿದ್ದಾರೆ. ಕಾರ್ಯಕ್ಷಮತೆಯ ಯಾವುದೇ ಯೋಜನೆಗಳನ್ನು ಜನ ಸಾಮಾನ್ಯರಿಗೆ ನೀಡುವಲ್ಲಿ ವಿಫಲವಾಗಿದೆಯೆಂದು ಅವರು ಟೀಕಿಸಿದರು. ಮಂಡಲ […]

ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆ

Wednesday, March 12th, 2014
CP-Yogeshwar

ನವದೆಹಲಿ: ಚನ್ನಪಟ್ಟಣ ಕ್ಷೇತ್ರದ ಸಮಾಜವಾದಿ ಪಕ್ಷದ ಏಕೈಕ ಶಾಸಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಂಗಳವಾರ ಎಐಸಿಸಿ ಯೋಗೇಶ್ವರ್ಗೆ ಹಸಿರು ನಿಶಾನೆ ನೀಡಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಲೋಕಸಭಾ ಉಪ ಚುನಾವಣೆ ವೇಳೆ ಪರೋಕ್ಷವಾಗಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯೊಂದಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಲೆಕ್ಕಾಚಾರಗಳು ಬದಲಾಗಿವೆ. ಜೆಡಿಎಸ್ ವಶದಲ್ಲಿದ್ದ ಆ ಕ್ಷೇತ್ರವನ್ನು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಶಪಡಿಸಿಕೊಂಡಿತ್ತು. ಡಿ.ಕೆ.ಶಿವಕುಮಾರ್ ಅವರ ಸಹೋದರ […]

26 ಕೈಯಾಳುಗಳು ಅಂತಿಮ, ಲಕ್ಷ್ಮಿ, ನಿವೇದಿತ್, ನಿಲೇಕಣಿ, ರಮ್ಯಾ, ಸುರೇಶ್, ಕುಮಾರ್ ಕ್ಲಿಯರ್

Saturday, March 8th, 2014
Janardhana-poojary

ನವದೆಹಲಿ: ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನ ನಿರೀಕ್ಷಿಸಿರುವ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ 26 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ. ಆಂತರಿಕ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಮಂಗಳೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳ ಪೈಕಿ ಮಂಗಳೂರಿಗೆ ಜನಾರ್ದನ ಪೂಜಾರಿ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಹಿಂದೆಯೇ ನಿರ್ಧರಿಸಿದ್ದಂತೆ ಎಲ್ಲ 9 ಹಾಲಿ ಸಂಸದರು ಟಿಕೆಟ್ ಗಿಟ್ಟಿಸಿದ್ದಾರೆ.  ಶುಕ್ರವಾರ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸುದೀರ್ಘ ಚರ್ಚೆ ನಂತರ […]

ಸರಕಾರಿ ಆಧಾರ್: ನಿಲೇಕಣಿ ವಿರುದ್ಧ ಬಿಜೆಪಿ ದೂರು

Saturday, March 8th, 2014
Nandan-Nilekani

ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ಸಿನ ಘೋಷಿತ ಅಭ್ಯರ್ಥಿ ನಂದನ್ ನಿಲೇಕಣಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಸದ್ಯಕ್ಕೆ ‘ಆಧಾರ್’ ಯೋಜನೆಯ ಅಧ್ಯಕ್ಷರಾಗಿರುವ ನಂದನ್ ನಿಲೇಕಣಿ ಅವರು ತಮ್ಮ ಅಧಿಕಾರ ಸ್ಥಾನವನ್ನು ದುರುಪಯೋಗ ಮಾಡಿಕೊಂಡು ಕೇಂದ್ರದ ಆಧಾರ್ ಸರಕಾರಿ ಯೋಜನೆಯನ್ನು ತಮ್ಮ ಸ್ವಂತ ಕಾರ್ಯಕ್ರಮದಂತೆ ಕ್ಷೇತ್ರದಾದ್ಯಂತ ಬಿಂಬಿಸಿಕೊಳ್ಳುತ್ತಿದ್ದಾರೆ. ಇದರಿಂದ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ದೂರಿನಲ್ಲಿ ಬಿಜೆಪಿ ಗಮನ ಸೆಳೆದಿದೆ. ಸರಕಾರಿ ಆಧಾರ್: ನಿಲೇಕಣಿ ವಿರುದ್ಧ ಬಿಜೆಪಿ ದೂರು ಮಾರ್ಚ್ 5ರಿಂದ ದೇಶಾದ್ಯಂತ […]

ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಆರೆಸ್ಸೆಸ್ಸ್

Friday, March 7th, 2014
Rahul-Gandhi

ನವದೆಹಲಿ: ಗಾಂಧಿಯವರ ಹತ್ಯೆಯಲ್ಲಿ ಆರೆಸ್ಸೆಸ್ಸ್ ಕೈವಾಡವಿದೆ ಎಂದು ಹೇಳಿರುವ ರಾಹುಲ್ ಗಾಂಧಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೆಸ್ಸೆಸ್ಸ್ ಹೇಳಿದೆ. ರಾಹುಲ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಆರೆಸ್ಸೆಸ್ಸ್ ಹಿರಿಯ ನೇತಾರ ರಾಮ್ ಮಾಧವ್, ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಆರೆಸ್ಸೆಸ್ಸ್ ಗಾಂಧೀಜಿಯವರನ್ನು ಹತ್ಯೆಗೈದಿತ್ತು. ಆಗ ಅವರೇ (ಬಿಜೆಪಿ) ಗಾಂಧಿ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಅವರು ಸರ್ದಾರ್ ಪಟೇಲ್ ಮತ್ತು ಗಾಂಧೀಜಿಯವರನ್ನು ವಿರೋಧಿಸುತ್ತಿದ್ದರು ಎಂದು ಮಹಾರಾಷ್ಟ್ರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಹೇಳಿದ್ದರು.

ಲೋಕ ಸಮೀಕ್ಷೆಯಲ್ಲಿ ಮೋದಿ ಮುಂದು ರಾಗಾ ಹಿಂದೆ, ಎನ್‌ಡಿಎನತ್ತ ಮತದಾರ, ಯುಪಿಎ ಕಥೆ ಹರೋಹರ

Friday, March 7th, 2014
Narendra-Modi

ನವದೆಹಲಿ: ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದ ರುಚಿ ಅನುಭವಿಸುತ್ತಿರುವ ಕಾಂಗ್ರೆಸ್ ಈ ಬಾರಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಬ್ಬರಕ್ಕೆ ಧೂಳೀಪಟವಾಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗದ್ದುಗೆಯ ಸನಿಹ ಬಂದು ನಿಲ್ಲಲಿದೆ. ಎನ್‌ಡಿಎ 212- 232 ಸ್ಥಾನಗಳನ್ನು ಗೆದ್ದರೆ, ಯುಪಿಎ 119ರಿಂದ 139 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಿಎನ್‌ಎನ್‌ಐಬಿನ್- ಲೋಕನೀತಿ- ಸಿಎಸ್‌ಡಿಎಸ್ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ಬಿಜೆಪಿ ಅತಿದೊಡ್ಡ ಪಕ್ಷ: ಒಂದು ವೇಳೆ ತಕ್ಷಣಕ್ಕೆ ಚುನಾವಣೆ ನಡೆದರೆ ಬಿಜೆಪಿ […]

ಲೋಕಸಮರ: ಮಾಜಿ ಸಿಎಂಗಳ ವಿರುದ್ಧ ಮಹಿಳೆಯರ ರಣಕಹಳೆ

Thursday, March 6th, 2014
Lok-Sabha-Election

ಬೆಂಗಳೂರು: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿ ನಿಂತಿವೆ. ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಾಳೆಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿದ್ದು, ಬಹುತೇಕ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಖೈರುಗೊಂಡಿದ್ದರೂ, ಯಾವುದೇ ಪಕ್ಷ ಇದುವರೆಗೂ ಪಟ್ಟಿ ಬಿಡುಗಡೆ ಮಾಡಿಲ್ಲ. ಆದರೆ ಕೆಲವು ಪ್ರಮುಖ ಕ್ಷೇತ್ರಗಳಿಗೆ ಪ್ರಭಾವಿ ಅಭ್ಯರ್ಥಿಗಳ ಆಯ್ಕೆಗೆ ತೆರೆಮರೆಯಲ್ಲಿ ಕಸರತ್ತು ನಡೆದಿದೆ. ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರ ವಿರುದ್ಧ ತಮ್ಮ ಸೊಸೆ […]

ಅಕ್ರಮಕ್ಕೆ ಅಡ್ಡಿಯಾದ ಅಧಿಕಾರಿಗೆ ರಜೆ ಸಜೆ!

Thursday, March 6th, 2014
Siddaramaiah

ಬೆಂಗಳೂರು: ರಜೆ ಬೇಕೆ, ಪ್ರಾಮಾಣಿಕವಾಗಿ ಕೆಲಸ ಮಾಡಿ! ರಾಜ್ಯ ಸರ್ಕಾರ ಪ್ರಾರಂಭಿಸಿರುವ ನೂತನ ‘ರಜಾ ಭಾಗ್ಯ’ ಯೋಜನೆಯ ಪ್ರಥಮ ಷರತ್ತಿದು! ಕಾಂಗ್ರೆಸ್ ಪ್ರಣಾಳಿಕೆ ಅಥವಾ ಬಜೆಟ್‌ನಲ್ಲಿ ಘೋಷಿಸದೇ ಅನುಷ್ಠಾನಕ್ಕೆ ತಂದಿರುವ ವಿನೂತನ ಯೋಜನೆ!! ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಭ್ರಷ್ಟಾಚಾರ ನಿಗ್ರಹದ ರೀತಿಯಿದು! ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಒಂದು ದಿನ ರಜೆ ಸಿಗುವುದೇ ದೊಡ್ಡ ಮಾತು. ಆದರೆ ಒಬ್ಬ ಹಿರಿಯ ಹಾಗೂ ಪ್ರಾಮಾಣಿಕ […]