Blog Archive

ಎಫ್‌ಡಿಐ, ಜಿಎಸ್‌ಟಿ ಇರಲಿ ಮಾರಕ ಕಾನೂನು ತೊಲಗಲಿ

Friday, February 28th, 2014
Narendra-Modi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಪಕ್ಷದ ಆರ್ಥಿಕ ನೀತಿಯನ್ನು ಬಹಿರಂಗಪಡಿಸಿದ್ದಾರೆ. ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಸರಕು ಹಾಗೂ ಸೇವೆಗಳ ತೆರಿಗೆ(ಜಿಎಸ್‌ಟಿ) ಪಕ್ಷದ ವಿರೋಧವಿಲ್ಲ ಎಂದಿದ್ದಾರೆ. ಜಿಎಸ್‌ಟಿ ಜಾರಿಗೆ ಸಂಬಂಧಿಸಿ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ, ಇದರ ಅನುಷ್ಠಾನಕ್ಕೆ ಬೇಕಾದ ಪೂರ್ವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಎಸ್‌ಟಿ ಜಾರಿಗೂ ಮುನ್ನ ಮಾಹಿತಿ ತಂತ್ರಜ್ಞಾನ ಎಲ್ಲೆಡೆ ಲಭ್ಯವಾಗಬೇಕಿದೆ. ಜತೆಗೆ, ರಾಜ್ಯ ಸರ್ಕಾರಗಳಿಗೆ ಹಣಕಾಸಿಗೆ ಸಂಬಂಧಿಸಿ ಒಂದಷ್ಟು ಕಳವಳಗಳಿವೆ. […]

ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಬಂಧನ

Friday, February 28th, 2014
Subrata-Roy

ನವದೆಹಲಿ: ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತಾ ರಾಯ್ ಅವರನ್ನು ಲಖನೌ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕಳೆದ ಬುಧವಾರ ರಾಯ್‌ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಲಖನೌ ಪೊಲೀಸರನ್ನು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹೂಡಿಕೆದಾರರಿಗೆ 20 ಸಾವಿರ ಕೋಟಿ ರುಪಾಯಿ ಮರುಪಾವತಿ ಮಾಡದ ಪ್ರಕರಣ ಸಂಬಂಧ ಕೋರ್ಟ್ ಮುಂದೆ ಹಾಜರಾಗುವಲ್ಲಿ ವಿಫಲರಾಗಿದ್ದ ರಾಯ್‌ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ರಾಯ್‌ರನ್ನು ಬಂಧಿಸಿ ಮಾರ್ಚ್ 4ರ ಮಧ್ಯಾಹ್ನ 2 ಗಂಟೆಗೆ […]

ಬಿಜೆಪಿ, ಕಾಂಗ್ರೆಸ್‌ಗೆ ಪರ್ಯಾಯ ರಂಗ ಸ್ಥಾಪನೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಇಲ್ಲ

Wednesday, February 26th, 2014
ಬಿಜೆಪಿ, ಕಾಂಗ್ರೆಸ್‌ಗೆ ಪರ್ಯಾಯ ರಂಗ ಸ್ಥಾಪನೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಇಲ್ಲ

ನವದೆಹಲಿ: ಕಾಂಗ್ರೆಸ್-ಬಿಜೆಪಿಯೇತರ,  ಜೆಡಿಎಸ್ ಸೇರಿದಂತೆ ಪ್ರಮುಖ ಹನ್ನೊಂದು ಪಕ್ಷಗಳನ್ನೊಳಗೊಂಡ ತೃತೀಯ ರಂಗ ಮಂಗಳವಾರ ಅಸ್ವಿತ್ವಕ್ಕೆ ಬಂದಿದೆ. ಭ್ರಷ್ಟ ಕಾಂಗ್ರೆಸ್ ಹಾಗೂ ಕೋಮುವಾದಿ ಬಿಜೆಪಿಯನ್ನು ಕೇಂದ್ರದಿಂದ ದೂರ ಇಡಲು ತೃತೀಯ ರಂಗ ರಚಿಸಿರುವುದಾಗಿ ಘೋಷಿಸಿರುವ ನಾಯಕರು, ಒಗ್ಗೂಡಿ ಚುನಾವಣೆ ಎದುರಿಸಲಿದ್ದಾರೆ. ಆದರೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡದಿರಲು ಮಂಗಳವಾರ ತ್ರಿಪುರ ಭವನದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಹುತೇಕ ಪಕ್ಷಗಳು ಬೇರೆ ಬೇರೆ ರಾಜ್ಯಗಳನ್ನು ಪ್ರತಿನಿಧಿಸುವುದರಿಂದ ಆಯಾ ಪ್ರದೇಶದಲ್ಲಿ ಸೀಟು ಹಂಚಿಕೆ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. […]

ಯೋಧರ ಮತದಾನ ಸುಪ್ರೀಂ ನೋಟಿಸ್

Tuesday, February 25th, 2014
Rajeev-Chandrasekhar

ನವದೆಹಲಿ: ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರದಲ್ಲೇ ಮತದಾನ ಮಾಡಲು ಅವಕಾಶ ನೀಡಬೇಕೆಂದು ಕೋರಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆಯೂ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ನೇತೃತ್ವದ ನ್ಯಾಯಪೀಠವು  ಸೂಚಿಸಿದೆ. ಮುಂಬರುವ ಚುನಾವಣೆಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರ ವ್ಯಾಪ್ತಿಯಲ್ಲೇ ಮತದಾನ ಮಾಡಲು ಅವಕಾಶ ನೀಡುವಂತೆ ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದರು. […]

ದೆಹಲಿಯಲ್ಲಿ ಅಗ್ನಿ ಆಕಸ್ಮಿಕ: ಐಐಟಿ ಕ್ಯಾಂಪಸ್‌ನ ಘಟನೆ

Monday, February 24th, 2014
Delhi-Campus

ನವದೆಹಲಿ : ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಐಐಟಿ) ಕ್ಯಾಂಪಸ್‌ನಲ್ಲಿ ಅಗ್ನಿ ಆಕಸ್ಮಿಕವಾಗಿರುವ ಘಟನೆ ಸೋಮವಾರ ವರದಿಯಾಗಿದ್ದು,  ಬಲ್ಲ ಮೂಲಗಳಿಂದ ತಿಳಿದುಬಂದಿರುವಂತೆ ಕೆಮೆಸ್ಟ್ರಿ ಲ್ಯಾಬ್‌ನಲ್ಲಿ ಉಂಟಾದ ಸಣ್ಣ ಪ್ರಮಾಣದ ನ್ಪೋಟದಿಂದ ಕಾಣಿಸಿಕೊಂಡ ಬೆಂಕಿ ಬಳಿಕ ಕಟ್ಟಡ ವಿವಿಧ ಕಡೆಗೆ ಹಬ್ಬಲಾರಂಭಿಸಿತು, ಬಳಿಕ ಈ ಬೆಂಕಿ ಪಕ್ಕದಲ್ಲಿಯೇ ಇದ್ದ ಹಾಸ್ಟೆಲ್‌ ಕಟ್ಟಡಕ್ಕೂ ಹಬ್ಬಿತು ಎಂದು ತಿಳಿದುಬಂದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕಾಲೇಜು ಕ್ಯಾಂಪಸ್ಸಿನಲ್ಲಿ ಹರಡಿಕೊಳ್ಳಲಾರಂಭಿಸಿದಂತೆ ಅಲ್ಲಿದ್ದ ವಿದ್ಯಾರ್ಥಿಗಳಲ್ಲಿ ಹಾಗೂ ಉಪನ್ಯಾಸಕ ವರ್ಗದಸರಲ್ಲಿ ಭೀತಿಯ ವಾತಾವರಣ ಮೂಡಲ ಕಾರಣವಾಯಿತು. ತಕ್ಷಣವೇ […]

‘ರಾಜೀವ್’ ಹಂತಕರ ಬಿಡುಗಡೆ: ಫೆ. 27ಕ್ಕೆ ವಿಚಾರಣೆ

Monday, February 24th, 2014
Rajeev-Gandhi

ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದ ತಮಿಳುನಾಡು ಸರ್ಕಾರ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಕೈಗೆತ್ತಿಕೊಳ್ಳಲಿದೆ. ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ್ದ ಸುಪ್ರೀಂಕೊರ್ಟ್ನ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಫೆ. 27ರಂದು ಸುಪ್ರೀಂಕೋರ್ಟ್ ನಡೆಸಲಿದೆ. ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ […]

ಲೋಕಸಮರದತ್ತ ನಂದನ್ ಚಿತ್ತ, ‘ಆಧಾರ್‌’ಗೆ ರಾಜಿನಾಮೆ

Friday, February 21st, 2014
Nandan-Nilekani

ನವದೆಹಲಿ: ವಿಶಿಷ್ಟ ಗುರುತಿನ ಪತ್ರ ಪ್ರಾಧಿಕಾರ(ಆಧಾರ್)ದ ಅಧ್ಯಕ್ಷ ಸ್ಥಾನಕ್ಕೆ ನಂದನ್ ನಿಲೇಕಣಿ ಅವರು ರಾಜಿನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದ ನಂದನ್ ನಿಲೇಕಣಿ ಅವರು ಯುಐಡಿಐ (ಆಧಾರ್) ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕರಾಗಿದ್ದ ನಂದನ್ ನಿಲೇಕಣಿ ಅವರನ್ನು 2009ರಲ್ಲಿ ಕೇಂದ್ರದ ಯುಪಿಎ ಸರ್ಕಾರ ‘ಆಧಾರ್‌’ ಯೋಜನೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ನಂತರ ಅವರು ತಮ್ಮ ಇನ್ಫೋಸಿಸ್ ಸಂಸ್ಥೆಯನ್ನು ತೊರೆದಿದ್ದರು. ದೇಶದ ಅತಿದೋಡ್ಡ ಗುರುತಿನ ಚೀಟಿ ಯೋಜನೆಯಾಗಿರುವ ‘ಆಧಾರ್‌’ ಯೋಜನೆ, […]

ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

Friday, February 21st, 2014
ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

ನವದೆಹಲಿ: ದೇಶಕ್ಕೆ ಇನ್ನೊಂದು ರಾಜ್ಯದ ಸಂತಸ. 29ನೇ ರಾಜ್ಯವಾಗಿ ತೆಲಂಗಾಣ ಉದಯಕ್ಕೆ ಗುರುವಾರ ರಾಜ್ಯಸಭೆ ಸಾಕ್ಷಿಯಾಯಿತು. ಮಂಗಳವಾರವಷ್ಟೇ ಲೋಕಸಭೆಯಲ್ಲಿ ತೆಲಂಗಾಣ ಮಸೂದೆಗೆ ಒಪ್ಪಿಗೆ ಸಿಕ್ಕಿದ್ದು, ಎರಡು ದಿನಗಳ ಹಗ್ಗಜಗ್ಗಾಟದ ನಡುವೆ ಗುರುವಾರ ರಾತ್ರಿ 08.07 ಗಂಟೆಗೆ ಹೊಸ ರಾಜ್ಯದ ಉದಯವಾಯಿತು. ಆದರೆ ಈ ಮಸೂದೆಗೆ ರಾಷ್ಟ್ರಪತಿ ಅಂಕಿತ ಬೇಕು. ಆಗಷ್ಟೇ ಈ ರಾಜ್ಯ ಉದಯವಾಗಿದೆ ಎಂಬುದು ಅಧಿಕೃತವಾಗುತ್ತದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಸಮರ ನಡೆದರೂ ಕೂಡ, ಮಸೂದೆಗೆ ಬೆಂಬಲ ನೀಡುತ್ತೇವೆ ಎಂಬ […]

ಹಿರಿಯರ ಮನೆ ಮಾನ ಮುಕ್ಕು

Thursday, February 20th, 2014
Rajya-Sabha

ನವದೆಹಲಿ: ಸದನದ ಬಾವಿಯಲ್ಲಿ ಗದ್ದಲ, ಘೋಷಣೆ, ರಾಜ್ಯಸಭೆ ಸೆಕ್ರೆಟರಿ ಜನರಲ್ ಶಂಷೇರ್ ಕೆ. ಶರೀಫ್‌ರಿಂದ ಬಲವಂತವಾಗಿ ಕಾಗದಪತ್ರ ಕಿತ್ತುಕೊಳ್ಳಲು ಯತ್ನ, ಉಪಸಭಾಪತಿಗಳಿಗೇ ಗದರಿದ ಸಂಸದರು, ಮೂರು ಬಾರಿ ಮುಂದೂಡಲ್ಪಟ್ಟ ಕಲಾಪ… ಇದು ತೆಲಂಗಾಣ ಮಸೂದೆಗೆ ಸಂಬಂಧಿಸಿ ರಾಜ್ಯಸಭೆಯಲ್ಲಿ ಕಂಡ ಘಟನಾವಳಿಗಳು. ಕೆಳಮನೆಯಲ್ಲಿ ಮಂಗಳವಾರವಷ್ಟೇ ನಾಟಕೀಯ ರೀತಿಯಲ್ಲಿ ಅಂಗೀಕಾರ ಪಡೆದಿದ್ದ ಮಸೂದೆಯನ್ನು ರಾಜ್ಯಸಭೆಯಲ್ಲಿ ಬುಧವಾರ ಮಂಡಿಸುವ ಸರ್ಕಾರದ ಪ್ರಯತ್ನ ಟಿಡಿಪಿ ಸಂಸದರ ಗದ್ದಲದಿಂದಾಗಿ ವಿಫಲವಾಗಿದೆ. ದಿನದ ಆರಂಭದಿಂದಲೇ ಕಲಾಪವನ್ನು ರಣರಂಗವಾಗಿ ಪರಿವರ್ತಿಸಿದ್ದ ಟಿಡಿಪಿ ಸಂಸದರು ಸದನದ ಬಾವಿಗೆ ನುಗ್ಗಿ […]

ರಾಜೀವ್ ಹಂತಕರ ಬಿಡುಗಡೆ ಏಕೆ?

Thursday, February 20th, 2014
Rahul-Gandhi

ನವದೆಹಲಿ/ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಿಡಿಯಾಗಿದ್ದಾರೆ. ಪ್ರಧಾನಮಂತ್ರಿಗಳ ಹಂತಕರನ್ನೇ ಬಿಡುಗಡೆ ಮಾಡಿದರೆ ಇನ್ನು ಜನಸಾಮಾನ್ಯರಿಗೆ ಹೇಗೆ ನ್ಯಾಯ ಸಿಗಲು ಸಾಧ್ಯ? ನಮ್ಮ ದೇಶದಲ್ಲಿ ಪ್ರಧಾನಿಗೂ ನ್ಯಾಯ ಸಿಗುವುದಿಲ್ಲವೇ? ನನ್ನ ತಂದೆಯ ಹಂತಕರಿಗೆ ಗಲ್ಲುಶಿಕ್ಷೆಯಾಗಬೇಕೆಂದು ನಾನೇನು ಆಗ್ರಹಿಸುತ್ತಿಲ್ಲ. ಅದರಿಂದ ನನ್ನ ತಂದೆ ಹಿಂತಿರುಗಿ ಬರುವುದೂ ಇಲ್ಲ. ಇದು ಇಡೀ ದೇಶಕ್ಕೆ ಸಂಬಂಧಪಟ್ಟ ವಿಚಾರ. ತಮಿಳುನಾಡು ಸರ್ಕಾರದ ಈ ನಿರ್ಧಾರದಿಂದ […]