ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ : ಡಿ.ವಿ. ಸದಾನಂದ ಗೌಡ

Tuesday, January 17th, 2017
dv sadananda Gowda

ಮಂಗಳೂರು: ಕರ್ನಾಟಕದಲ್ಲಿ ಪಕ್ಷದೊಳಗೆ ಅಲ್ಪಸ್ವಲ್ಪ ಭಿನ್ನಾಭಿಪ್ರಾಯವಿದ್ದರೂ ಕೆಲವೊಂದು ಮಂದಿ ಅದನ್ನು ದೊಡ್ಡದಾಗಿ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಪಕ್ಷದ ವರಿಷ್ಠರು ಈ ಸಮಸ್ಯೆಯನ್ನು ಅರ್ಧ ಗಂಟೆಯೊಳಗೆ ಬಗೆಹರಿಸುತ್ತಾರೆ. ಇದೊಂದು ದೊಡ್ಡ ಸಮಸ್ಯೆಯೇ ಅಲ್ಲ. ಶೀಘ್ರವೇ ಬಗೆಹರಿಯಲಿದೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು. ಪಂಜಾಬ್‌, ಗುಜರಾತ್‌, ಉತ್ತರಪ್ರದೇಶ, ಗೋವಾ ಚುನಾವಣೆ ಸಮೀಪಿಸುತ್ತಿದೆ. ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೆ […]

ಅಧಿಕಾರಿಗಳ ಜತೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಆಡಳಿತ ಕ್ರಮ : ಡಿ.ವಿ.ಎಸ್

Sunday, August 21st, 2011
ಅಧಿಕಾರಿಗಳ ಜತೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಆಡಳಿತ ಕ್ರಮ : ಡಿ.ವಿ.ಎಸ್

ಮಂಗಳೂರು: ಉಡುಪಿ ಜಿಲ್ಲೆಯ ಪ್ರವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು ಶನಿವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ವಾರದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಹಿಡಿದು ತಹಶೀಲ್ದಾರ್‌ ವರೆಗಿನ ಅಧಿಕಾರಿಗಳ ಜತೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ನಡೆಸಿ, ಕೆಲವೇ ದಿನಗಳಲ್ಲಿ ರಾಜ್ಯದ ಆಡಳಿತ ಯಂತ್ರಕ್ಕೆ ವೇಗ ನೀಡಲಾಗುವುದು ಎಂದು ಅವರು ಹೇಳಿದರು. ಈವರೆಗೆ 20 ಇಲಾಖೆಗಳ ಪ್ರಗತಿ ಕುರಿತಂತೆ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇತರ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಯಾವುದೇ ಕಾರ್ಯಗಳಿದ್ದರೂ ಅದನ್ನು ಜಾರಿಗೊಳಿಸುವವರು ಕೆಳಗಿನ ಅಧಿಕಾರಿಗಳು. ಹಾಗಾಗಿ ಅವರೊಂದಿಗೆ […]