ಎತ್ತಿನಹೊಳೆ ವಿರೋಧಿಗಳ ಪರ ಬ್ಯಾಟಿಂಗ್!

Saturday, March 8th, 2014
U.T.-Kadar

ಮಂಗಳೂರು: ಎತ್ತಿನಹೊಳೆ ಯೋಜನೆ ಪರವಾಗಿ ಮಾತನಾಡಿಲ್ಲ. ನೆಲ, ಜಲ ಉಳಿವಿಗಾಗಿ ಹೋರಾಟ ನಡೆಸಿದ ದಕ್ಷಿಣ ಕನ್ನಡದ ಜನರನ್ನು ಸಂಘಟನೆಗಳನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ‘ಎತ್ತಿನಹೊಳೆ ಯೋಜನೆ ಪರವಾಗಿದ್ದಾರೆ’ ಎಂಬ ಆರೋಪಗಳನ್ನು ಅಲ್ಲಗಳೆದ ಯು.ಟಿ.ಖಾದರ್ ದಕ್ಷಿಣ ಕನ್ನಡ ಜಿಲ್ಲೆ ಎತ್ತಿನಹೊಳೆ  ಹೋರಾಟ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೋಲಾರದಲ್ಲಿ ಈ ಕುರಿತು ತಾವು ಯಾವುದೇ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಅಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಹತ್ತು ನಿಮಿಷಗಳ ವೀಡಿಯೋ […]

ಸಮಗ್ರ ಅಧ್ಯಯನ ನಡೆಸದೆ ‘ಎತ್ತಿನಹೊಳೆ’ ಅನುಷ್ಠಾನ ಸರಿಯಲ್ಲ: ಯಡಿಯೂರಪ್ಪ

Wednesday, March 5th, 2014
Yeddyurappa

ಪುತ್ತೂರು: ಎತ್ತಿನಹೊಳೆ ಯೋಜನೆ ಸಾಧಕ- ಬಾಧಕಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸದೆ ಯೋಜನೆ ಅನುಷ್ಠಾನಗೊಳಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಎತ್ತಿನಹೊಳೆ ಯೋಜನೆಯನ್ನು ಸಮಗ್ರ ರಾಜ್ಯವನ್ನು ಕಣ್ಮುಂದೆ ಇಟ್ಟುಕೊಂಡು ರೂಪಿಸಬೇಕಾಗಿದೆ. ಅನುಷ್ಠಾನದ ಬಗ್ಗೆ ಕರಾವಳಿ ಹಾಗೂ ಬಯಲುಸೀಮೆ ಜಿಲ್ಲೆಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಚಿಂತನೆ ನಡೆಸುವುದು ಅಗತ್ಯವಾಗಿದೆ ಎಂದ ಅವರು ಬೆಂಗಳೂರು, ಚಿಕ್ಕಬಳ್ಳಾಪುರ, […]

ರೈತರಿಂದ ಮುತ್ತಿಗೆ : ಸಚಿವ ಯುಟಿ ಖಾದರ್

Tuesday, March 4th, 2014
U.T.-Khadar

ಕೋಲಾರ: ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್‌ ಎತ್ತಿನ ಹೊಳೆ ಯೋಜನೆ ವಿರುದ್ಧ ಮಾತನಾಡಿದ ಅವರಿಗೆ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು  ಮುತ್ತಿಗೆ ಹಾಕಿದ ಘಟನೆ ಮಂಗಳವಾರ ನಡೆದಿದೆ. ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾ  ಪಂಚಾಯತ್‌ ಕಛೇರಿಗೆ ಆಗಮಿಸುತ್ತಿದ್ದ ಸಚಿವರ ವಿರುದ್ಧ  ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು  ಕಪ್ಪು ಬಾವುಟ  ಪ್ರದರ್ಶಿಸಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಖಾದರ್‌ ಅವರು ಎತ್ತಿನಹೊಳೆ ಯೋಜನೆಜಾರಿಗೆ ನನ್ನ ಸಹಮತವಿದೆ,ಯೋಜನೆ […]