ಡಿ.ವಿ.ಸದಾನಂದ ಗೌಡರ ಸಹೋದರ ಡಿ.ವಿ ಭಾಸ್ಕರ್‌ ನಿಧನ

Tuesday, November 22nd, 2016
bhashkar gowda

ಮಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸಹೋದರ ಡಿ.ವಿ ಭಾಸ್ಕರ್‌ ಇಂದು ಕಾಮಾಲೆ ರೋಗದ  ಚಿಕತ್ಸೆ ಫಲಕಾರಿಯಾಗದೆ ನಗರದ ಕೆ.ಎಮ್‌.ಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರ ಗುಂಡ ವೆಂಕಪ್ಪ ಗೌಡ ಹಾಗೂ ಕಮಲಮ್ಮ ಅವರ ಮೂರನೆ ಪುತ್ರನಾಗಿರುವ ಇವರು ಕಾಮಾಲೆ ರೋಗಕ್ಕೆ ತುತ್ತಾಗಿ 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಭಾಸ್ಕರ್‌ ವಕೀಲರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದರು. ಕೆಲ ದಿನಗಳ ಬಳಿಕ ವಕೀಲ ವೃತ್ತಿ ಬಿಟ್ಟು ಕೃಷಿಯಲ್ಲಿ ತೊಡಗಿಕೊಂಡಿದ್ದರು. […]