ನಕ್ಸಲ್ ರಕ್ತದೋಕುಳಿ 20 ಯೋಧರ ಹತ್ಯೆ

Wednesday, March 12th, 2014
Naxal

ನವದೆಹಲಿ: ಛತ್ತೀಸ್‌ಗಡದಲ್ಲಿ ನಕ್ಸಲೀಯರು ಮತ್ತೆ ರಕ್ತದೋಕುಳಿ ಹರಿಸಿದ್ದಾರೆ. ಕೆಂಪು ಉಗ್ರರು ನಡೆಸಿದ ದಾಳಿಗೆ 20 ಮಂದಿ ಭದ್ರತಾ ಸಿಬ್ಬಂದಿ ಬಲಿಯಾಗಿದ್ದಾರೆ. ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ.  ಬೆಳಗ್ಗೆ 10.30ರ ವೇಳೆಗೆ ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 15 ಮಂದಿ ಸಿಆರ್‌ಪಿಎಫ್ ಯೋಧರು ಹಾಗೂ 5 ಮಂದಿ ಪೊಲೀಸರು ಸಾವಿಗೀಡಾಗಿದ್ದಾರೆ. ಕೆಲವು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಕ್ಸಲರ ಪ್ರಾಣಹಾನಿ ಬಗ್ಗೆ ಯಾವುದೇ […]

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರ ಹೆಜ್ಜೆಗುರುತು

Saturday, November 9th, 2013
Belthangady

ಬೆಳ್ತಂಗಡಿ :  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರಿನಲ್ಲಿ ರಾಮಚಂದ್ರ ಭಟ್‌ ಎಂಬುವವರ ಮನೆಗೆ ಭೇಟಿ ನೀಡಿದ ನಕ್ಸಲರ ತಂಡವು ಅಂಗಳದಲ್ಲಿ ನಿಲ್ಲಿಸಲಾಗಿದ್ದ ಕಾರು ಮತ್ತು ಬೈಕ್‌ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಇಂದು ಮುಂಜಾನೆ ಸುಮಾರು 2 ಗಂಟೆ ಹೊತ್ತಿಗೆ ನಡೆದಿದೆ. ಪಂಚಾಯತ್‌ ಸದಸ್ಯರಾಗಿರುವ ರಾಮಚಂದ್ರ ಭಟ್‌ ಅವರು ಪೊಲೀಸ್‌ ಮಾಹಿತಿದಾರರೆಂಬ ಶಂಕೆಯಲ್ಲಿ ನಕ್ಸಲರು ಈ ಕೃತ್ಯ ಎಸಗಿರಬೇಕೆಂದು ಅನುಮಾನಿಸಲಾಗುತ್ತಿದೆ. ಮನೆ ಆವರಣವನ್ನು ಪ್ರವೇಶಿಸಿದ ಸುಮಾರು 10 – 20 ಜನರಷ್ಟಿದ್ದ ಶಸ್ತ್ರಸಜ್ಜಿತ […]