ಧರ್ಮಸ್ಥಳ: ಹೆಗ್ಗಡೆಯವರ 69ನೆ ವರ್ಷದ ಜನ್ಮ ದಿನಾಚರಣೆ

Friday, November 25th, 2016
veerendra heggade

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 69ನೆ ವರ್ಷದ ಜನ್ಮ ದಿನಾಚರಣೆಯನ್ನು ಶುಕ್ರವಾರ ಧರ್ಮಸ್ಥಳದಲ್ಲಿ ಬೀಡಿನಲ್ಲಿ ಸರಳವಾಗಿ ಆಚರಿಸಲಾಯಿತು. ಊರ-ಪರವೂರ ಅಭಿಮಾನಿಗಳು ಬಂದು ಹೆಗ್ಗಡೆಯವರಿಗೆ ಭಕ್ತಿ ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಮಾಜಿ ಸಚಿವರಾದ ಅಭಯಚಂದ್ರ ಜೈನ್, ಮೂಡಬಿದ್ರೆಯ ಡಾ. ಎಂ. ಮೋಹನ ಆಳ್ವ, ಜಿಲ್ಲಾ ಕೃಷಿಕ ಸಮಾಜದ ಆಧ್ಯಕ್ಷ ಎಸ್. ಡಿ. ಸಂಪತ್ ಸಾಮ್ರಾಜ್ಯ, ಮಂಗಳೂರಿನ ಕೆ. ರಾಜವರ್ಮ ಬಳ್ಳಾಲ್, ಎಸ್.ಡಿ.ಎಂ. ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎ. ರಾಜೇಂದ್ರ ಶೆಟ್ಟಿ ಮೊದಲಾದ ಗಣ್ಯರು […]

ಶಿವ ಧ್ಯಾನದಿಂದ ದೋಷ ನಿವಾರಣೆ: ಡಾ. ಹೆಗ್ಗಡೆ

Friday, February 28th, 2014
Dr.-Veerendra-Heggade

ಬೆಳ್ತಂಗಡಿ: ಶಿವ ಧ್ಯಾನದಿಂದ ಮಂಗಳ ಕಾರ್ಯಗಳು ನಡೆದು ದೋಷಗಳು ನಿವಾರಣೆಯಾಗುತ್ತವೆ. ಸಾಧಕನಿಗೆ ಶಿವ ಒಲಿಯುತ್ತಾನೆ ಎಂದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಗುರುವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣದ ಕಾರ್ಯಕ್ಕೆ ಚಾಲನೆ ನೀಡಿ ಅವರು ಸಂದೇಶ ನೀಡಿದರು. ಹಿಂದಿನ ಕಾಲದಲ್ಲಿ ದೇವರ ದರ್ಶನಕ್ಕೆ ಬರುವುದು ಕಷ್ಟಕರವಾಗಿತ್ತು. ಪಾದಯಾತ್ರೆ ಮೂಲಕವೋ, ರೈಲುಗಳ ಮೂಲಕವೋ ಬರಬೇಕಾಗಿತ್ತು. ಅದಕ್ಕೆ ಬೇಕಾದ ಖರ್ಚುವೆಚ್ಚಗಳನ್ನು ವರ್ಷಗಳಿಂದ ಕೂಡಿಡಬೇಕಾಗಿತ್ತು. ಹೀಗೆ ಕಷ್ಟಪಟ್ಟು ಬಂದ ನಂತರ ಮಾಡಿದ ದೇವರ ದರ್ಶನದಿಂದ ಅಪಾರ […]