ಸಿದ್ದರಾಮಯ್ಯ ಅವರನ್ನು ಮೂರ್ಖ ಎಂದು ಕರೆದಿರುವ ಯಡಿಯೂರಪ್ಪ ಅವರ ಹೇಳಿಕೆ ಖಂಡನೀಯ: ರೈ

Saturday, November 11th, 2017
ramanath rai

ಮಂಗಳೂರು :ಮುಖ್ಯ ಮಂತ್ರಿ ಸಿದ್ಧರಾಮಯ್ಯ ವಿರುದ್ಧ ಯಡಿಯೂರಪ್ಪ ಅವರು ಸಡಿಲ ಭಾಷೆ ಬಳಸಿರುವುದು ಅರಣ್ಯ ಸಚಿವರ ಸಿಟ್ಟಿಗೆ ಕಾರಣ. ಬಿಜೆಪಿ ನಾಯಕ ಯಡಿಯೂರಪ್ಪ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕಿಡಿ ಕಾರಿದ್ದಾರೆ. ರಮಾನಾಥ ರೈ ‘ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೂರ್ಖ ಎಂದು ಕರೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆ ಖಂಡನೀಯ. ಮುಂಬರುವ ದಿನಗಳಲ್ಲಿ ಯಾರು ಮೂರ್ಖರು ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಪ್ರಜ್ಞಾವಂತ ಜನರೇ ಉತ್ತರ […]

ಮಗನನ್ನು ಮತದಾರರಿಗೆ ಪರಿಚಯಿಸಿದ್ದರಲ್ಲಿ ತಪ್ಪೇನಿದೆ : ಸಿದ್ದರಾಮಯ್ಯ

Monday, October 10th, 2016
cm airport

ಮಂಗಳೂರು: ಕಾವೇರಿ ಕಣಿವೆ ವ್ಯಾಪ್ತಿಯ ಜಲಾಶಯಗಳನ್ನು ಪರಿಶೀಲನೆ ನಡೆಸಿರುವ ಕೇಂದ್ರ ತಜ್ಞರ ತಂಡಕ್ಕೆ ರಾಜ್ಯದ ಸಂಕಷ್ಟ ಪರಿಸ್ಥಿತಿ ಅರ್ಥವಾಗಿದ್ದು, ರಾಜ್ಯಕ್ಕೆ ನ್ಯಾಯ ಸಿಗುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದ.ಕ. ಜಿಲ್ಲೆಯಲ್ಲಿ ರವಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಬಜಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಬಗ್ಗೆ ಎರಡೂ ರಾಜ್ಯಗಳಲ್ಲಿರುವ ವಸ್ತುಸ್ಥಿತಿ ಅಧ್ಯಯನ ನಡೆಸಲು ಒಂದು ತಜ್ಞರ ತಂಡ ಕಳುಹಿಸುವಂತೆ ನಾವೇ ಕೇಳಿದ್ದು. ಕರ್ನಾಟಕ ಹಾಗೂ ತಮಿಳುನಾಡಿನ […]

ಮೋದಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದ್ದು ಬಿಜೆಪಿಯಲ್ಲ, ಆರೆಸ್ಸೆಸ್: ಸಿದ್ದು

Thursday, March 13th, 2014
Siddaramaiah

ಬೆಂಗಳೂರು: ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ್ದು ಬಿಜೆಪಿಯಲ್ಲ. ಬದಲಾಗಿ ಆರೆಸ್ಸೆಸ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದೆ. ಮೋದಿ ಆರೆಸ್ಸೆಸ್ ಮನುಷ್ಯ. ಆರೆಸ್ಸೆಸ್ ಹೇಳಿದಂತೆ ಕೇಳುತ್ತಾರೆ ಹೊರತು ಬಿಜೆಪಿ ಹೇಳಿದಂತಲ್ಲ. ಬಿಜೆಪಿಯಲ್ಲಿ ಸಾಕಷ್ಟು ಹಿರಿಯ ನಾಯಕರಿದ್ದರು. ಲಾಲ್‌ಕೃಷ್ಣ ಆಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರನ್ನೆಲ್ಲ ಬಿಟ್ಟು ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಮಾಡಲು ಆರೆಸ್ಸೆಸ್ಸೇ ಕಾರಣ. ಚುನಾವಣೆ ಸಿದ್ಥತೆಯ ನಡುವೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಸಾಮೂಹಿಕ ಸಂದರ್ಶನ ನೀಡಿದರು. ಸಂದರ್ಶನದುದ್ದಕ್ಕೂ ದ್ವಂದ್ವ ನೀತಿಯ ಮಾತುಗಳಿಗೆ […]

ಸಿಎಂ ಸಿದ್ದರಾಮಯ್ಯಗೆ ಬಿತ್ತು ಟಾರ್ಗೆಟ್ ಇಪ್ಪತ್ತು

Wednesday, March 12th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆ ಇನ್ನೂ ಕಾವೇರದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಪಿಂಗ್ ಮೂಡಿನಲ್ಲಿರುವಾಗ ಕಾಂಗ್ರೆಸ್ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಹಾಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ 20 ಸ್ಥಾನಗಳನ್ನು ಪಕ್ಷಕ್ಕಾಗಿ ಗೆಲ್ಲಿಸಿಕೊಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದುಗೆ ಸ್ಪಷ್ಟ ಟಾರ್ಗೆಟ್ ನೀಡಿದೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯಗೆ ಬಿತ್ತು ಟಾರ್ಗೆಟ್ ಇಪ್ಪತ್ತು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಡಾ […]

ಸಿದ್ದರಾಮಯ್ಯ ಸಮಾಜವನ್ನು ಅಚ್ಚುಕಟ್ಟಾಗಿ ಒಡೆಯುತ್ತಿದ್ದಾರೆ

Tuesday, March 11th, 2014
HD-Deve-Gowda

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಜಾತಿ ಸಮಾವೇಶವನ್ನೂ ಬಾಕಿ ಉಳಿಸಿಲ್ಲ. ಸಮಾಜವನ್ನು ಒಡೆಯುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳಲ್ಲಿನ ಸಣ್ಣ ಸಮಾಜಗಳನ್ನೂ ಭಾಗ ಮಾಡಿದ್ದಾರೆ. ಮಠಗಳಿಗೆ ಸಮಾಜದ ಹೆಸರಿನಲ್ಲಿ 50 ಲಕ್ಷ, ಒಂದು ಕೋಟಿ ಹಣ ನೀಡಿ ಅವರನ್ನೂ ವಿಭಜನೆ ಮಾಡಿದ್ದಾರೆ. ಇವರ ಉದ್ದೇಶ ಒಂದೇ- ಸಮಾಜ ಒಡೆಯುವುದು. ಹಿಂದುಳಿದವರನ್ನು ಬಾಳುವುದಕ್ಕೂ ಬಿಡುತ್ತಿಲ್ಲ. ಈ ಎಲ್ಲ ಸಮಾಜಗಳನ್ನು ಛಿದ್ರ ಛಿದ್ರ ಮಾಡಲು ಮುಂದಾಗಿದ್ದಾರೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಸರ್ವನಾಶ ಮಾಡುತ್ತೇನೆ ಎಂದಿದ್ದಾರೆ. ಅವರ ಬಳಿ ಅಧಿಕಾರ […]

ಸಿಎಂ ತವರಿಗೆ ಸುವರ್ಣ ಭಾಗ್ಯ

Saturday, March 8th, 2014
Siddaramaiah

ಮೈಸೂರು: ಮೈಸೂರು ತಾಲೂಕು ಸಿದ್ದರಾಮನಹುಂಡಿಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಒಂಬತ್ತೂವರೆ ತಿಂಗಳುಗಳಾಗಿದ್ದರೂ ಈವರೆಗೆ ಸ್ವಗ್ರಾಮಕ್ಕೆ ಭೇಟಿ ನೀಡಲು ಆಗಿಲ್ಲ. ಆದರೆ ಅಭಿವೃದ್ಧಿ ಭಾಗ್ಯ ದೊರೆತಿದೆ. ಸಿದ್ದರಾಮನಹುಂಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಸುವರ್ಣ ಗ್ರಾಮೋದಯ ಯೋಜನೆಯಲ್ಲಿ ಅಭಿವೃದ್ಧಿಪಡಿಸಲು 9.60 ಕೋಟಿ ಬಿಡುಗಡೆ ಮಾಡಲಾಗಿದೆ. ಸುವರ್ಣ ಗ್ರಾಮೋದಯ ಯೋಜನೆಯ 5ನೇ ಹಂತದಲ್ಲಿ ಮೈಸೂರು ತಾಲೂಕಿಗೆ ರಾಜ್ಯ ಸರ್ಕಾರ 6.86 ಕೋಟಿ ನಿಗದಿಪಡಿಸಿತ್ತು. ಇದಕ್ಕಾಗಿ ಒಟ್ಟು 32,845 ಜನಸಂಖ್ಯೆ ಇರುವ 16 ಗ್ರಾಮಗಳನ್ನು ಆಯ್ಕೆ ಮಾಡಲಾಗಿತ್ತು. ಈ ಪೈಕಿ ಸಿದ್ದರಾಮನಹುಂಡಿ ಹಾಗೂ […]

ಅಕ್ರಮಕ್ಕೆ ಅಡ್ಡಿಯಾದ ಅಧಿಕಾರಿಗೆ ರಜೆ ಸಜೆ!

Thursday, March 6th, 2014
Siddaramaiah

ಬೆಂಗಳೂರು: ರಜೆ ಬೇಕೆ, ಪ್ರಾಮಾಣಿಕವಾಗಿ ಕೆಲಸ ಮಾಡಿ! ರಾಜ್ಯ ಸರ್ಕಾರ ಪ್ರಾರಂಭಿಸಿರುವ ನೂತನ ‘ರಜಾ ಭಾಗ್ಯ’ ಯೋಜನೆಯ ಪ್ರಥಮ ಷರತ್ತಿದು! ಕಾಂಗ್ರೆಸ್ ಪ್ರಣಾಳಿಕೆ ಅಥವಾ ಬಜೆಟ್‌ನಲ್ಲಿ ಘೋಷಿಸದೇ ಅನುಷ್ಠಾನಕ್ಕೆ ತಂದಿರುವ ವಿನೂತನ ಯೋಜನೆ!! ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಭ್ರಷ್ಟಾಚಾರ ನಿಗ್ರಹದ ರೀತಿಯಿದು! ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಒಂದು ದಿನ ರಜೆ ಸಿಗುವುದೇ ದೊಡ್ಡ ಮಾತು. ಆದರೆ ಒಬ್ಬ ಹಿರಿಯ ಹಾಗೂ ಪ್ರಾಮಾಣಿಕ […]

ನೀತಿ ಸಂಹಿತೆ ಜಾರಿ ಭಯ ಕಡತಗಳಿಗೆ ತರಾತುರಿ ಸಹಿ, 18 ಕೈಗಾರಿಕೆಗಳಿಗೆ ಸಿದ್ದು ಗ್ರೀನ್ ಸಿಗ್ನಲ್

Wednesday, March 5th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಯೋಜನೆಗಳ ಕಡತ ವಿಲೇವಾರಿ ತ್ವರಿತಗೊಳಿಸಿದ್ದು, ಮಂಗಳವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ 13770 ಕೋಟಿ ಮೊತ್ತದ 18 ಕೈಗಾರಿಕಾ ಕಾಮಗಾರಿಗಳಿಗೆ ಒಪ್ಪಿಗೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ನಂತರ ಯೋಜನೆ ಆರಂಭಕ್ಕೆ ಅಡ್ಡಿಯಾಗುವ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ವಿಶೇಷ ಒತ್ತು ನೀಡುತ್ತಿದ್ದಾರೆ. ಮಂಗಳವಾರ ಇದಕ್ಕೆ ಇನ್ನಷ್ಟು ವೇಗ ನೀಡಿದ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಹಲವು […]

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆಯಾಗಿ ಜಯಮಾಲ?

Tuesday, March 4th, 2014
Jayalalitha

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆಯಾಗಿ ಹಿರಿಯ ನಟಿ ಡಾ. ಜಯಮಾಲ ಅವರು ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಜಯಮಾಲ ಅವರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಒಂದೆರಡು ದಿನಗಳಲ್ಲಿ ಸರ್ಕಾರದ ಅಧಿಕೃತ ಅದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಬಿಜೆಪಿ ಸರ್ಕಾರ ವಿಧಾನ ಪರಿಷತ್ ಸದಸ್ಯರೂ ಆಗಿರುವ ನಟ ತಾರಾ ಅವರನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, […]

ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ, ಸಾಧನೆಗಳ ಸರಮಾಲೆ: ಸಿಎಂ

Wednesday, February 26th, 2014
Siddaramaiah

ಬೆಂಗಳೂರು: ತಮ್ಮ ಬಜೆಟ್‌ನ್ನು ಸುಳ್ಳಿನ ಸರಮಾಲೆ ಎಂದಿದ್ದ ಪ್ರತಿಪಕ್ಷದ ನಾಯಕರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ. ಸಾಧನೆಗಳ ಸರಮಾಲೆ ಎಂದು ಬುಧವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಸಿಎಂ, ನಮ್ಮದು ನಡಿದಂತೆ ನಡೆಯುವ ಸರ್ಕಾರ. ಮೊದಲು ನೀವು ಬಜೆಟ್ ನೋಡುವ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಿ ಎಂದು ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು. ನನ್ನ ಬಜೆಟ್ ಸುಳ್ಳಿನ ಸರಮಾಲೆ […]