ಮತ್ತೆ ತೀವ್ರಗೊಂಡ ಕಾಡಾನೆ ಹಾವಳಿ-ಜೀವನ ಪರ್ಯಂತರದ ಕೃಷಿ ಕಣ್ಣೆದುರೇ ವ್ಯರ್ಥ
Sunday, May 8th, 2016ಮುಳ್ಳೇರಿಯಾ: ಕೃಷಿಯನ್ನು ತಪಸ್ಸಿನಂತೆ ಸ್ವೀಕರಿಸಿ ಜೀವನ ಪರ್ಯಂತರದ ಸಾಧನೆ,ಸಾಮರ್ಥ್ಯವನ್ನು ಧಾರೆಯೆರೆದು ಪೋಶಿಸಿ ಬೆಳೆಸಿದ ಬೆಳೆ ನಿಮಿಷಗಳಲ್ಲಿ ನಾಶವಾಗುವುದನ್ನು ಯಾವ ಕೃಷಿಕನೂ ಸಹಿಸಲಾರ. ಆದರೆ ಇಂತಹ ನೋವುಗಳನ್ನು ಕಳೆದ ಹಲವು ವರ್ಷಗಳಿಂದ ಅನುಭವಿಸುತ್ತಿರುವ ನೂರಾರು ಕೃಷಿ ಕುಟುಂಬ ಸಮಸ್ಯೆಗಳನ್ನು ಅನುಭವಿಸುತ್ತಾ ಕಣ್ಣೀರಿಡುತ್ತಿರುವುದು ಮುಂದುವರಿದಿದೆ. ಮುಳ್ಳೇರಿಯಾ ಸಮೀಪದ ಕೊಟ್ಟಂಗುಳಿಯ ಇ.ರಾಘವನ್ ನಾಯರ್ ರವರ ತೋಟಕ್ಕೆ ಭಾನುವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು ಭೀಕರ ಧಾಳಿ ನಡೆಸಿ ಲಕ್ಷಾಂತರ ರೂ.ಗಳ ಕೃಷಿ ನಾಶಗೈದಿದೆ. 2 ಮರಿ ಆನೆಗಳ ಜೊತೆಗೆ 6 ದೊಡ್ಡ […]