ಧರ್ಮಸ್ಥಳಕ್ಕೆ ರಾಘವೇಶ್ವರ ಭಾರತೀ ಸ್ವಾಮೀಜಿ ಭೇಟಿ

Friday, November 10th, 2017
darmasthala

ಉಜಿರೆ: ಹೊಸನಗರ ಶ್ರೀ ರಾಮಚಂದ್ರ್ರಾಪುರ ಮಠದ ಸಮಸ್ಯೆಒಂದರ ಪರಿಹಾರದ ಬಗ್ಗೆ ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿಕೊಂಡಾಗ ದೇವರ ಅಭಯ ಮತ್ತುರಕ್ಷೆ ಮಠಕ್ಕೆದೊರಕಿ ಸಮಸ್ಯೆ ಸುಲಲಿತವಾಗಿ ಪರಿಹಾರಗೊಂಡಿದೆ. ಶುಕ್ರವಾರ ಶ್ರೀ ಸ್ವಾಮಿಯದರ್ಶನ ಹಾಗೂ ಸೇವೆಯಿಂದಧನ್ಯತೆ, ಶಾಂತಿ ಹಾಗೂ ತೃಪ್ತಿ ದೊರಕಿದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಸ್ವಾಮೀಜಿಯವರು ದೇವರದರ್ಶನ ಮಾಡಿ ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು.ಅವರ 286 ಮಂದಿ ಭಕ್ತರು ೫ ಆವರ್ತಗಳಲ್ಲಿ 1430 ರುದ್ರ ಪಠಣ ಮಾಡಿದರು.ಮಠ ಹಾಗೂ ತಮ್ಮ ಗುರುಗಳಿಗಾಗಿ ರುದ್ರಪಠಣ ಮಾಡಿದ ಭಕ್ತರ ಸೇವೆಯನ್ನುಅವರು […]

ಧರ್ಮಸ್ಥಳ ಲಕ್ಷ ದೀಪೋತ್ಸವ : ಸಮಾಲೋಚನಾ ಸಭೆ

Tuesday, October 31st, 2017
darmasthala

ಮಂಗಳೂರು: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ನವೆಂಬರ್ 13 ರಿಂದ18 ರ ವರೆಗೆ ನಡೆಯಲಿದ್ದು ಪೂರ್ವ ಸಿದ್ಧತೆಗಳ ಬಗ್ಗೆ ಸಮಾಲೋಚನಾ ಸಭೆ ಮಂಗಳವಾರ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ನಡೆಯಿತು. ಧರ್ಮಸ್ಥಳಕ್ಕೆ ಮಂಗಳೂರು, ಪುತ್ತೂರು, ಪೆರಿಯಶಾಂತಿ, ಚಾರ್ಮಾಡಿ, ಪಟ್ಟಮೆ ಕಾರ್ಕಳ, ಬೆಳಾಲು, ನೆರಿಯಾ ಮೊದಲಾದ ಊರುಗಳಿಂದ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಬಿ.ರಮಾನಾಥರೈ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೆ.ಎಸ್.ಆರ್.ಟಿ.ಸಿ. ವತಿಯಿಂದ ರಾಜ್ಯದ ವಿವಿಧ ಭಾಗಗಳಿಂದ ವಿಶೇಷ ಬಸ್ ಸೌಲಭ್ಯ ಒದಗಿಸುವುದಾಗಿ ಅಧಿಕಾರಿಗಳು ತಿಳಸಿದರು. ಆರೋಗ್ಯ […]

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ, ಮಂಜುನಾಥನ ದರ್ಶನ

Monday, October 30th, 2017
modi visit

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪಡೆದರು. ಬೆಳಗ್ಗೆ 10:40ರ ಸುಮಾರಿಗೆ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಮೇಯರ್‌ ಕವಿತಾ, ಸಚಿವ ಖಾದರ್‌ ಕೇಂದ್ರ ಸಚಿವ ಅನಂತ್‌ಕುಮಾರ್‌ ಹಾಗೂ ಬಿಜೆಪಿ ನಾಯಕರು ಆತ್ಮೀಯವಾಗಿ ಬರ ಮಾಡಿಕೊಂಡರು. ನಂತರ ಪ್ರಧಾನಿ ಹೆಲಿಕಾಪ್ಟರ್‌ ಮೂಲಕ ನೇರವಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದರು. ಬೆಳಗ್ಗೆ 10:40ರ ಸುಮಾರಿಗೆ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಮೇಯರ್‌ ಕವಿತಾ, ಸಚಿವ ಖಾದರ್‌ ಕೇಂದ್ರ ಸಚಿವ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶದ ಯಶಸ್ವಿಗೆ ಸರ್ವರ ಸಹಕಾರ ಅಗತ್ಯ

Saturday, October 28th, 2017
Darmasthala

ಮಂಗಳೂರು: ಇದೇ 29 ರಂದು ಭಾನುವಾರ ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಇದರ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ತಿಳಿಸಿದ್ದಾರೆ. ಅವರು ಶುಕ್ರವಾರ ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಹೊಸ ಕಾರ್ಯಕ್ರಮಗಳನ್ನು ಉದ್ಘಾಟಿಸುವರು. ಸಮಾವೇಶ […]

ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಸಿಎಂ ಭೇಟಿ

Monday, October 23rd, 2017
Darmasthala

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ, ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಟಿ.ಬಿ. ಜಯಚಂದ್ರ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್‌ ಡಿಸೋಜ ಸೇರಿದಂತೆ ಹಲವರು ಜೊತೆಯಲ್ಲಿದ್ದು ಸಾಥ್‌ ನೀಡಿದರು

ಧರ್ಮಸ್ಥಳ: ಕಾನೂರಾಯಣ ಚಿತ್ರಕ್ಕೆ ಚಾಲನೆ, ಗ್ರಾಮಾಭಿವೃದ್ಧಿ ಯೋಜನೆಗೆ ಒತ್ತು

Saturday, October 21st, 2017
Kanurayana

ಮಂಗಳೂರು: ‘ಕಾನೂರಾಯಣ’ ಚಿತ್ರಕ್ಕೆ ಹೇಮಾವತಿ ಹೆಗ್ಗಡೆ ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರೇ ಸೇರಿಕೊಂಡು ನಿರ್ಮಾಣ ಮಾಡುತ್ತಿರುವ ಚಿತ್ರ ಕಾನೂರಾಯಣ. ಧರ್ಮಸ್ಥಳದಲ್ಲಿ  ನಡೆದ ಸಭಾ ಕಾರ್ಯಕ್ರಮವನ್ನು ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರಿತು ಈ ಸಿನಿಮಾ ನಿರ್ಮಾಣವಾಗಲಿದ್ದು ಗ್ರಾಮಾಭಿವೃದ್ಧಿ ಮೂಲಕ ಬದುಕು ಕಟ್ಟಿಕೊಂಡವರು ಈ ಸಿನಿಮಾ ಮಾಡುತ್ತಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸದಸ್ಯರು ತಲಾ 20 ರೂ. ಗಳನ್ನು ಈ ಸಿನಿಮಾಕ್ಕಾಗಿ ನೀಡಿದ್ದು ಬಹು ನಿರ್ಮಾಪಕರ ಸಿನಿಮಾ ಇದಾಗಲಿದೆ. 4 ಕೋಟಿ […]