ಗ್ಯಾಸ್‌ಗೆ ಆಧಾರ್ ಗೊಡವೆ ಇಲ್ಲ

Tuesday, March 11th, 2014
Sylinder

ಮೈಸೂರು: ಅಡುಗೆ ಅನಿಲ ಸಿಲಿಂಡರ್ ಪಡೆಯಲು ‘ಆಧಾರ್’ ಇನ್ನು ಅಡ್ಡಿಯಾಗದು. ರಾಜ್ಯದೆಲ್ಲೆಡೆ ಸಬ್ಸಿಡಿ ಸಿಲಿಂಡರ್ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ. ಇದರ ಅರ್ಥ ಸಿಲಿಂಡರ್ ಏಜೆನ್ಸಿಗಳಿಗೆ ಆಧಾರ್ ಸಂಖ್ಯೆ ನೀಡಿ, ಅದನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಬೇಕೆಂಬ ನಿಯಮ ಕೈಬಿಡಲಾಗಿದೆ. ಈ ನಿಯಮ ಆಧಾರ್ ಪೈಲಟ್ ಯೋಜನೆ ಜಾರಿಗೊಂಡ ರಾಜ್ಯದ ಮೂರು ಜಿಲ್ಲೆಗಳಾದ ಮೈಸೂರು, ತುಮಕೂರು ಮತ್ತು ಧಾರವಾಡ ಜಿಲ್ಲೆಗಳಿಗೂ ಅನ್ವಯವಾಗಿದೆ. ಪ್ರತಿಯೊಬ್ಬ ಗ್ರಾಹಕ ವರ್ಷಕ್ಕೆ 11 ಸಿಲಿಂಡರ್‌ಗಳನ್ನು ಪಡೆಯಬಹುದಾಗಿದ್ದು, ಪ್ರತಿ ಸಿಲಿಂಡರ್‌ಗೆ 423 ರೂ. […]

ಸಿಎಂ ತವರಿಗೆ ಸುವರ್ಣ ಭಾಗ್ಯ

Saturday, March 8th, 2014
Siddaramaiah

ಮೈಸೂರು: ಮೈಸೂರು ತಾಲೂಕು ಸಿದ್ದರಾಮನಹುಂಡಿಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಒಂಬತ್ತೂವರೆ ತಿಂಗಳುಗಳಾಗಿದ್ದರೂ ಈವರೆಗೆ ಸ್ವಗ್ರಾಮಕ್ಕೆ ಭೇಟಿ ನೀಡಲು ಆಗಿಲ್ಲ. ಆದರೆ ಅಭಿವೃದ್ಧಿ ಭಾಗ್ಯ ದೊರೆತಿದೆ. ಸಿದ್ದರಾಮನಹುಂಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಸುವರ್ಣ ಗ್ರಾಮೋದಯ ಯೋಜನೆಯಲ್ಲಿ ಅಭಿವೃದ್ಧಿಪಡಿಸಲು 9.60 ಕೋಟಿ ಬಿಡುಗಡೆ ಮಾಡಲಾಗಿದೆ. ಸುವರ್ಣ ಗ್ರಾಮೋದಯ ಯೋಜನೆಯ 5ನೇ ಹಂತದಲ್ಲಿ ಮೈಸೂರು ತಾಲೂಕಿಗೆ ರಾಜ್ಯ ಸರ್ಕಾರ 6.86 ಕೋಟಿ ನಿಗದಿಪಡಿಸಿತ್ತು. ಇದಕ್ಕಾಗಿ ಒಟ್ಟು 32,845 ಜನಸಂಖ್ಯೆ ಇರುವ 16 ಗ್ರಾಮಗಳನ್ನು ಆಯ್ಕೆ ಮಾಡಲಾಗಿತ್ತು. ಈ ಪೈಕಿ ಸಿದ್ದರಾಮನಹುಂಡಿ ಹಾಗೂ […]

ಐಟಿ ಬಿಟಿಯತ್ತ ಯುವಜನಾಂಗ: ಡಾ.ಸಲೀಂ ವಿಷಾದ

Wednesday, March 5th, 2014
M.A.-Salim

ಮೈಸೂರು: ಇಂದಿನ ಯುವಜನತೆ ಹೆಚ್ಚಾಗಿ ಐಟಿ ಬಿಟಿಯತ್ತ ಮುಖ ಮಾಡಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಹೇಳಿದರು. ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹೊಸಮಠದ ಸಭಾಂಗಣದಲ್ಲಿ ಲಿಂಗೈಕ್ಯ ವಿದ್ವಾನ್ ಗುರುಶಾಂತಸ್ವಾಮಿಗಳ ಸ್ಮರಣಾರ್ಥ ಮಂಗಳವಾರ ಏರ್ಪಡಿಸಿದ್ದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಹಣ ಸಂಪಾದನೆಯೇ ಮುಖ್ಯವಲ್ಲ. ಆದರೆ ಇಂದು ಹಣದತ್ತ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿರುವ ಕಾರಣ, ನಾವು ಹುಟ್ಟಿದ ನಾಡು, ಕಲೆ ಹಾಗೂ ಸಂಸ್ಕೃತಿ […]

ಉದ್ಯೋಗ ಧಮಾಕಾ…

Monday, February 24th, 2014
Job-Fair

ಮೈಸೂರು: ಸರ್ಕಾರ ಈಗಾಗಲೇ ರಾಜ್ಯಾದ್ಯಂತ ಹಲವು ಸುತ್ತಿನ ಉದ್ಯೋಗ ಮೇಳವನ್ನು ಆಯೋಜಿಸಿ ಯಶಸ್ವಿಯಾಗಿದ್ದು, ಇದೀಗ ಮೈಸೂರಿನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಏರ್ಪಡಿಸಿದೆ. ಭಾನುವಾರ ಆರಂಭವಾದ ಮೇಳದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡು ಮೊದಲನೇ ದಿನ ಯಶಸ್ವಿಗೊಳಿಸಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ಭವ್ಯ ವೇದಿಕೆ ನಿರ್ಮಿಸಿ 206 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಬ್ಯಾಂಕಿಂಗ್, ಫೈನಾನ್ಸಿಯಲ್, ಹೆಲ್ತ್‌ಕೇರ್, ಹಾಸ್ಟಿಟಾಲಿಟಿ, ಮ್ಯಾನ್ಯೂಫ್ಯಾಕ್ಚುರಿಂಗ್, ಸೇಲ್ಸ್, ಮಾರ್ಕೆಟಿಂಗ್, ಟೆಲಿಕಾಂ, ತರಬೇತಿ, ಗಾರ್ಮೆಂಟ್ಸ್, ವಿಮಾ ಕ್ಷೇತ್ರ, ಭದ್ರತೆ ವಲಯ ಸೇರಿದಂತೆ ಒಟ್ಟು […]

ಪರೀಕ್ಷೆಗೆ ಸೀಮಿತವಾಗದಿರಲಿ ಸಿದ್ಧತೆ

Friday, February 21st, 2014
S.Rangappa

ಮೈಸೂರು: ವಿದ್ಯಾರ್ಥಿಗಳು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗಷ್ಟೇ ಸೀಮಿತವಾಗದೆ ಎಲ್ಲ ವಿಷಯಗಳಲ್ಲೂ ವಿಶೇಷ ಕೌಶಲ್ಯ ಬೆಳೆಸಿಕೊಂಡು ಪರಿಣತಿ ಸಾಧಿಸುವಂತೆ ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಕರೆ ನೀಡಿದರು. ಮೈಸೂರು ವಿವಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ವಿಶೇಷ ಘಟಕ, ವಿದ್ಯಾರ್ಥಿ ಕ್ಷೇಮಾಪಾಲನ ಕೇಂದ್ರ ಹಾಗೂ ಸಾಮರ್ಥ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಸೇವಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಗುರುವಾರ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಏರ್ಪಡಿಸಿದ್ದ ಬೌದ್ಧಿಕ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕೇವಲ […]

ಡಿಸಿ ಕಚೇರಿ ಎದುರಲ್ಲೇ ವಾಮಾಚಾರ!

Wednesday, February 5th, 2014
vomachara

ಮೈಸೂರು: ನಗರ  ಪ್ರದೇಶವಾದ  ಮೈಸೂರುನಲ್ಲಿ  ಇತ್ತೀಚಿನ ದಿನಗಳಲ್ಲಿ ವಾಮಾಚಾರ ಹೆಚ್ಚಾಗಿದೆ. ವಿದ್ಯಾವಂತರು ಸಹ ವಾಮಾಚಾರದಂಥ ಮೂಢನಂಬಿಕೆಯನ್ನು ಅನುಸರಿಸುತ್ತಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಎದುರು ವಾಮಾಚಾರ ಮಾಡಿಸಿರುವುದು ಮಂಗಳವಾರ ಪತ್ತೆಯಾಗಿದೆ. ಸೋಮವಾರ ರಾತ್ರಿ ಯಾರೋ ವಾಮಾಚಾರ ಮಾಡಿಸಿ, ಜಿಲ್ಲಾಧಿಕಾರಿ ಕಚೇರಿಯಿಂದ ಮಹಾರಾಣಿ ಕಾಲೇಜಿನತ್ತ ಹೋಗುವ ರಸ್ತೆಯ ಮಧ್ಯಭಾಗದಲ್ಲಿ ಇರಿಸಿದ್ದಾರೆ.ಬಟ್ಟೆಯೊಂದರಲ್ಲಿ ಅದೇನನ್ನೋ ಸುತ್ತಿಟ್ಟಿದ್ದಾರೆ. ಅದಕ್ಕೆ ಅರಿಶಿನನ, ಕುಂಕುಮ ಹಚ್ಚಿದ್ದಾರೆ. ಅಲ್ಲದೆ, ತೆಂಗಿನ ಕಾಯೊಂದನ್ನು ಒಡೆಯಲಾಗಿದೆ. ಆ ಮಾರ್ಗವಾಗಿ ಸಂಚರಿಸುವವರು ವಾಮಾಚಾರವನ್ನು ನೋಡಿ ಆತಂಕಗೊಳ್ಳುತ್ತಿದ್ದಾರೆ. ಮಹಾರಾಣಿ ಮಹಿಳಾ […]