ಶಶಿಕಲಾ ಬಣದ ಎಡಪ್ಪಾಡಿ ಪಳನಿಸ್ವಾಮಿ ತಮಿಳುನಾಡಿನ ನೂತನ ಮುಖ್ಯಮಂತ್ರಿ
Thursday, February 16th, 2017ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ನೇಮಿಸಿದ್ದಾರೆ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ. ಇಂದು ಸಂಜೆ 4 ಗಂಟೆಗೆ ಪಳನಿಸ್ವಾಮಿ ತಮ್ಮ ಸಂಪುಟ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿ.ಕೆ.ಶಶಿಕಲಾ ಅವರ ನಿಷ್ಠಾವಂತ ಇ.ಕೆ.ಪಳನಿಸ್ವಾಮಿಯವರಿಗೆ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಪಳನಿಸ್ವಾಮಿ ತಮ್ಮ ಬೆಂಬಲಿಗರಾದ ಸಚಿವರಾದ ಜಯಕುಮಾರ್, ಕೆ.ಎ.ಸೆಂಗೊಟ್ಟೈಯನ್, ಎಸ್.ಪಿ.ವ ವೇಲುಮಣಿ, ಟಿ.ಟಿ.ದಿನಕರನ್, ಕೆ.ಪಿ. ಅನ್ಬಜಗನ್ ಮೊದಲಾದವರು ರಾಜ್ಯಪಾಲರ ಭೇಟಿಗೆ ತೆರಳಿದ್ದರು. […]