ಆತ್ಮರಕ್ಷಣೆಗೆ ಕರಾಟೆ ಕಲಿಯಿರಿ: ಹೆಣ್ಣುಮಕ್ಕಳಿಗೆ ಸಿಎಂ ಕರೆ

Saturday, November 4th, 2017
karate championship

ಮಂಗಳೂರು: ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ದಿಟ್ಟವಾಗಿ ಎದುರಿಸುವ ಸಲುವಾಗಿ ಹೆಣ್ಣುಮಕ್ಕಳು ಆತ್ಮರಕ್ಷಣೆಗಾಗಿ ಕರಾಟೆ ಕಲಿಯುವುದು ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೊ (ರಿ) ಆಯೋಜಿಸಿದ್ದ ಇಂಡಿಯನ್ ಕರಾಟೆ ಚಾಂಪಿಯನ್‌ಶಿಪ್-2017 ಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಇಂದು ಹೆಣ್ಣುಮಕ್ಕಳ ಮೇಲೆ ಪೈಶಾಚಿಕ ದೌರ್ಜನ್ಯಗಳು ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಲೈಂಗಿಕ ದೌರ್ಜನ್ಯದಂಥ ಕೃತ್ಯಗಳಿಂದ ಪಾರಾಗುವ ಸಲುವಾಗಿ ಹೆಣ್ಣುಮಕ್ಕಳು ಆತ್ಮರಕ್ಷಣೆ ಮಾಡಿಕೊಳ್ಳುವುದು ಅಗತ್ಯ ಎಂದು […]

ನೆಹರೂ ಮೈದಾನದಲ್ಲಿ 4 ಹಾಗೂ 5ರಂದು ಇಂಡಿಯನ್‌ ಕರಾಟೆ ಚಾಂಪಿಯನ್‌ಶಿಪ್‌

Friday, November 3rd, 2017
karate

ಮಂಗಳೂರು: ಇಂಡಿಯನ್‌ ಕರಾಟೆ ಚಾಂಪಿಯನ್‌ಶಿಪ್‌ ನಗರದ ನೆಹರೂ ಮೈದಾನದಲ್ಲಿ ಈ ತಿಂಗಳ 4 ಹಾಗೂ 5ರಂದು ನಡೆಯಲಿದೆ. ಕರಾಟೆ ಚಾಂಪಿಯನ್‌ಶಿಪ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಲಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ 2 ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದು ಕರಾಟೆಯ ರೋಚಕ ಅನುಭವ ನೀಡುವ ಜತೆಗೆ ಉತ್ಸಾಹಿ ತರುಣರಿಗೆ ಸ್ಫೂರ್ತಿಯಾಗಲಿದೆ. ಈ ನಿಟ್ಟಿನಲ್ಲಿ ಕರಾವಳಿ ಮಣ್ಣಿನಲ್ಲಿ ಅರಳಿದ ಕರಾಟೆಯ ಕುರಿತ ಡೀಟೈಲ್ ಸ್ಟೋರಿ ಇಲ್ಲಿದೆ. ಕರಾಟೆ ಅತ್ಯಂತ ಪ್ರಾಚೀನ ಸಮರಕಲೆಗಳಲ್ಲೊಂದು. ಭಾರತದಲ್ಲಿ ಕೂಡಾ […]