ದಕ್ಷಿಣ ಕನ್ನಡ ಜಿಲ್ಲೆಗೆ 2010 – 11ನೇ ಸಾಲಿನ ನಿರ್ಮಲ ಗ್ರಾಮ ಪ್ರಶಸ್ತಿ

Thursday, March 22nd, 2012
Nirmal Gram Puraskar

ಮಂಗಳೂರು: ದೇಶದ ಪ್ರತಿಷ್ಠೆಯ 2010 – 11ನೇ ಸಾಲಿನ ನಿರ್ಮಲ ಗ್ರಾಮ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಪಾತ್ರವಾಗಿದ್ದು, ಗುರುವಾರ ಹೊಸದಿಲ್ಲಿಯ ವಿಜ್ಞಾನ ಮಂದಿರದಲ್ಲಿ ಜರಗಿದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ದೇವಿ ಪಾಟೀಲ್‌ ಅವರಿಂದ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಭಟ್‌ ಕೆ.ಟಿ. ಪ್ರಶಸ್ತಿ ಸ್ವೀಕರಿಸಿದರು. ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕೆ.ಎನ್‌. ವಿಜಯ ಪ್ರಕಾಶ್‌, ಉಪಾಧ್ಯಕ್ಷೆ ಧನಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು. 2005, ಅ. 2ರಂದು ದ. ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಸ್ವತ್ಛತಾ ಆಂದೋಲನಕ್ಕೆ […]