ಆತ್ಮಗೌರವ, ಸ್ವಾಭಿಮಾನ, ನಿಸ್ವಾರ್ಥ ಸೇವೆಯಿಂದ ಶಕ್ತಿಶಾಲಿ ರಾಷ್ಟ್ರ ನಿರ್ಮಾಣವಾಗುತ್ತದೆ : ಮೋಹನ್ ಭಾಗವತ್

Monday, February 4th, 2013
RSS Vibhag Sanghik

ಮಂಗಳೂರು : ಯುವಜನತೆಯೇ ದೇಶದ ಶಕ್ತಿ, ಯುವಜನತೆ ಕೈಗೆತ್ತಿಕೊಂಡ ಸದಾಶಯದ ಕಾರ್ಯಗಳೆಲ್ಲವೂ ಗುರಿ ತಲುಪುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮಾರ್ಗದರ್ಶನವನ್ನು ನೀಡುತ್ತಿದೆ. ಆತ್ಮಗೌರವ, ಸ್ವಾಭಿಮಾನ, ಪರರ ಹಿತಕ್ಕಾಗಿ ನಿಸ್ವಾರ್ಥ ಸ್ಪಂದನದ ಕರ್ತವ್ಯವನ್ನು ಪ್ರತಿಯೋರ್ವನೂ ನಿರ್ವಹಿಸಿದಾಗ ತೇಜಸ್ವಿಯಾದ ಶಕ್ತಿಶಾಲಿ ರಾಷ್ಟ್ರ ನಿರ್ಮಾಣವಾಗುತ್ತದೆ. ಎಂದು ರಾಷ್ಟ್ರೀಯ ಸ್ವಯಂಸೇವ ಸಂಘದ ಸರಸಂಘಚಾಲಕ್‌ ಮೋಹನ್‌ ಭಾಗವತ್‌ ಹೇಳಿದರು. ಬಜಪೆ ಸಮೀಪದ ಕೆಂಜಾರು ಬಳಿ ಭಾನುವಾರ ಸಂಘದ ಮಂಗಳೂರು ವಿಭಾಗದ ವತಿಯಿಂದ ನಡೆದ ಆರ್‌ಎಸ್‌ಎಸ್‌ನ ಸಾಂಘಿಕ್ ಕಾರ್ಯಕ್ರಮದಲ್ಲಿ  ಭಾಗವಹಿಸಿ ಅವರು ಮಾತನಾಡಿದರು. ಸಚ್ಚ್ಯಾರಿತ್ರ್ಯದಿಂದ ಕೂಡಿದ ಸಂಘಟನೆಯಿಂದ […]