ಜಂಟಿ ಕ್ರಿಯಾ ಸಮಿತಿ ಮತ್ತು ನಾಗರಿಕ ಸೇವಾ ಟ್ರಸ್ಟ್‌ನ ನಿಯೋಗದಿಂದ ಮನವಿ

Tuesday, November 7th, 2017
ಜಂಟಿ ಕ್ರಿಯಾ ಸಮಿತಿ ಮತ್ತು ನಾಗರಿಕ ಸೇವಾ ಟ್ರಸ್ಟ್‌ನ ನಿಯೋಗದಿಂದ ಮನವಿ

ಮಂಗಳೂರು: ಜಂಟಿ ಕ್ರಿಯಾ ಸಮಿತಿ ಮತ್ತು ನಾಗರಿಕ ಸೇವಾ ಟ್ರಸ್ಟ್‌ನ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ಇವರನ್ನು ತಾ.6-7-2017  ರಂದು ಮಂಗಳೂರು ಸರ್ಕ್ಯುಟ್ ಹೌಸ್‌ನಲ್ಲಿ ಭೇಟಿಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಾ.29-10-2017 ರಂದು ಉಜಿರೆಯಲ್ಲಿ, ಹಲವು ಭೂ ಹಗರಣ ಮತ್ತಿತರ ಕಾನೂನು ಉಲ್ಲಂಘನೆಗಳ ಕ್ರಿಮಿನಲ್ ಕೇಸ್‌ಗಳ ತನಿಖೆ ಎದುರಿಸುತ್ತಿರುವ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಮಾತ್ರವಲ್ಲದೆ ಭಾರೀ ಹೊಗಳಿಕೆ ಮಾಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಮನವಿ ಸಲ್ಲಿಸಿತು. ಸಂಸದರು ಪ್ರಧಾನಿಯವರಿಗೆ ನಾವು […]

ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು ಹಿಂದೂಗಳು ಸಹಿಸಲು ಸಾಧ್ಯವಿಲ್ಲ: ಕಟೀಲ್‌

Saturday, November 4th, 2017
nalin kumar kateel

ಮಂಗಳೂರು:ಸ್ವಾಭಿಮಾನಿ ಹಿಂದೂಗಳು, ಹಿಂದೂಗಳ ಶ್ರದ್ಧಾ ಕೇಂದ್ರವಾದ ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು  ಸಹಿಸಲು ಸಾಧ್ಯವಿಲ್ಲ ಎಂದು ದ.ಕ. ಸಂಸದ ನಳಿನ್‌ ಕುಮಾರ್ ಕಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವ ಇಂತಹ ಮತಾಂಧರನ್ನು ಪೊಲೀಸರು ತಕ್ಷಣ ಬಂಧಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದ್ದಾರೆ. ಹಿಂದೂ ದೇವರನ್ನು ಅಪಮಾನ ಮಾಡುವ ಘಟನೆ ನಿರಂತರ ನಡೆಯುತ್ತಿದೆ. ತುಷ್ಟೀಕರಣದ ರಾಜಕೀಯ ಮಾಡುವ  ಕಾಂಗ್ರೆಸ್ ಜನಪ್ರತಿನಿಧಿಗಳು ಪೊಲೀಸ್ ಇಲಾಖೆಯ ಕಾರ್ಯದಲ್ಲಿ ಹಸ್ತಕ್ಷೇಪ ನಡೆಸುವ ಕಾರಣ […]