ಮಂಗಳೂರು : ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಡಾ. ಆನಂದ್ ಕೆ. ಅವರಿಗೆ ವರ್ಗಾವಣೆಯಾಗಿದ್ದು, ವಿಜಯಪುರ ಜಿಲ್ಲಾಧಿಕಾರಿಯಾಗಿ ಸರಕಾರ ಅವರನ್ನು ನಿಯೋಜಿಸಿದೆ.
ಡಾ. ಆನಂದ್ ಕೆ ಅವರ ವರ್ಗಾವಣೆಯಿಂದ ತೆರವಾಗಲಿರುವ ದ.ಕ. ಜಿ.ಪಂ ಸಿಇಒ ಹುದ್ದೆಗೆ 2021ರ ಬ್ಯಾಚ್ನ ಐಎಎಸ್ ಅಧಿಕಾರಿ ಹಾಗೂ ಮಡಿಕೇರಿ ಉಪವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿರುವ ನರ್ವಾಡೆ ವಿನಾಯಕ್ ಕರ್ಭಾರಿ ಅವರನ್ನು ನಿಯೋಜಿಸಲಾಗಿದೆ.
ವಿನಾಯಕ್ ಖರ್ಬರಿ ಈ ಹಿಂದೆ ಮಡಿಕೇರಿಯ ಉಪವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.2021 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಖರ್ಬರಿ, ತಮ್ಮ ಹಿಂದಿನ ಹುದ್ದೆಗಳಿಂದ ಆಡಳಿತಾತ್ಮಕ ಅನುಭವವನ್ನು ಪಡೆದುಕೊಂಡಿದ್ದು, ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು