ಬೆಂಬಲಿಗರ ಬಂಡಾಯಕ್ಕೆ ಮಣಿದ ಬಿಎಸ್‌ವೈ, ರಾಜನಾಥ್ ಸಿಂಗ್‌ಗೆ ಪತ್ರ

Monday, March 10th, 2014
Yaddyurappa

ಬೆಂಗಳೂರು: ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಮಾತೃ ಪಕ್ಷಕ್ಕೆ ಮರುಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಡೆಗೂ ತಮ್ಮ ಬೆಂಬಲಿಗರ ಬಂಡಾಯಕ್ಕೆ ಮಣಿದು, ಅತಂತ್ರವಾಗಿರುವ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ಪತ್ರದಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ. ಇತ್ತೀಚಿಗಷ್ಟೆ ಯಡಿಯೂರಪ್ಪ ಅವರ ಕೆಲವು ಬೆಂಬಲಿಗರನ್ನು ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ, ಅವರ ವಿರುದ್ಧವೇ ಬಂಡಾಯವೆದ್ದಿದ್ದರು.