ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ಅವ್ಯಹಾರ, ಆರೋಪಿತರಿಗೆ ಜಾಮೀನು

Sunday, July 19th, 2020
kateelu

ಮೂಡಬಿದ್ರೆ  : ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ರೂಪಾಯಿ ಅವ್ಯಹಾರ ನಡೆಯುತ್ತಿದೆ, ವಿಶೇಷ ಪೂಜೆ, ಯಕ್ಷಗಾನ ಮೇಳದ ಹೆಸರಲ್ಲಿ ಹಣ ವಸೂಲಿ,  ಚಿನ್ನದ ರಥ ಸೇವೆಗೆ ಹಣ ವಸೂಲಿ, ಚಂಡಿಕಾ ಯಾಗ.  ಹೋಮದ  ಹೆಸರಲ್ಲಿ ಹಣ ವಸೂಲಿ ನೆಡೆಯುತ್ತಿದೆ ಎಂದು  ಅಲ್ಲದೆ ಸಾರ್ವಜನಿಕರ ದುಡ್ಡು ದೇವರ ಹೆಸರಲ್ಲಿ ಅಸ್ರಣ್ಣ ಕುಟುಂಬದ ಮನೆ ಸೇರುತ್ತದೆ.  ಸರಕಾರೀ ದೇವಸ್ಥಾನದಲ್ಲಿ ವಸೂಲಿ ಒಂದು ಕಡೆಯಾದರೆ ಅದಕ್ಕೆ ರಶೀದಿ ಬೇರೆಯೇ ತೋರಿಸಲಾಗುತ್ತಿತ್ತು ಎಂದು ತನಿಖಾ ವರದಿ ಮಾಡಲಾಗಿತ್ತು. ಈ ಬಗ್ಗೆ ಅಸ್ರಣ್ಣ ಕುಟುಂಬಸ್ಥರು ನ್ಯಾಯಾಲಯದಲ್ಲಿ ಒಂದು ಕೋಟಿ […]

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ವಿಧಿವಶ

Thursday, February 2nd, 2017
Raveendranath

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಡಾ. ರವೀಂದ್ರನಾಥ ಪೂಂಜಾ ಇಂದು ನಿಧನರಾಗಿದ್ದಾರೆ. ದೇವಸ್ಥಾನದ ಮೊಕ್ತೇಸರ  ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯದ ತೀರ್ಪು ಕಳೆದ ವರ್ಷ ಕೊಡೆತ್ತೂರು ಗುತ್ತಿನ ರವೀಂದ್ರನಾಥ ಪೂಂಜಾ ಅವರ ಪರವಾಗಿ ಬಂದಿತ್ತು. ಅದೇ ವರ್ಷ ಅವರು ಮೊಕ್ತೇಸರ ರಾಗಿ ಅಧಿಕಾರ ಸ್ವೀಕರಿಸಿದ್ದರು. ರವೀಂದ್ರನಾಥ ಪೂಂಜಾ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರು. ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.