ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ, ಬಸ್‌‌‌ ಕಂಡಕ್ಟರ್‌ ಪೊಲೀಸ್ ವಶ

Wednesday, October 18th, 2017
ganja

ಮಂಗಳೂರು:  ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡಸಿ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ. ಮೊಹಮ್ಮದ್ ಇಝುದ್ದಿನ್ (32) ಬಂಧಿತ ಆರೋಪಿ. ಕಂಕನಾಡಿ ನಗರ ವ್ಯಾಪ್ತಿಯ ಪಂಪ್ವೆಲ್ ವೃತ್ತ ಬಳಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ವೃತ್ತಿಯಲ್ಲಿ ಬಸ್ ನಿರ್ವಾಹಕನಾಗಿರುವ ಬಂಟ್ವಾಳ ಅಮ್ಮುಂಜೆಯ ಮೊಹಮ್ಮದ್ ಇಝುದ್ದಿನ್‌ನನ್ನು ವಶಕ್ಕೆ ಪಡೆದುಕೊಂಡು ಆತನಿಂದ 200 ಗ್ರಾಂ ಗಾಂಜಾ ಹಾಗೂ ಮೊಬೈಲ್ […]

ಕಂಕನಾಡಿ: ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ

Thursday, October 5th, 2017
Bhasheer

ಮಂಗಳೂರು: ರಿಕ್ಷಾ ಚಾಲಕನೊಬ್ಬ ಕಂಕನಾಡಿ ಬಳಿ ನೇತ್ರಾವತಿ ನದಿಯ ಸೇತುವೆ ಮೇಲಿಂದ ಜಿಗಿದು  ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಅಶೋಕನಗರದ ಬಶೀರ್ ಅಹಮ್ಮದ್ ಎಂಬ ರಿಕ್ಷಾ ಚಾಲಕ ಆತ್ಮಹತ್ಯೆಗೈದ ವ್ಯಕ್ತಿ ಎಂದು ತಿಳಿದು ಬಂದಿದೆ.ರಿಕ್ಷಾ ನಿಲ್ಲಿಸಿ ಕೂಡಲೇ ನದಿಗೆ ಹಾರಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.