ಕರಾವಳಿಯ ಜಿಲ್ಲೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಕಚ್ಚಾಟದಿಂದ ಅಭಿವೃದ್ದಿ ಕುಂಠಿತವಾಗಿದೆ : ಕುಮಾರಸ್ವಾಮಿ

Sunday, July 30th, 2017
hdk

ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಇಲ್ಲಿನ ಅಭಿವೃದ್ದಿಗಿಂತ ಹೆಚ್ಚಾಗಿ ಧರ್ಮ ಹಾಗೂ ಭಾವನಾತ್ಮಕ ವಿಷಯಗಳಿಗೆ ಆದ್ಯತೆ ನೀಡುತ್ತಿವೆ. ಇಲ್ಲಿ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡುತ್ತಿದ್ದರೆ ಮಂಗಳೂರು ನಗರ ಬೆಂಗಳೂರು ನಗರಕ್ಕೆ ಸಮಾನವಾಗಿ ಬೆಳೆಯುತ್ತಿತ್ತು. ಆದರೆ ಇವರು ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡದೆ ಜನ ಸಾಮಾನ್ಯರು ಆತಂಕದಲ್ಲಿ ಜೀವನ ನಡೆಸುವಂತೆ ಮಾಡುತ್ತಿದ್ದಾರೆ. ಹೀಗಾಗಿ ಕರಾವಳಿಯಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆ ಆಳ್ವಾಸ್ ಕಾಲೇಜಿನ […]

ಸದನದಲ್ಲಿ ಸಿದ್ದುವಿಗೆ ಕುಮಾರಸ್ವಾಮಿ ವ್ಯಂಗ್ಯ : ಸಿದ್ದು ಉತ್ತರ

Tuesday, July 30th, 2013
Assembly Siddu Kumara

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಮಧ್ಯೆ ಮಂಗಳವಾರ ಸದನದಲ್ಲಿ ಭಾರಿ ಜಟಾಪಟಿ ನಡೆಯಿತು. ಇದರಿಂದ  ಸದನದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು. ಸದನದಲ್ಲಿ  ಕುಮಾರಸ್ವಾಮಿ, ಹಿಂದುಳಿದ ವರ್ಗದವರನ್ನು ಉಪ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು. ಆದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಆಗಲಿಲ್ಲ ಎಂದು ಚೇಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದು, ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು, ನೀವೇ ಎಂದರು. ಇದರಿಂದ ಆಕ್ರೋಶಗೊಂಡ ಎಚ್‌ಡಿಕೆ, ಹೌದು ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು […]