ಕುತ್ತಾರಿನಲ್ಲಿ ಯಡಿಯೂರಪ್ಪಅವರ 75 ನೇ ಜನ್ಮದಿನಾಚರಣೆ

Friday, March 2nd, 2018
Raveendra shetty

ಕುತ್ತಾರು : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಅವರ 75 ನೇ  ಜನ್ಮದಿನಾಚರಣೆಯ ಪ್ರಯುಕ್ತ ಕುತ್ತಾರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ, ಆರೋಗ್ಯ ಚೀಟಿ ವಿತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಧಾರ್ಮಿಕ ಪರಿಷತ್ ಜಿಲ್ಲಾ ಮಾಜಿ ಸದಸ್ಯ ಕೆ.ಟಿ ಸುವರ್ಣ ಮಾತನಾಡಿ ಯಡಿಯೂರಪ್ಪನವರಿಗೆ ಸಾಕಷ್ಟೂ ಅಭಿಮಾನಿಗಳಿದ್ದಾರೆ. ಅವರ ಜನ್ಮದಿನವನ್ನು ಮನಃಪೂರ್ವಕ […]

ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು : ಯಡಿಯೂರಪ್ಪ

Friday, June 23rd, 2017
Yedurappa

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೇಂದ್ರದಿಂದ ರಾಜ್ಯಕ್ಕೆ ಒಂದು ಲಕ್ಷದ 13ಸಾವಿರ ಕೋಟಿ ಅನುದಾನ ಬಂದಿದೆ. ರಾಜ್ಯ ಸರ್ಕಾರ ಮತ್ತೆ ಒಂದು ಲಕ್ಷ ಕೋಟಿ ಸಾಲ ಮಾಡಿದೆ. ಇಷ್ಟಿದ್ದರೂ ಕೂಡ ರೈತರ 50 ಸಾವಿರ ಮಾತ್ರ ಸಾಲ ಮನ್ನಾ ಮಾಡಲಾಗಿದೆ. ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು. ಆದರೂ ಬಿಜೆಪಿ ಮಾಡಿದ ಹೋರಾಟಕ್ಕೆ ಮಣಿದು ಸಾಲ ಮನ್ನಾ ಮಾಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದರು. […]