ಆ್ಯಂಟನಿ ವೇಸ್ಟ್ ಕಂಪನಿಗೆ ಸೇರಿದ ಕಾರ್ಮಿಕರಿಂದ ಸಂಬಳಕ್ಕೆ ಪ್ರತಿಭಟನೆ

Wednesday, February 22nd, 2017
waste company

ಮಂಗಳೂರು :  ಮನಪಾ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಯ ಗುತ್ತಿಗೆ ವಹಿಸಿರುವ ಆ್ಯಂಟನಿ ವೇಸ್ಟ್ ಕಂಪನಿಗೆ ಸೇರಿದ ಕಾರ್ಮಿಕರು ಸಕಾಲದಲ್ಲಿ ಸಂಬಳ ಪಾವತಿಯಾಗದಿರುವುದನ್ನು ವಿರೋಧಿಸಿ ಬುಧವಾರ ಬಿಎಂಎಸ್ ಆಶ್ರಯದಲ್ಲಿ ಪಾಲಿಕೆ ಕಚೇರಿ ಎದುರು ಧರಣಿ ನಡೆಸಿದರು. ಈ ಮಧ್ಯೆ ತ್ಯಾಜ್ಯ ವಿಲೇವಾರಿಯಾಗದೆ ನಗರದೆಲ್ಲೆಡೆ ಮನೆ ಹಾಗೂ ಬೀದಿಗಳಲ್ಲಿ ಕಸ ರಾಶಿ ಬಿದ್ದಿದ್ದು ಮಧ್ಯಾಹ್ನದ ಬಳಿಕ ವಿಲೇವಾರಿ ಆರಂಭಗೊಂಡಿದೆ. ತ್ಯಾಜ್ಯ ವಿಲೇವಾರಿಯ ಗುತ್ತಿಗೆ ವಹಿಸಿರುವ ಆ್ಯಂಟನಿ ವೇಸ್ಟ್ ಕಂಪೆನಿಯಲ್ಲಿ 785 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಇವರಲ್ಲಿ 630 ಮಂದಿ ತ್ಯಾಜ್ಯ […]

ರಾಜಶ್ರೀಯೊಂದಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾರ್ತಿಕ್ ಗೌಡ

Saturday, October 31st, 2015
karthik Gowda

ಕುಶಾಲನಗರ : ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡರ ಮಗ ಕಾರ್ತಿಕ್ ಗೌಡ ಅವರು ಉದ್ಯಮಿ ಕೂಡಕಂಡಿ ನಾಣಯ್ಯ ಅವರ ಪುತ್ರಿ ರಾಜಶ್ರೀ(ಸ್ವಾತಿ)ಯೊಂದಿಗೆ ಸಪ್ತಪದಿ ತುಳಿಯುವ ಮೂಲಕ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕುಶಾಲನಗರದ ರೈತ ಸಹಕಾರ ಭವನದ ಅಲಂಕೃತ ಭವ್ಯ ಮಂಟಪದಲ್ಲಿ ಶುಕ್ರವಾರ ಬೆಳಿಗ್ಗೆ 11.20 ಗಂಟೆಗೆ ಸಲ್ಲುವ ಧನುರ್ ಲಗ್ನದ ಶುಭ ಘಳಿಗೆಯಲ್ಲಿ ಕಾರ್ತಿಕ್ ಗೌಡ ಅವರು ರಾಜಶ್ರೀಗೆ ಮಾಂಗಲ್ಯಧಾರಣೆ ಮಾಡಿದರು. ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವೆ ಮೇನಕಾ ಗಾಂಧಿ, ಯಡಿಯೂರಪ್ಪ, […]