ಬೆಂಗಳೂರು : ಕರ್ನಾಟಕ ವಿಧಾನ ಸಭೆಯ ಗೌರವಾನ್ವಿತ ಸ್ಪೀಕರ್ ಯು. ಟಿ. ಖಾದರ್ ರವರನ್ನು ಭೇಟಿ ಮಾಡಿದ ನಗರಾಭಿವೃದ್ಧಿ ಪ್ರಾಧಿಕಾರ ದ ಒಕ್ಕೂಟ ದ ಅಧ್ಯಕ್ಷ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚಿಸಲು ಮತ್ತುಇತ್ತೀಚೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಜಾರಿ ಗೊಳಿಸಿದ 9/11, ವಿನ್ಯಾಸ ನಕ್ಷೆ, ಪರವಾನಿಗೆ ಮೊದಲಾದ ನಿಯಮಗಳಲ್ಲಿ ಸರಳೀಕರಣ ಗೊಳಿಸುವಂತೆ ಸoಬoದ ಪಟ್ಟವರಿಗೆ ಶಿಫಾರಸ್ಸು ಮಾಡುವಂತೆ ವಿನಂತಿಸಲಾಯಿತು.
ಕೂಡಲೇ ಸ್ಪಂದಿಸಿದ ಸ್ಪೀಕರ್ ರವರು ನಗರಾಭಿವೃದ್ಧಿ ಸಚಿವರಿಗೆ ಮತ್ತು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಯವರಿಗೆ ಪತ್ರ ಬರೆದಿರುತ್ತಾರೆ ಎಂದು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಸದಾಶಿವ ಉಳ್ಳಾಲ್ ಮತ್ತು ಮುಸ್ತಫ ಸುಳ್ಯ ತಿಳಿಸಿರುತ್ತಾರೆ

ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸಂಕ್ಷಿಪ್ತ ಮುಖ್ಯಾಂಶಗಳು, ಸುದ್ದಿಗಳು