ಉಚಿತ ವೈದ್ಯಕೀಯ ಶಿಬಿರ, ಕುಟುಂಬಕ್ಕೆ ಧನ ಸಹಾಯ

Friday, December 25th, 2015
Hosangady Medical camp

ಮಂಜೇಶ್ವರ: ಚಕ್ರವರ್ತಿ ಆರ್ಟ್ಸ್ ಮತ್ತು ಸ್ಪೋರ್ಟ್ ಕ್ಲಬ್ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರವು ಹೊಸಂಗಡಿ ಎಲ್.ಪಿ. ಶಾಲೆಯಲ್ಲಿ ನಡೆಯಿತು. ಕೆ.ಎಂ.ಸಿ. ಆಸ್ಪತ್ರೆಯ ಸಹಯೋಗದಲ್ಲಿ ನಡೆದ ಶಿಬಿರವನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ.ಕೆ.ಎಂ. ಅಶ್ರಫ್ ಉದ್ಘಾಟಿಸಿದರು. ಮಂಜೇಶ್ವರ ಠಾಣಾಧಿಕಾರಿ ಪಿ.ಪ್ರಮೋದ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹರೀಶ್ ಮಜಲ್ ಅಧ್ಯಕ್ಷತೆ ವಹಿಸಿದರು. ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು, ಆಶಾಲತಾ, ಕೆ.ಆರ್.ಜಯಾನಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ರೈಲು ಅಪಘಾತದಲ್ಲಿ ಸಾವಿಗೀಡಾದ ಚಕ್ರವರ್ತಿ ಕ್ಲಬ್‌ನ ಸದಸ್ಯರಾಗಿದ್ದ ಮೋಹನ್‌ದಾಸ್ ಕುಟುಂಬಕ್ಕೆ ಐವತ್ತು ಸಾವಿರ ರೂ. ಧನಸಹಾಯವನ್ನು […]

ಪತ್ರಕರ್ತರ ಉಚಿತ ವೈದ್ಯಕೀಯ ಶಿಬಿರ ಉದ್ಘಾಟನೆ

Monday, April 7th, 2014
Indiana

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂಡಿಯಾನ ಹಾಸ್ಟಿಟಲ್ ಸಹಯೋಗದಲ್ಲಿ ಪತ್ರಕರ್ತರಿಗೆ ಆಯೋಜಿಸಿರುವ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಇಂಡಿಯಾನ ಹಾಸ್ಪಿಟಲ್ನ ಅಧ್ಯಕ್ಷ ಡಾ.ಆಲಿ ಕುಂಬ್ಳೆ ಸೋಮವಾರ ಉದ್ಘಾಟಿಸಿದರು. ಒತ್ತಡದ ಮಧ್ಯೆ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ತಮ್ಮ ಆರೋಗ್ಯ ಸುರಕ್ಷತೆ ಬಗ್ಗೆ ಗಮನ ಹರಿಸುವುದು ಅವಶ್ಯ. ಕಾಯಿಲೆ ಗುಣ ಪಡಿಸುವುದಕ್ಕಿಂತ ಕಾಯಿಲೆ ಬರದಂತೆ ಮುಂಜಾಗ್ರತೆ ವಹಿಸುವುದು ಒಳ್ಳೆಯದು. ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಇಂಡಿಯಾನ ಆಸ್ಪತ್ರೆ ಪತ್ರಕರ್ತರಿಗೆ ಈ […]