ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವಿಧಿವಶ

Tuesday, December 10th, 2013
Srikantadatta Narasimharaja Wodeyar

ಬೆಂಗಳೂರು : ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಅವರು ಮಂಗಳವಾರ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಒಂದು ವಾರದ ಹಿಂದೆ ಎದೆನೋವಿನ ಕಾರಣ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಮಹಾರಾಜರನ್ನು ಕರೆ ತರಲಾಗಿತ್ತು. ಆಸ್ಪತ್ರೆಗೆ ಬರುವಷ್ಟರಲ್ಲೇ ಒಡೆಯರ್ ಅವರು ವಿಧಿವಶರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿರುವ ತುರ್ತು ನಿಗಾ ಘಟಕದಲ್ಲಿ ಒಡೆಯರ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಒಡೆಯರ್ […]