ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶ್ರೀಮಹಾವೀರ ಜಯಂತಿ ದಿನಾಚರಣೆ

Wednesday, April 19th, 2017
Alvas Mahaveera Jayanthi-

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶ್ರೀಮಹಾವೀರ ಜಯಂತಿ ದಿನಾಚರಣೆಯು ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ,  ನಮ್ಮ ಶಕ್ತಿಯನ್ನು ನಾವು ಒಳ್ಳೆ ಉದ್ದೇಶಕ್ಕೆ ಬಳಸಬೇಕೆಂದು ಮಹಾವೀರರ ಆಶಯವಾಗಿತ್ತು. ನಮ್ಮಲ್ಲಿರುವ ಮದ ಮೋಹ ಮತ್ಸರ. ಅವೆಲ್ಲವನ್ನು ತೊರೆದು ಶುದ್ಧಾತ್ಮನಾಗಬೇಕು ಎಂಬುವುದಕ್ಕೆ ಸಪ್ತ ತತ್ವಗಳನ್ನು ಬೋಧಿಸಿದ್ದಾರೆ. ನಾವು ಎಲ್ಲ ಜೀವಿಗಳಲ್ಲೂ ದಯೆ ಅನುಕಂಪಗಳನ್ನು ಬೆಳೆಸಿಕೊಳ್ಳಬೇಕು. ಶುದ್ಧ ಮನಸ್ಸನ್ನು ಹೊಂದಿರಬೇಕೆಂಬ ಮಹಾವೀರರ ಸಂದೇಶವನ್ನು ನಾವು […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪುಟಾಣಿಗಳಿಂದ ಮಹಾವೀರ ಜಯಂತಿ ಆಚರಣೆ

Friday, April 3rd, 2015
Mahaveera Jayanti

ಧರ್ಮಸ್ಥಳ: ಧರ್ಮಸ್ಥಳ ಶ್ರೀ ಭಗವಾನ್ ಚಂದ್ರನಾಥಸ್ವಾಮಿ ಬಸದಿಯಲ್ಲಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಅವರ ಕುಟುಂಬದವರ ಮಾರ್ಗದರ್ಶನದಂತೆ, ಮಹಾವೀರ ಜನ್ಮಕಲ್ಯಾಣೋತ್ಸವವನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ತೀರ್ಥಂಕರರ ಮೂರ್ತಿಯ ಮೆರವಣಿಗೆ ನಂತರ ಅಷ್ಟದ್ರವ್ಯಗಳಿಂದ ಅಭಿಷೇಕ, ಅಷ್ಟವಿಧಾರ್ಚನೆ ಪೂಜೆ ನಡೆದವು. ಸ್ಥಳೀಯ ಮಕ್ಕಳಿಂದ ವಿವಿಧ ಕಾರ‍್ಯಕ್ರಮಗಳು ನಡೆದವು ಕುಮಾರಿ ಲಾವಣ್ಯ, ವಜ್ರಶ್ರೀ, ಸಂಚಿತ ಹಾಡಿದ ಮಹಾವೀರ ಅಷ್ಟಕಕ್ಕೆ ಮಾ. ದರ್ಶನ್ ಹಾಗೂ ಕು. ಪ್ರಾಪ್ತಿ ಕನ್ನಡ ಅರ್ಥಾನುವಾದ ಹೇಳಿದರು, ಕುಮಾರಿ ಸೌಖ್ಯಳಿಂದ ಮಹಾವೀರರ ಬಾಲ್ಯ ಹಾಗೂ ಜೀವನ […]