ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ:

Thursday, December 10th, 2015
Darmasthala Deepotsava

ಧರ್ಮಸ್ಥಳ : ಲಕ್ಷದೀಪೋತ್ಸವ ಸಂದರ್ಭದಲ್ಲಿ ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ ಎಂಬತ್ತಮೂರನೆ ಅಧಿವೇಶನವನ್ನು ಖ್ಯಾತ ಸಂಶೋಧಕ ಡಾ. ಷ. ಶೆಟ್ಟರ್ ಉದ್ಘಾಟಿಸಿ ಮಾತನಾಡಿದರು. ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ. ಮುಕ್ತ ಮನಸ್ಸಿನಿಂದ ಇಂದು ಸಂಶೋಧನೆ ಮಾಡುವುದೇ ಅಪರಾಧವಾಗಿದೆ ಎಂದು […]

ಧರ್ಮಸ್ಥಳದ ಸೇವಾ ಗಂಗೆ ರಾಷ್ಟ್ರವ್ಯಾಪಿ ಪಸರಿಸಿದೆ : ವಿಶ್ವೇಶತೀರ್ಥ ಸ್ವಾಮೀಜಿ

Friday, March 20th, 2015
Darmasthala

ಧರ್ಮಸ್ಥಳ : ಇಲ್ಲಿಗೆ ಬರುವ ಭಕ್ತರ ಅಭೀಷ್ಟಗಳು ನೆರವೇರುತ್ತವೆ. ಧರ್ಮಸ್ಥಳದಲ್ಲಿ ನಿತ್ಯವೂ ನಡೆಯುವ ಚತುರ್ವಿಧ ದಾನಗಳು ಹಾಗೂ ಸೇವಾ ಕಾರ್ಯಗಳು ಇಂದು ರಾಷ್ಟ್ರವ್ಯಾಪಿ ಪಸರಿಸಿದ್ದು ಸರ್ವರಿಗೂ ಕಲ್ಯಾಣಕಾರಿಯಾಗಿವೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಧರ್ಮಸ್ಥಳದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಬುಧವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ಏರ್ಪಡಿಸಲಾದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ನಾಡಿಗೆ ಸೀಮಿತವಾಗಿದ್ದ ಧರ್ಮಸ್ಥಳದ ಸೇವಾಕಾರ್ಯ ವೀರೇಂದ್ರ ಹೆಗ್ಗಡೆಯವರ ದಕ್ಷ ನೇತೃತ್ವದಲ್ಲಿ ಇಂದು ರಾಷ್ಟ್ರವ್ಯಾಪಿಯಾಗಿ ವಿಸ್ತರಿಸಿರುವ ಬಗ್ಗೆ ಅವರು […]

ಧರ್ಮಸ್ಥಳ : ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ದೇವಳದ ಸಿಬ್ಬಂದಿ

Friday, August 8th, 2014
Dharmasthala River

ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಗುರುವಾರ ಸಂಜೆ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಯತ್ನಿಸಿದ ಮಹಿಳೆಯನ್ನು ದೇವಳದ ಸಿಬ್ಬಂದಿ ಸಕಾಲಿಕ ಪ್ರಜ್ಷೆಯಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಂಗಳೂರಿನ ನಿವಾಸಿ ಗೀತಾ (ಹೆಸರು ಬದಲಾಯಿಸಲಾಗಿದೆ) ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದು ತಂದೆ – ತಾಯಿ ಜೊತೆ ವಾಸ್ತವ್ಯ ಇದ್ದಾರೆ. ಒಬ್ಬ ತಮ್ಮನೂ ಇದ್ದಾನೆ. ಗುರುವಾರ ಅದೇನೋ ಮಾನಸಿಕ ಖಿನ್ನತೆ ಆಕೆಯನ್ನು ಕಾಡಿತು. ಮನೆಯಿಂದ ಬೆಳಿಗ್ಗೆ ಕಚೇರಿಗೆಂದು ಹೊರಟವಳು ಧರ್ಮಸ್ಥಳಕ್ಕೆ ಬರುವ ಬಸ್ ಹತ್ತಿದರು. ಸಂಜೆ 7 ಗಂಟೆಗೆ […]

ಮೇ 2ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

Tuesday, February 18th, 2014
Virender-Hegde

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಮೇ 2ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ವರದಕ್ಷಿಣೆ, ವಿವಾಹಕ್ಕಾಗುವ ದುಂದುವೆಚ್ಚ ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಆರಂಭಿಸಿದ್ದು, ಪ್ರತಿವರ್ಷ ಸಾಮೂಹಿಕ ವಿವಾಹ ಏರ್ಪಡಿಸಲಾಗುತ್ತದೆ. ಕಳೆದ ವರ್ಷದವರೆಗೆ ಧರ್ಮಸ್ಥಳದಲ್ಲಿ 11,465 ಜೋಡಿ ಸಾಮೂಹಿಕ ವಿವಾಹವಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಕೊಡಲಾಗುವುದು. ವಿವಾಹವಾಗಲು ಇಚ್ಚಿಸುವವರು ಏ.28ರೊಳಗೆ ಧರ್ಮಸ್ಥಳದ ವಿವಾಹ ನೋಂದಣಿ ಕಚೇರಿಯಲ್ಲಿ ಹೆಸರು ದಾಖಲಿಸಲು […]

ಧರ್ಮಸ್ಥಳದಲ್ಲಿ 81ನೇ ಸರ್ವಧರ್ಮ ಸಮ್ಮೇಳನ ಸಂಪನ್ನ

Monday, December 2nd, 2013
dharmasthala

ಧರ್ಮಸ್ಥಳ :  ಲಕ್ಷದೀಪೋತ್ಸವ ಅಂಗವಾಗಿ ಅಮೃತವರ್ಷಿಣಿ ಸಭಾ ಭವನದಲ್ಲಿ ಏರ್ಪಡಿಸಿದ ಸರ್ವಧರ್ಮ ಸಮ್ಮೇಳನವನ್ನು ಕಾನೂನು ಸಚಿವ ಟಿ.ಬಿ. ಜಯಚಂದ್ರ ಭಾನುವಾರ ಉದ್ಘಾಟಿಸಿದರು. ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ಜಾತಿ, ಮತ, ಧರ್ಮದ ಹೆಸರಿನಲ್ಲಿ ನಡೆಯುವ ಅನ್ಯಾಯ, ಶೋಷಣೆ, ಮೂಢನಂಬಿಕೆ ಹಾಗೂ ಇತರ ಅನಿಷ್ಟ ಪದ್ಧತಿ ಸಾಮಾ ಜಿಕ ಆಂದೋಲನದ ರೀತಿಯಲ್ಲಿ ನಿವಾರಣೆ ಮಾಡಬೇಕು. ದೇವನೊಬ್ಬ ನಾಮ ಹಲವು ಎಂಬಂತೆ ನಾವೆಲ್ಲರೂ ಒಬ್ಬರೇ ದೇವರ ಮಕ್ಕಳು ಎಂಬ ಭಾವನೆಯಿಂದ ಪರಸ್ಪರ ಪ್ರೀತಿ-ವಿಶ್ವಾಸ ದಿಂದ ಸಾರ್ಥಕ ಜೀವನ ನಡೆಸಬೇಕು […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹರಿದು ಬರುತ್ತಿರುವ ಜನ ಸಾಗರ

Thursday, November 28th, 2013
Dharmasthala

ಬೆಳ್ತಂಗಡಿ :  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮವು ನ.28 ರಿಂದ ಡಿ. 3ರವರೆಗೆ ನಡೆಯಲಿವೆ. 36ನೇ ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಪ್ರಧಾನ ಗುರು ಫಾ.ಜೇಮ್ಸ್ ಡಿ’ ಸೋಜರವರು ಇಂದು ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಧರ್ಮಾಧಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ. ಈ ವಸ್ತು ಪ್ರದರ್ಶನ ಡಿ.3ರ ತನಕವಿದ್ದು, ಉಚಿತ ಪ್ರವೇಶವಿರುತ್ತದೆ.  ಬಳಿಕ ವಸ್ತು ಪ್ರದರ್ಶನ ಮಂಟಪದಲ್ಲಿ ಸಂಜೆ 6 ಗಂಟೆಯಿಂದ ಶಿವಮೊಗ್ಗದ ಮ್ಯಾಜಿಕ್ […]

ಧರ್ಮಸ್ಥಳ ಸುತ್ತಮುತ್ತ ನಡೆದ ಎಲ್ಲಾ ಅಸಹಜ ಸಾವುಗಳನ್ನು ಸಿಬಿಐಗೆ ಒಪ್ಪಿಸಲು ಮನವಿ: ಎಸ್‍ಎಫ್‍ಐ

Friday, November 8th, 2013
SFI

ಮಂಗಳೂರು : ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐಗೆ ವಹಿಸಲು ಮತ್ತು ಧರ್ಮಸ್ಥಳ ಸುತ್ತಮುತ್ತ ನಡೆದ ಅಸಹಜ ಸಾವು ಗಳನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸಿ ನ. 7 ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ  ಪ್ರತಿಭಟನೆ ನಡೆಯಿತು. ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ)ನ ಕಾರ್ಯದರ್ಶಿ ಜೀವನ್‍ರಾಜ್ ಕುತ್ತಾರ್  ಮಾತನಾಡಿ , ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈವರೆಗೆ ನಡೆದ ಬಹುತೇಕ ಕೊಲೆ ಮತ್ತು ಅತ್ಯಾಚಾರಗಳು ದ್ವೇಷದಿಂದ ನಡೆದದ್ದು. ಇಲ್ಲಿ ಜನರ ಆಸ್ತಿ ಲಪಟಾಯಿಸುವ ಉದ್ದೇಶ ಪ್ರಮುಖವಾಗಿತ್ತು ಎಂದು ಹೇಳಿದರು. […]

ಟೀಕೆಗಳಿಂದ ಆತ್ಮಾಭಿಮಾನಕ್ಕೆ ಕೊರತೆಯಾಗಿಲ್ಲ, ಇನ್ನಷ್ಟು ಯೋಜನೆಗಳು ಜಾರಿ : ಡಾ| ಹೆಗ್ಗಡೆ

Thursday, October 17th, 2013
Veerendra Hegde

ಬೆಳ್ತಂಗಡಿ: ದುರುದ್ದೇಶ ಪೂರ್ವಕ ಟೀಕೆಗಳಿಗೆ ಕಿವಿಕೊಡದೆ ನನ್ನ ಮುಂದಿನ ಸೇವಾ ಕಾರ್ಯಗಳನ್ನು ಎಂದಿಗೂ ನಿಲ್ಲಿಸುವುದಿಲ್ಲ. ಮುಂದೆ ಬಡ ಜನರ ಸೇವೆಗಾಗಿ ಇನ್ನಷ್ಟು ಯೋಜನೆಗಳನ್ನು ಹಮ್ಮಿಕೊಳ್ಳ್ಳುತ್ತೇನೆ. ಟೀಕೆಯಿಂದ ನೊವಾಗಿದೆ. ಆದರೆ ನನ್ನಲ್ಲಿ ಆತ್ಮವಿಶ್ವಾಸ, ಆತ್ಮಾಭಿಮಾನದ ಕೊರತೆ ಆಗಿಲ್ಲ. ಸೌಜನ್ಯಾ ಪ್ರಕರಣದ ತನಿಖೆಯ ಬಗ್ಗೆ ಸಂಪೂರ್ಣ ಜವಾಬ್ದಾರಿ ಸರಕಾರ ಹಾಗೂ ಬೆಳ್ತಂಗಡಿ ಶಾಸಕರದ್ದು. ನಾನು ಇನ್ನು ಈ ಬಗ್ಗೆ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಬುಧವಾರ ಸಂಜೆ ಉಜಿರೆಯ ಶ್ರೀ ರತ್ನವರ್ಮ […]