Blog Archive

ಮಹಾಯುದ್ಧ ಆರಂಭ 9 ಹಂತಗಳಲ್ಲಿ ಸಂಸತ್ ಚುನಾವಣೆ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

Thursday, March 6th, 2014
Lok-Shaba

ನವದೆಹಲಿ: ವಿಶ್ವದ ಅತಿದೊಡ್ಡ ಚುನಾವಣಾ ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದ್ದು, ಒಂಬತ್ತು ಹಂತದ ಮತದಾನದ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 1ರಿಂದ ಅಸ್ತಿತ್ವಕ್ಕೆ ಬರಬೇಕಿರುವ ಹದಿನಾರನೇ ಲೋಕಸಭೆಗೆ 543 ಸದಸ್ಯರನ್ನು  81.4 ಕೋಟಿ ಜನರು ಆಯ್ಕೆ ಮಾಡಲಿದ್ದಾರೆ. ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಚುನಾವಣಾ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಇನ್ನು ಮುಂದೆ ಕೇಂದ್ರ ಅಥವಾ ರಾಜ್ಯ ಸರ್ಕಾರ ಮನಸೋ ಇಚ್ಛೆ ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ. ಏಪ್ರಿಲ್ 7ರಿಂದ ಆರಂಭವಾಗುವ ಮತದಾನ ಪ್ರಕ್ರಿಯೆ ಒಂಬತ್ತು ಹಂತಗಳಲ್ಲಿ ನಡೆಯಲಿದೆ. ಲೋಕಸಭಾ […]

ಅರವಿಂದ ಕೇಜ್ರಿವಾಲ್ ಬಂಧನ

Thursday, March 6th, 2014
Arvind-kejriwa

ಹಮದಾಬಾದ್: ಬುಧವಾರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಉತ್ತರ ಗುಜರಾತ್‌ನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಆಪ್ ನಾಯಕ ಅರವಿಂದ ಕೇಜ್ರಿವಾಲ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ಘಟನೆ ದೆಹಲಿ ಹಾಗೂ ಲಖನೌನಲ್ಲಿ ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಯಿತು. ಕೇಜ್ರಿ ವಶಕ್ಕೆ ತೆಗೆದುಕೊಂಡ ಸುದ್ದಿ ತಿಳಿಯುತ್ತಿದ್ದಂತೆಯೇ ಆಪ್ ಕಾರ್ಯಕರ್ತರು ನವದೆಹಲಿಯಲ್ಲಿನ ಬಿಜೆಪಿ ಪ್ರಧಾನ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಆಪ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಇದಲ್ಲದೇ ಗುಜರಾತ್‌ನ ಹಲವೆಡೆಯೂ ಬಿಜೆಪಿ-ಆಪ್ […]

ಗುಜರಾತ್‌ನಲ್ಲಿನ ರಾಮರಾಜ್ಯವನ್ನು ನೋಡಲು ಬಂದಿದ್ದೇನೆ: ಕೇಜ್ರಿವಾಲ್

Wednesday, March 5th, 2014
Arvind-Kejriwal

ಅಹ್ಮದಾಬಾದ್: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸುವುದಾಗಿ ಸುದ್ದಿ ಕೇಳಿಬರುತ್ತಿದ್ದಂತೆ, ಕೇಜ್ರಿವಾಲ್ ಇಂದಿನಿಂದ ಗುಜರಾತ್‌ನಲ್ಲಿ 4 ದಿನಗಳ ಪ್ರವಾಸ ಆರಂಭಿಸಿದ್ದಾರೆ. ಪ್ರಧಾನಿ ಅಭ್ಯರ್ಥಿಯಾಗಿರುವ ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಏನೆಲ್ಲಾ ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುವುದಕ್ಕಾಗಿಯೇ ತಾನು ಗುಜರಾತ್ ಪ್ರವಾಸ ಕೈಗೊಡಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಗುಜರಾತ್ ಸರ್ಕಾರ ಮತ್ತು ಮಾಧ್ಯಮಗಳು ಗುಜರಾತ್‌ನಲ್ಲಿ ರಾಮರಾಜ್ಯ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ. ಅವರು ಹೇಳುವಂತೆ ಇಲ್ಲಿ ವಿದ್ಯಾಭ್ಯಾಸದಲ್ಲಿ ಪ್ರಗತಿಯಾಗಿದೆ, ಆರೋಗ್ಯ ಸಮಸ್ಯೆಗಳು ನಿರ್ಮೂಲನೆಯಾಗಿವೆ, ಭ್ರಷ್ಟಾಚಾರ ಇಲ್ಲಿಲ್ಲ…ಆದ್ದರಿಂದ […]

ಕರ್ನಾಟಕದಲ್ಲಿ ಏ.17ಕ್ಕೆ ಎಂ.ಪಿ.ಚುನಾವಣೆ

Wednesday, March 5th, 2014
MP-Election

ನವದೆಹಲಿ: 2014ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 17ರಂದು ಒಂದೇ ಹಂತದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಗಾಗಿ ಮಾರ್ಚ್ 19ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ನಾಮಪತ್ರ ಹಿಂಪಡೆಯಲು ಮಾರ್ಚ್ 29 ಕಡೆಯ ದಿನವಾಗಿದ್ದು, ಏಪ್ರಿಲ್ 17ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ […]

ಲೋಕಸಭೆ ಚುನಾವಣೆ ದಿನಾಂಕ ಪ್ರಕಟ: ಏ.7ರಿಂದ ಮೇ, 12ರವರೆಗೆ ಮತದಾನ

Wednesday, March 5th, 2014
S.V.-Sampath

ನವದೆಹಲಿ: 2014ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು,  ಏಪ್ರಿಲ್ 7ರಿಂದ 9 ಹಂತಗಳಲ್ಲಿ 16ನೇ ಲೋಕಸಭೆಗೆ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಅವರು ಬುಧವಾರ ಹೇಳಿದ್ದಾರೆ. ಈ ಸಂಬಂಧ ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಪತ್, ಮೇ 31ಕ್ಕೆ 15ನೇ ಲೋಕಸಭೆಯ ಅವಧಿ ಅಂತ್ಯಗೊಳ್ಳಲಿದ್ದು, ಮೇ 31ರೊಳಗೆ ಚುನಾವಣಾ ಪ್ರಕ್ರಿಯೆಗಳು ಮುಗಿಯಬೇಕು ಮತ್ತು ಜೂನ್ 1ಕ್ಕೆ ಕೇಂದ್ರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಬೇಕಿದೆ ಎಂದು ಹೇಳಿದರು. ಏಪ್ರಿಲ್ 7ರಂದು […]

ಭಾರತ ಜಗತ್ತಿನ 3ನೇ ಅಪಾಯಕಾರಿ ದೇಶ..!

Tuesday, March 4th, 2014
India-is-a-dangerous

ನವದೆಹಲಿ: ಭಾರತ ಅಫ್ಘಾನಿಸ್ತಾನಕ್ಕಿಂತ ಅಪಾಯಕಾರಿ ದೇಶವಾಗಿದ್ದು, ನೀವು ಯಾವುದೇ ಕ್ಷಣದಲ್ಲೂ ಬೇಕಾದರು ಬಾಂಬ್ ಸ್ಫೋಟದಿಂದ ಸಾಯಬಹುದು. ಹೀಗಂತ ಸರ್ಕಾರಿ ದಾಖಲೆಗಳೇ ಹೇಳುತ್ತಿವೆ. ಭಾರತ ಜಗತ್ತಿನಲ್ಲಿ ಮೂರನೇ ಅಪಾಯಕಾರಿ ದೇಶವಾಗಿದ್ದು, ಜಗತ್ತಿನಲ್ಲಿ ಅತಿ ಹೆಚ್ಚು ಬಾಂಬ್ ಸ್ಫೋಟ ಸಂಭವಿಸುವ ದೇಶಗಳಲ್ಲಿ ಭಾರತ, ಇರಾಖ್ ಮತ್ತು ಪಾಕಿಸ್ತಾನದ ನಂತರದ ಸ್ಥಾನದಲ್ಲಿದೆ. ಯುದ್ಧದಿಂದ ತತ್ತರಿಸಿರುವ ಅಫ್ಘಾನಿಸ್ತಾನ ಮತ್ತು ಸಿರಿಯಾ ಸಹ ಭಾರತಕ್ಕಿಂತ ಉತ್ತಮ ಎಂದು ರಾಷ್ಟ್ರೀಯ ಬಾಂಬ್ ಅಂಕಿ-ಅಂಶ ಕೇಂದ್ರ(ಎನ್‌ಬಿಡಿಸಿ) ಬಿಡುಗಡೆ ಮಾಡಿರುವ ವರದಿ ಹೇಳುತ್ತಿದೆ. ಎನ್‌ಬಿಡಿಸಿ ಬಿಡುಗಡೆ ಮಾಡಿರುವ ವರದಿಯ […]

ಲೋಕಪಾಲ ಆಯ್ಕೆ ಸಮಿತಿ ಅಧ್ಯಕ್ಷ ನ್ಯಾ.ಥಾಮಸ್ ರಾಜಿನಾಮೆ

Tuesday, March 4th, 2014
Justice-KT-Thomas

ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಲೋಕಪಾಲ ಆಯ್ಕೆ ಮತ್ತು ಹುಡಕಾಟ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಕೆ.ಟಿ.ಥಾಮಸ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಸೋಮವಾರ ವರದಿಗಳು ತಿಳಿಸಿವೆ. ಕಳೆದ ವಾರವಷ್ಟೆ ಲೋಕಪಾಲರ ಆಯ್ಕೆ ಪ್ರಕ್ರಿಯೆಯಲ್ಲಿ ತಾವು ಪಾಲ್ಗೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆಹ್ವಾನವನ್ನು ಹಿರಿಯ ವಕೀಲ ಫಾಲಿ ನಾರಿಮನ್ ಅವರು ತಿರಸ್ಕರಿಸಿದ್ದರು. ಅಲ್ಲದೆ ಲೋಕಪಾಲ ಹುಡುಕಾಟ ಸಮಿತಿಯನ್ನು ಅರ್ಥಹೀನ ಮತ್ತು ಹಾಸ್ಯಾಸ್ಪದ ಎಂದು ಕರೆದಿದ್ದರು. ಇದೀಗ ಸಮತಿಯ ಅಧ್ಯಕ್ಷರೇ ರಾಜಿನಾಮೆ ನೀಡಿರುವುದರಿಂದ […]

ಜನರಲ್ ವಿ.ಕೆ.ಸಿಂಗ್ ಬಿಜೆಪಿಗೆ ಸೇರ್ಪಡೆ

Saturday, March 1st, 2014
VK-Singh

ನವದೆಹಲಿ: ಭೂಸೇನೆ ನಿವೃತ್ತ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ ಅವರು ಶನಿವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರಿದ್ದಾರೆ. ಇಂದು ನವದೆಹಲಿಯಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ವಿ.ಕೆ.ಸಿಂಗ್ ಅವರನ್ನು ಬಿಜೆಪಿ ರಾಷ್ಟ್ರಾದ್ಯಕ್ಷ ರಾಜನಾಥ್ ಸಿಂಗ್ ಅವರು ಹೂಗುಚ್ಛವನ್ನು ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. ಇದಕ್ಕೂ ಮೊದಲು ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿ ಮೆಮೋರಿಯಲ್ಗೆ ಭೇಟಿ ನೀಡಿದ್ದ ವಿ.ಕೆ.ಸಿಂಗ್ ಅವರು ಅಲ್ಲಿ ನೆರೆದಿದ್ದ ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಬಿಜೆಪಿ ಪಕ್ಷವನ್ನು ಸೇರುತ್ತಿರುವ ಕುರಿತು ಹೇಳಿಕೆ […]

ತೆಲಂಗಾಣ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ

Saturday, March 1st, 2014
Pranab-Mukherjee

ನವದೆಹಲಿ: ಆಂಧ್ರ ಪ್ರದೇಶವನ್ನು ವಿಭಜಿಸಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಮಾಡುವ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ಅಂಕಿತ ಹಾಕಿದ್ದಾರೆ. ಸಂಸತ್ತಿನ ಉಭಯ ಕಲಾಪಗಳಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದ್ದ ನೂತನ ತೆಲಂಗಾಣ ರಾಜ್ಯ ರಚನೆ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕಿದ್ದು, ಅಧಿಕೃತವಾಗಿ ದೇಶದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದೆ. ಫೆಬ್ರವರಿ 18ರಂದು ನಡೆದ ಲೋಕಸಭೆ ಕಲಾಪದಲ್ಲಿ ಅನುಮೋದನೆ ಪಡೆದಿದ್ದ ವಿಧೇಯಕಕ್ಕೆ ಕೊಂಚ ತಡವಾಗಿ ರಾಜ್ಯಸಭೆಯಲ್ಲಿ ಅಂಗೀಕಾರ ನೀಡಲಾಗಿತ್ತು. ಸೀಮಾಂಧ್ರ ಸಂಸದರ […]

ಚುನಾವಣೆ ಹೊಸ್ತಿಲಲ್ಲಿ ಭರವಸೆಗಳ ಸುಗ್ಗಿ, ಸರ್ಕಾರಿ ನೌಕರ, ಪಿಂಚಣಿದಾರರೇ ಟಾರ್ಗೆಟ್, ಇದು ಕೊಡುಗೈ ಸಂಪುಟ

Saturday, March 1st, 2014
K.H.-Muniyappa

ನವದೆಹಲಿ: ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಯುಪಿಎ ಸರ್ಕಾರ ತನ್ನ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮತದಾರರ ಓಲೈಕೆಗೆ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.10ರಷ್ಟು ಹೆಚ್ಚಳ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸದಾಗಿ 54 ಕೇಂದ್ರೀಯ ವಿದ್ಯಾಲಯ ಹಾಗೂ 3,500 ಮಾದರಿ ಶಾಲೆ, ಕೋಲಾರದಲ್ಲಿ ರೈಲು ಬೋಗಿ ಕಾರ್ಖಾನೆ ಸ್ಥಾಪನೆ ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳಿಗೆ ಒಪ್ಪಿಗೆ ಸೂಚಿಸಿದೆ. ಕೇಂದ್ರ ಸರ್ಕಾರಿ ನೌಕರರ ಓಲೈಕೆ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ನೌಕರರ ತುಟ್ಟಿ […]