ಗೀತಾ ಸ್ಪರ್ಧೆಗೆ ಶಿವರಾಜ್ ಕುಮಾರ್ ಬೆಂಬಲ

Tuesday, March 11th, 2014
Geetha-Shivarajkumar

ಬೆಂಗಳೂರು: ಪತ್ನಿ ಗೀತಾ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನನ್ನ ಬೆಂಬಲ ಇದೆ ಎಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಇದರೊಂದಿಗೆ ಡಾ.ರಾಜ್ ಕುಟುಂಬದ ಸದಸ್ಯರೊಬ್ಬರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ. ಗೀತಾ ಸ್ಪರ್ಧೆಗೆ ನಮ್ಮ ಕುಟುಂಬ ವಿರೋಧವಿಲ್ಲ. ಅವರಿಗೆ ನನ್ನ ಹಾಗೂ ಕುಟುಂಬದ ಸಂಪೂರ್ಣ ಬೆಂಬಲ ಇದ್ದು, ಅಗತ್ಯ ಬಿದ್ದರೆ ತಾವು ತಮ್ಮ ಪತ್ನಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಗೀತಾ ಅವರ ಸ್ಪರ್ಧೆ ಕುರಿತು […]

ಲೋಕಸಮರ: ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ

Friday, February 21st, 2014
Geetha-Shivaraj-Kumar

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಶಿವಮೊಗ್ಗ ಕ್ಷೇತ್ರ ಈ ಬಾರಿ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಡಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಅವರ ವಿರುದ್ಧ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿದ್ದ ಜೆಡಿಎಸ್ ಅಂತಿಮವಾಗಿ ಗೀತಾ […]

ಶಿವಮೊಗ್ಗದಲ್ಲೇ ಸ್ಪರ್ಧೆ: ಬಿಎಸ್‌ವೈ

Wednesday, February 5th, 2014
yeddyurappa

ಶಿಕಾರಿಪುರ: ಮಾತೃಪಕ್ಷಕ್ಕೆ ಮರಳಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬಿಜೆಪಿ ಹೈಕಮಾಂಡ್ ಹಾಗೂ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರು ಕಣಕ್ಕಿಳಿಯುವಂತೆ ಭಾರಿ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಸ್ಪರ್ಧಿಸುವ ಅನಿವಾರ್ಯತೆ ಎದುರಾಗಿದ್ದರಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ. ಮಂಗಳವಾರ ಶಿಕಾರಿಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಹಿಂದಿನ ಎಲ್ಲ ಕಹಿ ಘಟನೆಗಳನ್ನು ಮರೆತು ಒಂದಾಗಿ, ಒಗ್ಗಟ್ಟಾಗಿ, ಸಾಮೂಹಿಕ ನಾಯಕತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಲಾಗುವುದು. ರಾಜ್ಯಾದ್ಯಂತ […]