ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

Thursday, March 27th, 2014
Shoba Karandlaje

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಡಾ. ಮುದ್ದು ಮೋಹನ್‌ ಅವರಿಗೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಬಿಜೆಪಿಯ ಕಾರ್ಕಳ ಶಾಸಕರಾದ ಸುನಿಲ್‌ ಕುಮಾರ್‌,ಚಿಕ್ಕಮಗಳೂರು ಶಾಸಕ ಸಿಟಿ ರವಿ , ತರಿಕೆರೆಯ ಮಾಜಿ ಶಾಸಕ ಸುರೇಶ್‌ , ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಉಪಸ್ಥಿತರಿದ್ದರು.

ನಗರ ಪ್ರದೇಶದಲ್ಲಿ 1ಗಂಟೆ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ವಿದ್ಯುತ್ ಇಲ್ಲ

Tuesday, October 11th, 2011
Shobha Karandlaje

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ನಗರ ಪ್ರದೇಶದಲ್ಲಿ 1ಗಂಟೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಇಂದು ಶಕ್ತಿಭವನದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಯದ ಕುರಿತು ವಿವರಣೆ ನೀಡಿದರು.ಕಲ್ಲಿದ್ದಲು ಕೊರತೆಯಿಂದ ಇಂದಿನಿಂದಲೇ ರಾಜ್ಯಾದ್ಯಂತ ಸಂಜೆ 1ಗಂಟೆ ಪವರ್ ಕಟ್ ಮಾಡುವುದಾಗಿ ಹೇಳಿದರು. ಆದರೆ […]